Homeರಾಷ್ಟ್ರೀಯನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ...

ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

- Advertisement -
- Advertisement -

ಬಿಜೆಪಿಯ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ನವೆಂಬರ್‌ 26ರ ಸಂವಿಧಾನ ದಿನವನ್ನು ‘‘ಸಂವಿಧಾನ ಸಮರ್ಪಣಾ ದಿನ”ವೆಂದು ಕರೆದಿದ್ದು, ಈ ವರ್ಷದ ಆಚರಣೆಯನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ ಆಚರಿಸುವಂತೆ ಸೂಚಿಸಿದೆ. ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದ ದಿನದಂದು ಒಕ್ಕೂಟ ಸರ್ಕಾರವು ಸುಳ್ಳು ನಿರೂಪಣೆ ಮೂಲಕ “ಭಾರತದ ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’’ ನಡೆಸುತ್ತಿದೆ ಎಂಬ ಅರೋಪ ವ್ಯಕ್ತವಾಗಿದೆ.

ನವಂಬರ್ 9ರಂದು ಬಿಜೆಪಿ ಸರ್ಕಾರದ ಕ್ಯಾಬಿನೆಟ್‌ ಸೆಕ್ರೆಟರಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಕಚೇರಿ ಹಾಗೂ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು, ಈ ಬಾರಿಯ ನವೆಂಬರ್‌ 26ರ ಸಂವಿಧಾನ ಸಮರ್ಪಣಾ ದಿನವನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ “ಜಗತ್ತಿನಲ್ಲಿರುವ ಪ್ರಜಾಪ್ರಭುತ್ವ ಹುಟ್ಟಿದ್ದು ಭಾರತದಲ್ಲಾಗಿದೆ” ಎಂಬ ವಿಷಯವನ್ನು ಸಮರ್ಥಿಸಿಕೊಂಡು ದೇಶಾದ್ಯಂತ ಆಚರಿಸಬೇಕೆಂದು ಸೂಚಿಸಿದೆ. ಇಷ್ಟೆ ಅಲ್ಲದೆ ಈ ಆಚರಣೆಯನ್ನು ಹೇಗೆ ಆಚರಿಸಬೇಕು ಎಂದು ಇಂಡಿಯನ್ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ (ICHR) ತಯಾರಿಸಿರುವ ಟಿಪ್ಪಣಿಯನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ICHR ತಯಾರಿಸಿರುವ ಈ ಟಿಪ್ಪಣಿಯೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದು, ದೇಶವು ಶತಮಾನಗಳ ಕಾಲದಿಂದಲೂ ನರಳುತ್ತಿರುವ ಜಾತಿ ಪದ್ದತಿಯನ್ನು ಇತಿಹಾಸದ ಸುಳ್ಳು ನಿರೂಪಣೆಯೊಂದಿಗೆ ಇದರಲ್ಲಿ ಹೇಳಲಾಗಿದೆ.

ICHR ಟಿಪ್ಪಣಿಯಲ್ಲಿ ಏನಿದೆ?

ವೇದ, ಪುರಾಣ, ಉಪನಿಷತ್‌, ಭಗವದ್ಗೀತೆ ಕಾಲದಲ್ಲೆ ಭಾರತದಲ್ಲಿ ಪ್ರಜಾಪ್ರಭುತ್ವ ಇತ್ತು. 2 ಸಾವಿರ ವರ್ಷಗಳಿಂದ ನಡೆಯುತ್ತಿರುವ ವಿದೇಶಿ ದಾಳಿಗಳ ನಡುವೆಯು ಪಂಚಾಯತಿ ಕಟ್ಟೆ, ಖಾಪ್ ಪಂಚಾಯತ್‌‌‌ ಈ ಪ್ರಜಾಪ್ರಭುತ್ವನ್ನು ಹಿಂದೂ ಸಂಸ್ಕೃತಿ ಉಳಿಸಿಕೊಂಡು ಬಂದಿದೆ ಎಂದು ICHR ಟಿಪ್ಪಣಿಯಲ್ಲಿ ಹೇಳಿದೆ.

