Homeಮುಖಪುಟಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

ಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

- Advertisement -
- Advertisement -

ಕೊಡನಾಡು ಹತ್ಯೆ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬುಧವಾರ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುವ ಮುನ್ನವೇ ಪಳನಿಸ್ವಾಮಿ ಈ ವಿಷಯವನ್ನು ಪ್ರಸ್ತಾಪಿಸಿ, ಡಿಎಂಕೆ ಸರ್ಕಾರವನ್ನು ಖಂಡಿಸಿದ್ದಾರೆ.

ಎಐಎಡಿಎಂಕೆ ಶಾಸಕರು ಆಡಳಿತ ಪಕ್ಷದ ವಿರುದ್ದ ಸದನದಲ್ಲಿ ಪ್ರತಿಭಟನೆ ನಡೆಸಿದ್ದು, “ಸುಳ್ಳು ಪ್ರಕರಣಗಳನ್ನು ದಾಖಲಿಸಬೇಡಿ” “ಈ ಕ್ರಮವನ್ನು ನಾವು ಖಂಡಿಸುತ್ತೇವೆ” ಎಂಬ ಘೋಷಣಾ ಬಿತ್ತಿಪತ್ರಗಳನ್ನು ಪ್ರದರ್ಶಿಸಿ, ಸದನದಿಂದ ಹೊರನಡೆದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಜೆಟ್ 2021: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ಕೊಡನಾಡು ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಸತ್ಯವನ್ನು ಹೊರಹಾಕುವುದು ಡಿಎಂಕೆ ಚುನಾವಣಾ ಸಮಯದಲ್ಲಿ ನೀಡಿರುವ ಭರವಸೆಗಳಲ್ಲಿ ಒಂದಾಗಿದೆ. ಇದನ್ನು ನ್ಯಾಯಾಲಯದ ಆದೇಶದ ಮೇರೆಗೆ ಮತ್ತು ಯಾವುದೇ ರಾಜಕೀಯ ಉದ್ದೇಶ ಅಥವಾ ದ್ವೇಷವಿಲ್ಲದೆ ಮಾಡಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾರೂ ಭಯವನ್ನು ವ್ಯಕ್ತಪಡಿಸುವ ಅಗತ್ಯವಿಲ್ಲ. ನಮ್ಮ ಸರ್ಕಾರವು ಕೊಡನಾಡು ಪ್ರಕರಣದಲ್ಲಿ ಕಾನೂನಿನ ಪ್ರಕಾರ ನಡೆಯುತ್ತದೆ ಮತ್ತು ಅಪರಾಧಿಗಳನ್ನು ಪತ್ತೆ ಮಾಡುತ್ತದೆ” ಎಂದು ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ | NaanuGauri

ಪಿಎಂಕೆ ಪಕ್ಷದ ಶಾಸಕಾಂಗ ನಾಯಕ ಜಿಕೆ ಮಣಿ, ಸರ್ಕಾರವನ್ನು ಖಂಡಿಸಿ ತಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕರೆದೊಯ್ದಿದ್ದಾರೆ. ಸರ್ಕಾರವು ಈ ನಡೆಯ ಮೂಲಕ ಅನಗತ್ಯ ‘ಭಯ’ವನ್ನು ಸೃಷ್ಟಿಸುತ್ತಿದೆ ಎಂದು ಬಿಜೆಪಿ ಶಾಸಕಾಂಗ ನಾಯಕ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ತಪ್ಪು ಮಾಡಿದವರು ಮಾತ್ರ ಭಯಪಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ವಿಧಾನಸಭೆಯಿಂದ ಹೊರನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ನನ್ನನ್ನು ಬಂಧಿಸುವ ಉದ್ದೇಶದಿಂದ ಪ್ರಕರಣವನ್ನು ಮರು ತನಿಖೆ ನಡೆಸುತ್ತಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಹಾಜರಾದ ಕೆಲವು ವಕೀಲರು ಈಗ ಸರ್ಕಾರಿ ಅರ್ಜಿದಾರರಾಗಿದ್ದಾರೆ. ಅಲ್ಲದೆ ಡಿಎಂಕೆಯ ವಕೀಲರು ಕೊಲೆ ಪ್ರಕರಣದ ಕೆಲವು ಆರೋಪಿಗಳ ಪರವಾಗಿ ಹಾಜರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಡಿಎಂಕೆ ಸರ್ಕಾರವು ಪ್ರಮುಖ ಆರೋಪಿಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದು, ಈ ಪ್ರಕರಣವನ್ನು ಬಳಸಿಕೊಂಡು, ನಮ್ಮ ಪಕ್ಷವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಎಐಎಡಿಎಂಕೆ ಅನ್ನು ಹತ್ತಿಕ್ಕಲು ಅವರಿಗೆ ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿವಾಸದಲ್ಲಿ ನಡೆದ ಭದ್ರತಾ ಸಿಬ್ಬಂದಿಯ ಕೊಲೆಯ ಪ್ರಕರಣವಾಗಿದೆ ಕೊಡನಾಡು ಪ್ರಕರಣ. ಏಪ್ರಿಲ್ 23, 2017 ರಂದು 10 ಜನರ ತಂಡವೊಂದು ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿ ದರೋಡೆ ನಡೆಸಿತ್ತು. ನೀಲಗಿರಿ ಪೊಲೀಸರು ಸೋಮವಾರವಷ್ಟೇ ಹತ್ಯೆಯ ಪ್ರಮುಖ ಆರೋಪಿ ಕೆವಿ ಸಾಯನ್‌ಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...