Homeಮುಖಪುಟಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಭಯಭೀತಗೊಂಡಿದೆ: ಡಿಜಿಪಬ್

ಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಭಯಭೀತಗೊಂಡಿದೆ: ಡಿಜಿಪಬ್

ಸ್ವತಂತ್ರ ಮಾಧ್ಯಮಗಳಿಗೆ ನಿಧಿ ನೀಡುವ ಸಂಸ್ಥೆ ಮೇಲಿನ ಐಟಿ ದಾಳಿಗೆ ಡಿಜಿಟಲ್ ಮಾಧ್ಯಮ ಒಕ್ಕೂಟ ಡಿಜಿಪಬ್‌ ತೀವ್ರ ಆಕ್ರೋಶ

- Advertisement -
- Advertisement -

ಬೆಂಗಳೂರಿನಲ್ಲಿರುವ ಇಂಡಿಪೆಂಡೆಂಟ್ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್, ಸರ್ಕಾರೇತರ ಸಂಸ್ಥೆ ಆಕ್ಸ್‌ಫ್ಯಾಮ್ ಇಂಡಿಯಾ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಥಿಂಕ್ ಟ್ಯಾಂಕ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ‘ಸ್ವತಂತ್ರ ಪತ್ರಿಕೋದ್ಯಮ ಮತ್ತು ಸಂಶೋಧನೆಯ ಮೇಲಿನ ದಾಳಿಯಾಗಿದೆ’ ಎಂದು ಡಿಜಿಟಲ್ ಮಾಧ್ಯಮ ಸಮೂಹವಾದ ‘ಡಿಜಿಪಬ್‌’ ಗುರುವಾರ ಹೇಳಿದೆ.

ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ 11 ಡಿಜಿಟಲ್ ಸುದ್ದಿ ಸಂಸ್ಥೆಗಳ ಸಂಘವಾಗಿದೆ. “ನಮ್ಮ ಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಎಷ್ಟು ಭಯಭೀತಗೊಂಡಿದೆ ಎಂದು ಈ ದಾಳಿಗಳು ತೋರಿಸುತ್ತವೆ” ಎಂದು ಡಿಜಿಪಬ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ, ಆದಾಯ ತೆರಿಗೆ ಅಧಿಕಾರಿಗಳು ಸೆಂಟರ್ ಫಾರ್ ಪಾಲಿಸಿ ರಿಸರ್ಚ್, ಆಕ್ಸ್‌ಫ್ಯಾಮ್ ಇಂಡಿಯಾ ಮತ್ತು ಇಂಡಿಪೆಂಡೆಂಟ್ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಕುರಿತು ಇಲಾಖೆಯು ಇನ್ನೂ ಹೇಳಿಕೆಯನ್ನು ನೀಡಿಲ್ಲ. ಆದರೆ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು, “ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯಿದೆಯ ಮೂಲಕ ಪಡೆದ ಹಣದ ರಸೀದಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ‘ಡಿಜಿಪಬ್’

ಈ ದಾಳಿಗಳನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಈ ಕ್ರಮಗಳ ಹಿಂದಿನ ಕಾರಣಗಳನ್ನು ತಿಳಿಸಲು ಆದಾಯ ತೆರಿಗೆ ಇಲಾಖೆಗೆ ಕರೆ ನೀಡಿರುವುದಾಗಿ ಡಿಜಿಪಬ್ ಗುರುವಾರ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ದಾಳಿಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಡಿಜಿಪಬ್ ನೆನಪಿಸಿಕೊಂಡಿದೆ.

“ಆರೋಪಗಳು ಅಥವಾ ಸಾಕ್ಷ್ಯಗಳ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ, ಸಾರ್ವಜನಿಕ ಸೇವಾ ಪತ್ರಿಕೋದ್ಯಮದಲ್ಲಿ ತೊಡಗಿರುವ ಸಂಸ್ಥೆಗಳನ್ನು ಬೆದರಿಸಲು ಮತ್ತು ಕಿರುಕುಳ ನೀಡಲು ಆದಾಯ ತೆರಿಗೆ ತಂಡಗಳನ್ನು ಬಳಸಲಾಗುತ್ತಿದೆ. ಇದು ಮಾನವ ಸಂಪನ್ಮೂಲಗಳ ಲಜ್ಜೆಗೆಟ್ಟ ಪ್ರಯತ್ನವಾಗಿದೆ” ಎಂದು ಡಿಜಿಪಬ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ದಿಕ್ಕೆಟ್ಟ ಕಾಲದ ನಿಜದನಿ ನವಮಾಧ್ಯಮ; ಇಂದು ಕಾವಲು ಕಾಯುತ್ತಿರುವ ಮಾಧ್ಯಮಗಳು ಯಾವುವು?

ಡಿಜಿಪಬ್ ಸ್ವತಂತ್ರ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್ ಹಲವಾರು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳನ್ನು ಬೆಂಬಲಿಸುತ್ತದೆ. ಮಸುಕಾದ ಸುದ್ದಿ ಮಾಧ್ಯಮಗಳ ಈ ಸಂದರ್ಭದಲ್ಲಿ ಈ ರೀತಿಯ ಮಾಧ್ಯಮಗಳು ತೀರಾ ಅಗತ್ಯವಿದೆ ಎಂದು ಡಿಜಿಪಬ್ ಹೇಳಿದೆ.

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮತ್ತು ಆಕ್ಸ್‌ಫ್ಯಾಮ್ ಒದಗಿಸಿದ ಮಾಹಿತಿಯು ಸಾಮಾಜಿಕ-ಆರ್ಥಿಕ ವಿಷಯಗಳ ಒಳನೋಟವನ್ನು ನೀಡುತ್ತದೆ ಎಂದು ಅದು ಹೇಳಿದೆ. “ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಇದೆಲ್ಲವೂ ಮುಖ್ಯವಾಗಿದೆ” ಎಂದು ಡಿಜಿಪಬ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...