ಅದಾಗ್ಯೂ, ಖಾಪ್‌ ಪಂಚಾಯತ್‌ಗಳು ಜಾತಿ ಶ್ರೇಣೀಕೃತ ವ್ಯವಸ್ಥೆಯ ಭಾಗವಾಗಿದ್ದು ಇಂದಿಗೂ ಅವು ಭಾರತದಲ್ಲಿ ಜಾತಿ ಪದ್ದತಿಯನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಲೆ, ಜಾತಿ ದೌರ್ಜನ್ಯ ಎಸಗುತ್ತಲೆ ಇವೆ ಸಾಬೀತಾಗಿದೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಕೂಡಾ ಇವುಗಳು ಹೆಣ್ಣು ಮಕ್ಕಳನ್ನು ಮತ್ತು ಮಹಿಳೆಯವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಬಗ್ಗೆ ಕೂಡಾ ವರದಿಯಾಗಿತ್ತು. ಇದನ್ನೂ ಓದಿ: ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಚಿಂತಕ ಶಿವಸುಂದರ್‌ ಅವರು, “ಇದು ಆರೆಸ್ಸೆಸ್ ಸರಸಂಘಚಾಲಕ ಗೋಲ್ವಾಲ್ಕರ್ ಪ್ರತಿಪಾದನೆಯಾಗಿದೆ. ಅವರು, ‘ಜಾತಿ ವ್ಯವಸ್ಥೆಯೇ ಈ ದೇಶದ ಅಸ್ಮಿತೆ. ಅದು ಸಡಿಲವಾಗಿದ್ದರಿಂದಲೇ ಭಾರತದ ಈಶಾನ್ಯ ಮತ್ತು ವಾಯುವ್ಯ ಪ್ರಾಂತ್ಯಗಳಲ್ಲಿ ಪರದೇಸಿ ಧರ್ಮಗಳು ನೆಲಸುವಂತಾಯಿತು’ ಎಂದು ಅವರ ಬಂಚ್ ಆಫ್‌ ಥಾಟ್ಸ್‌‌ನಲ್ಲಿ ಬರೆದುಕೊಂಡಿದ್ದಾರೆ. ಈಗ ಮೋದಿ ಸರ್ಕಾರ ಯಥಾವತ್ ಅದೇ ಮಾತನ್ನು ಸಂವಿಧಾನ ದಿನದಂದು ಪ್ರಚಾರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಇತಿಹಾಸದ ಬಗ್ಗೆ ಸಂಶೋಧನೆ ನಡೆಸುವ ಸಂಸ್ಥೆಯಾಗಿರುವ ICHR ಬಿಹಾರದ ರಾಖಿಗರಿಯಲ್ಲಿ ಇತ್ತೀಚೆಗೆ ನಡೆದ ಸಂಶೋಧನೆಯ ಬಗ್ಗೆ ತನ್ನ ಟಿಪ್ಪಣಿಯಲ್ಲಿ ಸುಳ್ಳು ಬರೆದುಕೊಂಡಿದೆ. ICHR ತನ್ನ ಟಿಪ್ಪಣಿಯಲ್ಲಿ, “ಇತ್ತೀಚಿಗೆ ರಾಖಿಗರಿ ಸಂಶೋಧನೆಯಲ್ಲೂ ಭಾರತದ ವೈದಿಕ ನಾಗರೀಕತೆ 5 ಸಾವಿರ ವರ್ಷಗಳಷ್ಟು ಹಿಂದಿನದ್ದೆಂದೂ, ಆ ಕಾಲದಲ್ಲೂ ಪ್ರಜಾತಾಂತ್ರಿಕ ವ್ಯವಸ್ಥೆ ಇತ್ತೆಂದು ಸಾಬೀತಾಗಿದೆ” ಎಂದು ಉಲ್ಲೇಖಿಸಿದೆ.

