Homeಮುಖಪುಟಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

ಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

- Advertisement -
- Advertisement -

ಕೊಡನಾಡು ಹತ್ಯೆ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬುಧವಾರ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುವ ಮುನ್ನವೇ ಪಳನಿಸ್ವಾಮಿ ಈ ವಿಷಯವನ್ನು ಪ್ರಸ್ತಾಪಿಸಿ, ಡಿಎಂಕೆ ಸರ್ಕಾರವನ್ನು ಖಂಡಿಸಿದ್ದಾರೆ.

ಎಐಎಡಿಎಂಕೆ ಶಾಸಕರು ಆಡಳಿತ ಪಕ್ಷದ ವಿರುದ್ದ ಸದನದಲ್ಲಿ ಪ್ರತಿಭಟನೆ ನಡೆಸಿದ್ದು, “ಸುಳ್ಳು ಪ್ರಕರಣಗಳನ್ನು ದಾಖಲಿಸಬೇಡಿ” “ಈ ಕ್ರಮವನ್ನು ನಾವು ಖಂಡಿಸುತ್ತೇವೆ” ಎಂಬ ಘೋಷಣಾ ಬಿತ್ತಿಪತ್ರಗಳನ್ನು ಪ್ರದರ್ಶಿಸಿ, ಸದನದಿಂದ ಹೊರನಡೆದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಜೆಟ್ 2021: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ಕೊಡನಾಡು ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಸತ್ಯವನ್ನು ಹೊರಹಾಕುವುದು ಡಿಎಂಕೆ ಚುನಾವಣಾ ಸಮಯದಲ್ಲಿ ನೀಡಿರುವ ಭರವಸೆಗಳಲ್ಲಿ ಒಂದಾಗಿದೆ. ಇದನ್ನು ನ್ಯಾಯಾಲಯದ ಆದೇಶದ ಮೇರೆಗೆ ಮತ್ತು ಯಾವುದೇ ರಾಜಕೀಯ ಉದ್ದೇಶ ಅಥವಾ ದ್ವೇಷವಿಲ್ಲದೆ ಮಾಡಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾರೂ ಭಯವನ್ನು ವ್ಯಕ್ತಪಡಿಸುವ ಅಗತ್ಯವಿಲ್ಲ. ನಮ್ಮ ಸರ್ಕಾರವು ಕೊಡನಾಡು ಪ್ರಕರಣದಲ್ಲಿ ಕಾನೂನಿನ ಪ್ರಕಾರ ನಡೆಯುತ್ತದೆ ಮತ್ತು ಅಪರಾಧಿಗಳನ್ನು ಪತ್ತೆ ಮಾಡುತ್ತದೆ” ಎಂದು ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ | NaanuGauri

ಪಿಎಂಕೆ ಪಕ್ಷದ ಶಾಸಕಾಂಗ ನಾಯಕ ಜಿಕೆ ಮಣಿ, ಸರ್ಕಾರವನ್ನು ಖಂಡಿಸಿ ತಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕರೆದೊಯ್ದಿದ್ದಾರೆ. ಸರ್ಕಾರವು ಈ ನಡೆಯ ಮೂಲಕ ಅನಗತ್ಯ ‘ಭಯ’ವನ್ನು ಸೃಷ್ಟಿಸುತ್ತಿದೆ ಎಂದು ಬಿಜೆಪಿ ಶಾಸಕಾಂಗ ನಾಯಕ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ತಪ್ಪು ಮಾಡಿದವರು ಮಾತ್ರ ಭಯಪಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ವಿಧಾನಸಭೆಯಿಂದ ಹೊರನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ನನ್ನನ್ನು ಬಂಧಿಸುವ ಉದ್ದೇಶದಿಂದ ಪ್ರಕರಣವನ್ನು ಮರು ತನಿಖೆ ನಡೆಸುತ್ತಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಹಾಜರಾದ ಕೆಲವು ವಕೀಲರು ಈಗ ಸರ್ಕಾರಿ ಅರ್ಜಿದಾರರಾಗಿದ್ದಾರೆ. ಅಲ್ಲದೆ ಡಿಎಂಕೆಯ ವಕೀಲರು ಕೊಲೆ ಪ್ರಕರಣದ ಕೆಲವು ಆರೋಪಿಗಳ ಪರವಾಗಿ ಹಾಜರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಡಿಎಂಕೆ ಸರ್ಕಾರವು ಪ್ರಮುಖ ಆರೋಪಿಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದು, ಈ ಪ್ರಕರಣವನ್ನು ಬಳಸಿಕೊಂಡು, ನಮ್ಮ ಪಕ್ಷವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಎಐಎಡಿಎಂಕೆ ಅನ್ನು ಹತ್ತಿಕ್ಕಲು ಅವರಿಗೆ ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿವಾಸದಲ್ಲಿ ನಡೆದ ಭದ್ರತಾ ಸಿಬ್ಬಂದಿಯ ಕೊಲೆಯ ಪ್ರಕರಣವಾಗಿದೆ ಕೊಡನಾಡು ಪ್ರಕರಣ. ಏಪ್ರಿಲ್ 23, 2017 ರಂದು 10 ಜನರ ತಂಡವೊಂದು ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿ ದರೋಡೆ ನಡೆಸಿತ್ತು. ನೀಲಗಿರಿ ಪೊಲೀಸರು ಸೋಮವಾರವಷ್ಟೇ ಹತ್ಯೆಯ ಪ್ರಮುಖ ಆರೋಪಿ ಕೆವಿ ಸಾಯನ್‌ಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...