HomeUncategorizedಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

ಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಇದೇ ಎ.14ರೊಳಗೆ ರಾಜ್ಯ ಸರಕಾರವು ರೋಹಿತ್ ಕಾಯ್ದೆ ಜಾರಿ ಕುರಿತು ಘೋಷಣೆ ಮಾಡಬೇಕೆಂದು ದಲಿತ ಚಳವಳಿಯ ನಾಯಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದಾರೆ.

ಇಂದು (ಮಂಗಳವಾರ) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಯ್ದೆಯ ಜಾರಿಗಾಗಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ  ಬೃಹತ್ ಪ್ರಮಾಣದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಪೀಠಿಕೆ ಪ್ರತಿ ಪ್ರಜೆಗೆ ಅವಕಾಶ ಹಾಗು ಸ್ಥಾನಮಾನದ, ಸಮಾನತೆಯ ಭರವಸೆ ನೀಡುತ್ತದೆ. ಆದರೆ ಸಂವಿಧಾನ ಜಾರಿಯಾದ 75  ವರ್ಷಗಳ ನಂತರವೂ ದಲಿತ ಬಹುಜನ ಯುವಜನರಿಗೆ ಈ ಎರಡು ಭರವಸೆಗಳು ಈಡೇರಿಲ್ಲ. ರೋಹಿತ್ ವೇಮುಲ, ಪಾಯಲ್ ತದ್ವಿ ಅವರ ಸಾಂಸ್ಥಿಕ ಕೊಲೆಗಳು ಈ ಭರವಸೆಯ ನಿರಾಕರಣೆಯ ತೀವ್ರ ಉದಾಹರಣೆಯಾಗಿದೆ. 2021ರಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021 ರ ಅವಧಿಯಲ್ಲಿ, ಐಐಟಿ, ಐಐಎಂ, ಎನ್‌ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ಆತ್ಮಹತ್ಯೆಗೈದ 122ರಲ್ಲಿ 68 ವಿದ್ಯಾರ್ಥಿಗಳು SC/ST/OBC ವರ್ಗಗಳಿಗೆ ಸೇರಿದವರು. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ. ಡಿಸೆಂಬರ್ 2023ರಲ್ಲಿ ಸರ್ಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ , ಕೇವಲ ಕೇಂದ್ರೀಯ ವಿಶ್ವಾ ವಿದ್ಯಾನಿಲಯಗಳಿಂದಲೇ ,  2018-2023  ಮಧ್ಯೆ  13,000ಕ್ಕೂ  ಹೆಚ್ಚು  SC/ST/OBC ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ , ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಈ ದಿನನಿತ್ಯದ ಹಿಂಸೆಯನ್ನು ನಿವೃತ್ತ ಯು.ಜಿ.ಸಿ ಅಧ್ಯಕ್ಷರಾದ ಸುಖದೇವ್ ಥೋರಟ್ ನೇತೃತ್ವದ ಸಮಿತಿಯ ವರದಿಯಲ್ಲಿ ವಿವರಿಸಲಾಯಿತು. ಹಾಸ್ಟೆಲ್ ನಲ್ಲಿ , ಮೆಸ್ ನಲ್ಲಿ, ಆಟದ ಮೈದಾನ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಹೇಗೆ ಜಾತಿಯು ಅಡ್ಡವಾಗಿದೆ ಎಂದು ಅವರ ವರದಿ ವಿವರಿಸಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇಂದು ಸಹ  ಕರ್ನಾಟಕದಲ್ಲಿ ಜಾತಿ ಸಾಮಾನ ಶಿಕ್ಷಣಕ್ಕೆ ಅಡ್ಡಿಯಾಗಿದೆ.  ಒಂದು ಕಡೆ ಸರ್ಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ, ಇನ್ನೊಂದೆಡೆ ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ  NEP, CUET, NEET  ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಮತ್ತೊಬ್ಬ ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್ ತಿಳಿಸಿದರು.

