Homeಮುಖಪುಟಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಭಯಭೀತಗೊಂಡಿದೆ: ಡಿಜಿಪಬ್

ಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಭಯಭೀತಗೊಂಡಿದೆ: ಡಿಜಿಪಬ್

ಸ್ವತಂತ್ರ ಮಾಧ್ಯಮಗಳಿಗೆ ನಿಧಿ ನೀಡುವ ಸಂಸ್ಥೆ ಮೇಲಿನ ಐಟಿ ದಾಳಿಗೆ ಡಿಜಿಟಲ್ ಮಾಧ್ಯಮ ಒಕ್ಕೂಟ ಡಿಜಿಪಬ್‌ ತೀವ್ರ ಆಕ್ರೋಶ

- Advertisement -
- Advertisement -

ಬೆಂಗಳೂರಿನಲ್ಲಿರುವ ಇಂಡಿಪೆಂಡೆಂಟ್ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್, ಸರ್ಕಾರೇತರ ಸಂಸ್ಥೆ ಆಕ್ಸ್‌ಫ್ಯಾಮ್ ಇಂಡಿಯಾ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಥಿಂಕ್ ಟ್ಯಾಂಕ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ‘ಸ್ವತಂತ್ರ ಪತ್ರಿಕೋದ್ಯಮ ಮತ್ತು ಸಂಶೋಧನೆಯ ಮೇಲಿನ ದಾಳಿಯಾಗಿದೆ’ ಎಂದು ಡಿಜಿಟಲ್ ಮಾಧ್ಯಮ ಸಮೂಹವಾದ ‘ಡಿಜಿಪಬ್‌’ ಗುರುವಾರ ಹೇಳಿದೆ.

ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ 11 ಡಿಜಿಟಲ್ ಸುದ್ದಿ ಸಂಸ್ಥೆಗಳ ಸಂಘವಾಗಿದೆ. “ನಮ್ಮ ಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಎಷ್ಟು ಭಯಭೀತಗೊಂಡಿದೆ ಎಂದು ಈ ದಾಳಿಗಳು ತೋರಿಸುತ್ತವೆ” ಎಂದು ಡಿಜಿಪಬ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ, ಆದಾಯ ತೆರಿಗೆ ಅಧಿಕಾರಿಗಳು ಸೆಂಟರ್ ಫಾರ್ ಪಾಲಿಸಿ ರಿಸರ್ಚ್, ಆಕ್ಸ್‌ಫ್ಯಾಮ್ ಇಂಡಿಯಾ ಮತ್ತು ಇಂಡಿಪೆಂಡೆಂಟ್ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಕುರಿತು ಇಲಾಖೆಯು ಇನ್ನೂ ಹೇಳಿಕೆಯನ್ನು ನೀಡಿಲ್ಲ. ಆದರೆ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು, “ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯಿದೆಯ ಮೂಲಕ ಪಡೆದ ಹಣದ ರಸೀದಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ‘ಡಿಜಿಪಬ್’

ಈ ದಾಳಿಗಳನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಈ ಕ್ರಮಗಳ ಹಿಂದಿನ ಕಾರಣಗಳನ್ನು ತಿಳಿಸಲು ಆದಾಯ ತೆರಿಗೆ ಇಲಾಖೆಗೆ ಕರೆ ನೀಡಿರುವುದಾಗಿ ಡಿಜಿಪಬ್ ಗುರುವಾರ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ದಾಳಿಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಡಿಜಿಪಬ್ ನೆನಪಿಸಿಕೊಂಡಿದೆ.

“ಆರೋಪಗಳು ಅಥವಾ ಸಾಕ್ಷ್ಯಗಳ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ, ಸಾರ್ವಜನಿಕ ಸೇವಾ ಪತ್ರಿಕೋದ್ಯಮದಲ್ಲಿ ತೊಡಗಿರುವ ಸಂಸ್ಥೆಗಳನ್ನು ಬೆದರಿಸಲು ಮತ್ತು ಕಿರುಕುಳ ನೀಡಲು ಆದಾಯ ತೆರಿಗೆ ತಂಡಗಳನ್ನು ಬಳಸಲಾಗುತ್ತಿದೆ. ಇದು ಮಾನವ ಸಂಪನ್ಮೂಲಗಳ ಲಜ್ಜೆಗೆಟ್ಟ ಪ್ರಯತ್ನವಾಗಿದೆ” ಎಂದು ಡಿಜಿಪಬ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ದಿಕ್ಕೆಟ್ಟ ಕಾಲದ ನಿಜದನಿ ನವಮಾಧ್ಯಮ; ಇಂದು ಕಾವಲು ಕಾಯುತ್ತಿರುವ ಮಾಧ್ಯಮಗಳು ಯಾವುವು?

ಡಿಜಿಪಬ್ ಸ್ವತಂತ್ರ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್ ಹಲವಾರು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳನ್ನು ಬೆಂಬಲಿಸುತ್ತದೆ. ಮಸುಕಾದ ಸುದ್ದಿ ಮಾಧ್ಯಮಗಳ ಈ ಸಂದರ್ಭದಲ್ಲಿ ಈ ರೀತಿಯ ಮಾಧ್ಯಮಗಳು ತೀರಾ ಅಗತ್ಯವಿದೆ ಎಂದು ಡಿಜಿಪಬ್ ಹೇಳಿದೆ.

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮತ್ತು ಆಕ್ಸ್‌ಫ್ಯಾಮ್ ಒದಗಿಸಿದ ಮಾಹಿತಿಯು ಸಾಮಾಜಿಕ-ಆರ್ಥಿಕ ವಿಷಯಗಳ ಒಳನೋಟವನ್ನು ನೀಡುತ್ತದೆ ಎಂದು ಅದು ಹೇಳಿದೆ. “ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಇದೆಲ್ಲವೂ ಮುಖ್ಯವಾಗಿದೆ” ಎಂದು ಡಿಜಿಪಬ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...