Homeಮುಖಪುಟಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

ಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

- Advertisement -
- Advertisement -

ಕೊಡನಾಡು ಹತ್ಯೆ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬುಧವಾರ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುವ ಮುನ್ನವೇ ಪಳನಿಸ್ವಾಮಿ ಈ ವಿಷಯವನ್ನು ಪ್ರಸ್ತಾಪಿಸಿ, ಡಿಎಂಕೆ ಸರ್ಕಾರವನ್ನು ಖಂಡಿಸಿದ್ದಾರೆ.

ಎಐಎಡಿಎಂಕೆ ಶಾಸಕರು ಆಡಳಿತ ಪಕ್ಷದ ವಿರುದ್ದ ಸದನದಲ್ಲಿ ಪ್ರತಿಭಟನೆ ನಡೆಸಿದ್ದು, “ಸುಳ್ಳು ಪ್ರಕರಣಗಳನ್ನು ದಾಖಲಿಸಬೇಡಿ” “ಈ ಕ್ರಮವನ್ನು ನಾವು ಖಂಡಿಸುತ್ತೇವೆ” ಎಂಬ ಘೋಷಣಾ ಬಿತ್ತಿಪತ್ರಗಳನ್ನು ಪ್ರದರ್ಶಿಸಿ, ಸದನದಿಂದ ಹೊರನಡೆದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಜೆಟ್ 2021: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ಕೊಡನಾಡು ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಸತ್ಯವನ್ನು ಹೊರಹಾಕುವುದು ಡಿಎಂಕೆ ಚುನಾವಣಾ ಸಮಯದಲ್ಲಿ ನೀಡಿರುವ ಭರವಸೆಗಳಲ್ಲಿ ಒಂದಾಗಿದೆ. ಇದನ್ನು ನ್ಯಾಯಾಲಯದ ಆದೇಶದ ಮೇರೆಗೆ ಮತ್ತು ಯಾವುದೇ ರಾಜಕೀಯ ಉದ್ದೇಶ ಅಥವಾ ದ್ವೇಷವಿಲ್ಲದೆ ಮಾಡಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾರೂ ಭಯವನ್ನು ವ್ಯಕ್ತಪಡಿಸುವ ಅಗತ್ಯವಿಲ್ಲ. ನಮ್ಮ ಸರ್ಕಾರವು ಕೊಡನಾಡು ಪ್ರಕರಣದಲ್ಲಿ ಕಾನೂನಿನ ಪ್ರಕಾರ ನಡೆಯುತ್ತದೆ ಮತ್ತು ಅಪರಾಧಿಗಳನ್ನು ಪತ್ತೆ ಮಾಡುತ್ತದೆ” ಎಂದು ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ | NaanuGauri

ಪಿಎಂಕೆ ಪಕ್ಷದ ಶಾಸಕಾಂಗ ನಾಯಕ ಜಿಕೆ ಮಣಿ, ಸರ್ಕಾರವನ್ನು ಖಂಡಿಸಿ ತಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕರೆದೊಯ್ದಿದ್ದಾರೆ. ಸರ್ಕಾರವು ಈ ನಡೆಯ ಮೂಲಕ ಅನಗತ್ಯ ‘ಭಯ’ವನ್ನು ಸೃಷ್ಟಿಸುತ್ತಿದೆ ಎಂದು ಬಿಜೆಪಿ ಶಾಸಕಾಂಗ ನಾಯಕ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ತಪ್ಪು ಮಾಡಿದವರು ಮಾತ್ರ ಭಯಪಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ವಿಧಾನಸಭೆಯಿಂದ ಹೊರನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ನನ್ನನ್ನು ಬಂಧಿಸುವ ಉದ್ದೇಶದಿಂದ ಪ್ರಕರಣವನ್ನು ಮರು ತನಿಖೆ ನಡೆಸುತ್ತಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಹಾಜರಾದ ಕೆಲವು ವಕೀಲರು ಈಗ ಸರ್ಕಾರಿ ಅರ್ಜಿದಾರರಾಗಿದ್ದಾರೆ. ಅಲ್ಲದೆ ಡಿಎಂಕೆಯ ವಕೀಲರು ಕೊಲೆ ಪ್ರಕರಣದ ಕೆಲವು ಆರೋಪಿಗಳ ಪರವಾಗಿ ಹಾಜರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಡಿಎಂಕೆ ಸರ್ಕಾರವು ಪ್ರಮುಖ ಆರೋಪಿಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದು, ಈ ಪ್ರಕರಣವನ್ನು ಬಳಸಿಕೊಂಡು, ನಮ್ಮ ಪಕ್ಷವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಎಐಎಡಿಎಂಕೆ ಅನ್ನು ಹತ್ತಿಕ್ಕಲು ಅವರಿಗೆ ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿವಾಸದಲ್ಲಿ ನಡೆದ ಭದ್ರತಾ ಸಿಬ್ಬಂದಿಯ ಕೊಲೆಯ ಪ್ರಕರಣವಾಗಿದೆ ಕೊಡನಾಡು ಪ್ರಕರಣ. ಏಪ್ರಿಲ್ 23, 2017 ರಂದು 10 ಜನರ ತಂಡವೊಂದು ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿ ದರೋಡೆ ನಡೆಸಿತ್ತು. ನೀಲಗಿರಿ ಪೊಲೀಸರು ಸೋಮವಾರವಷ್ಟೇ ಹತ್ಯೆಯ ಪ್ರಮುಖ ಆರೋಪಿ ಕೆವಿ ಸಾಯನ್‌ಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...