ಆದರೆ ವಾಸ್ತವದಲ್ಲಿ, ರಾಖಿಗರಿ ಸಂಶೋಧನೆಯು ಹರಪ್ಪಾ ನಾಗರಿಕತೆಗೂ ವೇದ ನಾಗರಿಕತೆಯ ಆರ್ಯರಿಗೂ ಸಂಬಂಧವಿಲ್ಲ ಎಂದು ಸಾಬೀತಾಗಿದೆ. ರಾಖಿಗರಿ ನಾಗರಿಕರೆ ದ್ರಾವಿಡ ನಾಗರೀಕತೆಯೆ ಹೊರತು ವೇದ ನಾಗರಿಕತೆಯಲ್ಲ ಎಂದು ಸಂಶೋಧನೆ ಸಾಬೀತು ಮಾಡಿದೆ. ರಾಖಿಗರಿಯಲ್ಲಿ ಪತ್ತೆಯಾದ ಅಸ್ಥಿಪಂಜರದ DNA ಇದನ್ನ ಪುಷ್ಠಿಕರಿಸಿದ್ದು, ಸಿಂಧೂ ಕಣಿವೆ ನಾಗರಿಕತೆಯನ್ನು ಕಟ್ಟಿರುವವರು ‘ಋಗ್ವೇದ ಕಾಲದ ಆರ್ಯ’ರಲ್ಲ ಎಂಬುದನ್ನು ಈ ಸಂಶೋಧನೆ ಹೇಳಿದೆ. ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಇಷ್ಟೆ ಅಲ್ಲದೆ ICHR ತನ್ನ ಟಿಪ್ಪಣಿಯಲ್ಲಿ ಭಗವದ್ಗೀತೆಯನ್ನು ತಪ್ಪಾಗಿ ವೈಭವೀಕರಿಸಿದ್ದು, “ಭಗವದ್ಗೀತೆ ವೇದದ ಪ್ರಜಾತಾಂತ್ರಿಕತೆಯ ಭಾಗವಾಗಿ ಮಾನವನ ನಡತೆಯಲ್ಲಿ ಜ್ಞಾನ, ಶ್ರದ್ಧೆ , ಕ್ರಿಯೆ ಮತ್ತು ಗುಣಗಳು ವ್ಯಕ್ತವಾಗಬೇಕು ಎಂದು ಪ್ರತಿಪಾದಿಸುತ್ತದೆ” ಎಂದು ಬರೆದಿದೆ.

ಇದನ್ನು ವಿರೋಧಿಸಿರುವ ಶಿವಸುಂದರ್‌ ಅವರು, “ಅಂಬೇಡ್ಕರ್ ಅವರು ಸ್ಪಷ್ಟಪಡಿಸುವಂತೆ , ಭಗವದ್ಗೀತೆಯು ಜಾತಿ ಆಧಾರಿತ ಶ್ರೇಣೀಕರಣವನ್ನು ಪ್ರತಿಪಾದಿಸುವ ಮನುಸ್ಮೃತಿಯ ತಾತ್ವಿಕ ಸಮರ್ಥನೆಯಾಗಿದೆ. ಅದರಲ್ಲಿ ಭೋಧಿಸಲಾಗಿರುವ ಜ್ಞಾನ, ಗುಣ ಮತ್ತು ಕ್ರಿಯೆಗಳೆಲ್ಲವೂ ಹುಟ್ಟಿನಿಂದಲೇ ತೀರ್ಮಾನವಾಗಿರುತ್ತದೆ ಎಂಬ ಜಾತಿ ಶ್ರೇಣೀಕರಣದ ತಾರತಮ್ಯ ತತ್ವವನ್ನೇ ಹೇಳುತ್ತದೆ” ಎಂದು ಹೇಳಿದ್ದಾರೆ. ಮೋದಿ ಸರ್ಕಾರ ಇದನ್ನು ಭಾರತದ ಸನಾತನ ಪ್ರಜಾತಂತ್ರ ಎಂದು ಆಚರಿಸಲು ಆದೇಶಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಭಾರತದಲ್ಲಿ ಹುಟ್ಟಿನ ಆಧಾರದಲ್ಲಿ ಸಂಪತ್ತು, ಜ್ಞಾನ ಮತ್ತು ರಾಜ್ಯಅಧಿಕಾರಗಳು ಒಂದೆಡೆ ಕೇಂದ್ರೀಕರಣಗೊಂಡಿಲ್ಲ ಎಂದು ICHR ತನ್ನ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದು, “ಇದು ಜಗತ್ತಿನ ಇತರ ಪ್ರಾಚೀನ ಪ್ರಜಾತಂತ್ರಗಳಾದ ಗ್ರೀಸ್ ಮತ್ತು ರೋಮನ್ ಪ್ರಜಾತಂತ್ರಕ್ಕೂ ಭಾರತದ ವೈದಿಕ ಪ್ರಜಾತಂತ್ರಕ್ಕೂ ಇದ್ದ ದೊಡ್ಡ ವ್ಯತ್ಯಾಸವಾಗಿದೆ” ಎಂದು ಹೇಳಿದೆ.

ಇದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಶಿವಸುಂದರ್‌ ಅವರು, “ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದು ಇರಬಹುದೇ? ಜಗತ್ತಿನಲ್ಲಿ ಬೇರೆಲ್ಲೂ ಇಲ್ಲದ ಹುಟ್ಟಿನ ಆಧಾರದ ಜಾತಿ ವ್ಯವಸ್ಥೆ, ಜಾತಿ ತಾರತಮ್ಯ ಇರುವುದು ಭಾರತದ ಬ್ರಾಹ್ಮಣಿಯ ಸಾಮಾಜಿಕ ವ್ಯವಸ್ಥೆಯಲ್ಲಿ ಮಾತ್ರ. ಸಂಪತ್ತು, ಅಧಿಕಾರ ಮತ್ತು ಜ್ಞಾನವನ್ನು ದಲಿತರಿಂದ ಮತ್ತು ಶೂದ್ರರಿಂದ, ಮಹಿಳೆಯರಿಂದ ಕಸಿದು ಕೇವಲ ಬ್ರಾಹ್ಮಣಿಯ ಮೇಲ್ಜಾತಿಗಳ ಖಾಸಗಿ ಆಸ್ತಿಯನ್ನಾಗಿ ಮಾಡಿದ್ದು ಭಾರತದ ವೇದ-ಪುರಾಣ-ಶಾಸ್ತ್ರ-ಸ್ಮೃತಿ-ಶ್ರುತಿ ಗಳನ್ನಾಧರಿಸಿದ ಈ ದೇಶದ ಹಿಂದೂ ಬ್ರಾಹ್ಮಣಿಯ ಜಾತಿ ವ್ಯವಸ್ಥೆಯಾಗಿದೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಂಧೂ ನಾಗರಿಕತೆ ಕುರಿತ ವಿಜ್ಞಾನದ ಹೊಸ ಸಂಶೋಧನೆಗಳೂ… ಸತ್ಯ ತಿರುಚುವ ಪತ್ರಿಕೆಗಳೂ… ಸುಳ್ಳು ಹೇಳಿತೇಕೆ ವಿಜಯ ಕರ್ನಾಟಕ

ಚಿಂತಕ ಶಿವಸುಂದರ್‌ ಅವರು ವೈರಲ್ ಬರಹವನ್ನು ಓದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ಪ್ರಜಾತಂತ್ರದ ಜನನಿ ನವಂಬರ್ 26 ಆಚರಣೆಗಳು ಇವೆಲ್ಲವೂ ಮುಂದಿನ ಚುನಾವಣೆಯನ್ನ ಎದುರಿಟ್ಟುಕೊಂಡು ಮಾಡುವ ಆಚರಣೆಗಳ ವಿನಹ ಭಾರತದಲ್ಲಿ ನರಳಾಡುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನ ಮೇಲೆತ್ತುವ ಕೆಲಸವಾಗಲಿ ಇತರ ಅಭಿವೃದ್ಧಿ ಕೆಲಸವಾಗಲಿ, ನಗಣ್ಯ ಈ ಸರಕಾರಕ್ಕೆ ಎಲ್ಲವೂ ನಾವೆಲ್ಲ ನೋಡುವಾಗ ಇದು ಪ್ರಜಾಪ್ರಭುತ್ವ ರಾಷ್ಟ್ರವಾಗದೆ ಏಕಪ್ರಭುತ್ವ ರಾಷ್ಟ್ರವಾಗಿದೆ ಅಂತ ನನಗನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...