ರೋಹಿತ್ ವೇಮುಲ ಅವರ ತಾಯಿ ಹಾಗು ಪಾಯಲ್ ತದ್ವಿ ಅವರ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು  2019ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ (ಉದಾಹರಣೆಗೆ – Equal Opportunity Cell), ಆದರೆ ಅವುಗಳು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು, ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ಆರು ವರ್ಷಗಳಾಗಿದ್ದು ಹಾಗು ಯು.ಜಿ.ಸಿ ನಿಯಮಾವಳಿ ಜಾರಿಯಾಗಿ 13 ವರ್ಷಗಳಾಗಿದ್ದರೂ, ದೇಶದ ವಿಶ್ವವಿದ್ಯಾನಿಲಯಗಳ ಮೇಲ್ವಿಚಾರಣೆ ಮಾಡುವ ಯು.ಜಿ.ಸಿ ತಾರತಮ್ಯವಾನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಸ್ತುತದಲ್ಲಿರುವ ನಿಯಮಾವಳಿಯನ್ನು ಜಾರಿ ಮಾಡದೆ, ಸ್ವೆಚ್ಚಾನುಸಾರವಾಗಿ ನಿಶ್ಯಕ್ತವಾದ ನೂತನ ನಿಯಮಾವಳಿಯನ್ನು 2025ರ ಫೆಬ್ರವರಿಯಲ್ಲಿ ಜಾರಿಮಾಡಿದೆ ಎಂದು ಡಾ.ಕೆ.ಪಿ.ಅಶ್ವಿನಿ ಹೇಳಿದರು.

ಇನ್ನೊಂದು ಕಡೆ ಜಾತಿ ತಾರತಮ್ಯವನ್ನು ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ  ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯ ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗು ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು  ಸಾಧ್ಯವಿಲ್ಲ. ಥೋರಟ್ ಸಮಿತಿ ವರದಿ ಹೇಳಿದಂತೆ ಉತ್ತಮ ವಾತಾವರಣ ಸೃಷ್ಟಿಸಲು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಆಂಗ್ಲದಲ್ಲಿ ವಿಶೇಷ ತರಬೇತಿ ನೀಡುವುದು, ದಮನಿಸುವ ಜಾತಿಗಳಿಗೆ ಸೇರಿದ ಶಿಕ್ಷಕರಿಗೂ ಹಾಗು ವಿದ್ಯಾರ್ಥಿಗಳಿಗೂ ಜಾತಿ ಬಗ್ಗೆ caste sensitization workshops  ಮಾಡುವುದು ಇತ್ಯಾದಿ ಸಹ ಆಗಬೇಕು. ಅದು ಇಂದಿನ ನಿಯಮ-ಕಾನೂನುಗಳಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

ಈಗಿರುವ ನಿಯಮಗಳು ಹಾಗು ಕಾನೂನು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ, ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ  ಹಾಗು ಖಾಸಗಿ ವಿಶ್ವವಿದ್ಯಾನಿಲಯಗಳ  ನಿಯಂತ್ರಣ ಆಗುವಂತೆ ಒತ್ತಾಯಿಸಲು ನಾವು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತಿದ್ದೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆ.ವಿ.ಎಸ್.) ಸರೋವರ್ ಬೆಂಕಿಕೆರೆ ಮಾಹಿತಿ ನೀಡಿದರು.

ಏಪ್ರಿಲ್ 14, ಅಂದರೆ ಅಂಬೇಡ್ಕರ್ ಜಯಂತಿಯ ಒಳಗೆ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿಗಳು  ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕಾರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗು ಸಮಾನ ಅವಕಾಶ ಸಿಗುವಂತೆ ಸೂಕ್ತ, ಶೀಘ್ರ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಶ್ನಾ, ಡಾ.ನಂದಕುಮಾರ್, ಲೇಖಾ ಅಡವಿ, ವೆಂಕಟೇಶ್ ಮುಂತಾದವರು ಹಾಜರಿದ್ದರು.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...