Homeಮುಖಪುಟಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

ಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

- Advertisement -
- Advertisement -

ಕೊಡನಾಡು ಹತ್ಯೆ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬುಧವಾರ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುವ ಮುನ್ನವೇ ಪಳನಿಸ್ವಾಮಿ ಈ ವಿಷಯವನ್ನು ಪ್ರಸ್ತಾಪಿಸಿ, ಡಿಎಂಕೆ ಸರ್ಕಾರವನ್ನು ಖಂಡಿಸಿದ್ದಾರೆ.

ಎಐಎಡಿಎಂಕೆ ಶಾಸಕರು ಆಡಳಿತ ಪಕ್ಷದ ವಿರುದ್ದ ಸದನದಲ್ಲಿ ಪ್ರತಿಭಟನೆ ನಡೆಸಿದ್ದು, “ಸುಳ್ಳು ಪ್ರಕರಣಗಳನ್ನು ದಾಖಲಿಸಬೇಡಿ” “ಈ ಕ್ರಮವನ್ನು ನಾವು ಖಂಡಿಸುತ್ತೇವೆ” ಎಂಬ ಘೋಷಣಾ ಬಿತ್ತಿಪತ್ರಗಳನ್ನು ಪ್ರದರ್ಶಿಸಿ, ಸದನದಿಂದ ಹೊರನಡೆದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಜೆಟ್ 2021: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ಕೊಡನಾಡು ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಸತ್ಯವನ್ನು ಹೊರಹಾಕುವುದು ಡಿಎಂಕೆ ಚುನಾವಣಾ ಸಮಯದಲ್ಲಿ ನೀಡಿರುವ ಭರವಸೆಗಳಲ್ಲಿ ಒಂದಾಗಿದೆ. ಇದನ್ನು ನ್ಯಾಯಾಲಯದ ಆದೇಶದ ಮೇರೆಗೆ ಮತ್ತು ಯಾವುದೇ ರಾಜಕೀಯ ಉದ್ದೇಶ ಅಥವಾ ದ್ವೇಷವಿಲ್ಲದೆ ಮಾಡಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾರೂ ಭಯವನ್ನು ವ್ಯಕ್ತಪಡಿಸುವ ಅಗತ್ಯವಿಲ್ಲ. ನಮ್ಮ ಸರ್ಕಾರವು ಕೊಡನಾಡು ಪ್ರಕರಣದಲ್ಲಿ ಕಾನೂನಿನ ಪ್ರಕಾರ ನಡೆಯುತ್ತದೆ ಮತ್ತು ಅಪರಾಧಿಗಳನ್ನು ಪತ್ತೆ ಮಾಡುತ್ತದೆ” ಎಂದು ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ | NaanuGauri

ಪಿಎಂಕೆ ಪಕ್ಷದ ಶಾಸಕಾಂಗ ನಾಯಕ ಜಿಕೆ ಮಣಿ, ಸರ್ಕಾರವನ್ನು ಖಂಡಿಸಿ ತಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕರೆದೊಯ್ದಿದ್ದಾರೆ. ಸರ್ಕಾರವು ಈ ನಡೆಯ ಮೂಲಕ ಅನಗತ್ಯ ‘ಭಯ’ವನ್ನು ಸೃಷ್ಟಿಸುತ್ತಿದೆ ಎಂದು ಬಿಜೆಪಿ ಶಾಸಕಾಂಗ ನಾಯಕ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ತಪ್ಪು ಮಾಡಿದವರು ಮಾತ್ರ ಭಯಪಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ವಿಧಾನಸಭೆಯಿಂದ ಹೊರನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ನನ್ನನ್ನು ಬಂಧಿಸುವ ಉದ್ದೇಶದಿಂದ ಪ್ರಕರಣವನ್ನು ಮರು ತನಿಖೆ ನಡೆಸುತ್ತಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಹಾಜರಾದ ಕೆಲವು ವಕೀಲರು ಈಗ ಸರ್ಕಾರಿ ಅರ್ಜಿದಾರರಾಗಿದ್ದಾರೆ. ಅಲ್ಲದೆ ಡಿಎಂಕೆಯ ವಕೀಲರು ಕೊಲೆ ಪ್ರಕರಣದ ಕೆಲವು ಆರೋಪಿಗಳ ಪರವಾಗಿ ಹಾಜರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಡಿಎಂಕೆ ಸರ್ಕಾರವು ಪ್ರಮುಖ ಆರೋಪಿಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದು, ಈ ಪ್ರಕರಣವನ್ನು ಬಳಸಿಕೊಂಡು, ನಮ್ಮ ಪಕ್ಷವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಎಐಎಡಿಎಂಕೆ ಅನ್ನು ಹತ್ತಿಕ್ಕಲು ಅವರಿಗೆ ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿವಾಸದಲ್ಲಿ ನಡೆದ ಭದ್ರತಾ ಸಿಬ್ಬಂದಿಯ ಕೊಲೆಯ ಪ್ರಕರಣವಾಗಿದೆ ಕೊಡನಾಡು ಪ್ರಕರಣ. ಏಪ್ರಿಲ್ 23, 2017 ರಂದು 10 ಜನರ ತಂಡವೊಂದು ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿ ದರೋಡೆ ನಡೆಸಿತ್ತು. ನೀಲಗಿರಿ ಪೊಲೀಸರು ಸೋಮವಾರವಷ್ಟೇ ಹತ್ಯೆಯ ಪ್ರಮುಖ ಆರೋಪಿ ಕೆವಿ ಸಾಯನ್‌ಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...