Homeಮುಖಪುಟಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಭಯಭೀತಗೊಂಡಿದೆ: ಡಿಜಿಪಬ್

ಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಭಯಭೀತಗೊಂಡಿದೆ: ಡಿಜಿಪಬ್

ಸ್ವತಂತ್ರ ಮಾಧ್ಯಮಗಳಿಗೆ ನಿಧಿ ನೀಡುವ ಸಂಸ್ಥೆ ಮೇಲಿನ ಐಟಿ ದಾಳಿಗೆ ಡಿಜಿಟಲ್ ಮಾಧ್ಯಮ ಒಕ್ಕೂಟ ಡಿಜಿಪಬ್‌ ತೀವ್ರ ಆಕ್ರೋಶ

- Advertisement -
- Advertisement -

ಬೆಂಗಳೂರಿನಲ್ಲಿರುವ ಇಂಡಿಪೆಂಡೆಂಟ್ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್, ಸರ್ಕಾರೇತರ ಸಂಸ್ಥೆ ಆಕ್ಸ್‌ಫ್ಯಾಮ್ ಇಂಡಿಯಾ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಥಿಂಕ್ ಟ್ಯಾಂಕ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ‘ಸ್ವತಂತ್ರ ಪತ್ರಿಕೋದ್ಯಮ ಮತ್ತು ಸಂಶೋಧನೆಯ ಮೇಲಿನ ದಾಳಿಯಾಗಿದೆ’ ಎಂದು ಡಿಜಿಟಲ್ ಮಾಧ್ಯಮ ಸಮೂಹವಾದ ‘ಡಿಜಿಪಬ್‌’ ಗುರುವಾರ ಹೇಳಿದೆ.

ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ 11 ಡಿಜಿಟಲ್ ಸುದ್ದಿ ಸಂಸ್ಥೆಗಳ ಸಂಘವಾಗಿದೆ. “ನಮ್ಮ ಸರ್ಕಾರವು ಸ್ವತಂತ್ರ ಮಾಧ್ಯಮದಿಂದ ಎಷ್ಟು ಭಯಭೀತಗೊಂಡಿದೆ ಎಂದು ಈ ದಾಳಿಗಳು ತೋರಿಸುತ್ತವೆ” ಎಂದು ಡಿಜಿಪಬ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ, ಆದಾಯ ತೆರಿಗೆ ಅಧಿಕಾರಿಗಳು ಸೆಂಟರ್ ಫಾರ್ ಪಾಲಿಸಿ ರಿಸರ್ಚ್, ಆಕ್ಸ್‌ಫ್ಯಾಮ್ ಇಂಡಿಯಾ ಮತ್ತು ಇಂಡಿಪೆಂಡೆಂಟ್ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಕುರಿತು ಇಲಾಖೆಯು ಇನ್ನೂ ಹೇಳಿಕೆಯನ್ನು ನೀಡಿಲ್ಲ. ಆದರೆ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು, “ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯಿದೆಯ ಮೂಲಕ ಪಡೆದ ಹಣದ ರಸೀದಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ‘ಡಿಜಿಪಬ್’

ಈ ದಾಳಿಗಳನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಈ ಕ್ರಮಗಳ ಹಿಂದಿನ ಕಾರಣಗಳನ್ನು ತಿಳಿಸಲು ಆದಾಯ ತೆರಿಗೆ ಇಲಾಖೆಗೆ ಕರೆ ನೀಡಿರುವುದಾಗಿ ಡಿಜಿಪಬ್ ಗುರುವಾರ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ದಾಳಿಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಡಿಜಿಪಬ್ ನೆನಪಿಸಿಕೊಂಡಿದೆ.

“ಆರೋಪಗಳು ಅಥವಾ ಸಾಕ್ಷ್ಯಗಳ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ, ಸಾರ್ವಜನಿಕ ಸೇವಾ ಪತ್ರಿಕೋದ್ಯಮದಲ್ಲಿ ತೊಡಗಿರುವ ಸಂಸ್ಥೆಗಳನ್ನು ಬೆದರಿಸಲು ಮತ್ತು ಕಿರುಕುಳ ನೀಡಲು ಆದಾಯ ತೆರಿಗೆ ತಂಡಗಳನ್ನು ಬಳಸಲಾಗುತ್ತಿದೆ. ಇದು ಮಾನವ ಸಂಪನ್ಮೂಲಗಳ ಲಜ್ಜೆಗೆಟ್ಟ ಪ್ರಯತ್ನವಾಗಿದೆ” ಎಂದು ಡಿಜಿಪಬ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ದಿಕ್ಕೆಟ್ಟ ಕಾಲದ ನಿಜದನಿ ನವಮಾಧ್ಯಮ; ಇಂದು ಕಾವಲು ಕಾಯುತ್ತಿರುವ ಮಾಧ್ಯಮಗಳು ಯಾವುವು?

ಡಿಜಿಪಬ್ ಸ್ವತಂತ್ರ ಮತ್ತು ಪಬ್ಲಿಕ್ ಸ್ಪಿರಿಟೆಡ್ ಮೀಡಿಯಾ ಫೌಂಡೇಶನ್ ಹಲವಾರು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳನ್ನು ಬೆಂಬಲಿಸುತ್ತದೆ. ಮಸುಕಾದ ಸುದ್ದಿ ಮಾಧ್ಯಮಗಳ ಈ ಸಂದರ್ಭದಲ್ಲಿ ಈ ರೀತಿಯ ಮಾಧ್ಯಮಗಳು ತೀರಾ ಅಗತ್ಯವಿದೆ ಎಂದು ಡಿಜಿಪಬ್ ಹೇಳಿದೆ.

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮತ್ತು ಆಕ್ಸ್‌ಫ್ಯಾಮ್ ಒದಗಿಸಿದ ಮಾಹಿತಿಯು ಸಾಮಾಜಿಕ-ಆರ್ಥಿಕ ವಿಷಯಗಳ ಒಳನೋಟವನ್ನು ನೀಡುತ್ತದೆ ಎಂದು ಅದು ಹೇಳಿದೆ. “ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಇದೆಲ್ಲವೂ ಮುಖ್ಯವಾಗಿದೆ” ಎಂದು ಡಿಜಿಪಬ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...