HomeUncategorizedಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

ಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಇದೇ ಎ.14ರೊಳಗೆ ರಾಜ್ಯ ಸರಕಾರವು ರೋಹಿತ್ ಕಾಯ್ದೆ ಜಾರಿ ಕುರಿತು ಘೋಷಣೆ ಮಾಡಬೇಕೆಂದು ದಲಿತ ಚಳವಳಿಯ ನಾಯಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದಾರೆ.

ಇಂದು (ಮಂಗಳವಾರ) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಯ್ದೆಯ ಜಾರಿಗಾಗಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ  ಬೃಹತ್ ಪ್ರಮಾಣದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಪೀಠಿಕೆ ಪ್ರತಿ ಪ್ರಜೆಗೆ ಅವಕಾಶ ಹಾಗು ಸ್ಥಾನಮಾನದ, ಸಮಾನತೆಯ ಭರವಸೆ ನೀಡುತ್ತದೆ. ಆದರೆ ಸಂವಿಧಾನ ಜಾರಿಯಾದ 75  ವರ್ಷಗಳ ನಂತರವೂ ದಲಿತ ಬಹುಜನ ಯುವಜನರಿಗೆ ಈ ಎರಡು ಭರವಸೆಗಳು ಈಡೇರಿಲ್ಲ. ರೋಹಿತ್ ವೇಮುಲ, ಪಾಯಲ್ ತದ್ವಿ ಅವರ ಸಾಂಸ್ಥಿಕ ಕೊಲೆಗಳು ಈ ಭರವಸೆಯ ನಿರಾಕರಣೆಯ ತೀವ್ರ ಉದಾಹರಣೆಯಾಗಿದೆ. 2021ರಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021 ರ ಅವಧಿಯಲ್ಲಿ, ಐಐಟಿ, ಐಐಎಂ, ಎನ್‌ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ಆತ್ಮಹತ್ಯೆಗೈದ 122ರಲ್ಲಿ 68 ವಿದ್ಯಾರ್ಥಿಗಳು SC/ST/OBC ವರ್ಗಗಳಿಗೆ ಸೇರಿದವರು. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ. ಡಿಸೆಂಬರ್ 2023ರಲ್ಲಿ ಸರ್ಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ , ಕೇವಲ ಕೇಂದ್ರೀಯ ವಿಶ್ವಾ ವಿದ್ಯಾನಿಲಯಗಳಿಂದಲೇ ,  2018-2023  ಮಧ್ಯೆ  13,000ಕ್ಕೂ  ಹೆಚ್ಚು  SC/ST/OBC ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ , ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಈ ದಿನನಿತ್ಯದ ಹಿಂಸೆಯನ್ನು ನಿವೃತ್ತ ಯು.ಜಿ.ಸಿ ಅಧ್ಯಕ್ಷರಾದ ಸುಖದೇವ್ ಥೋರಟ್ ನೇತೃತ್ವದ ಸಮಿತಿಯ ವರದಿಯಲ್ಲಿ ವಿವರಿಸಲಾಯಿತು. ಹಾಸ್ಟೆಲ್ ನಲ್ಲಿ , ಮೆಸ್ ನಲ್ಲಿ, ಆಟದ ಮೈದಾನ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಹೇಗೆ ಜಾತಿಯು ಅಡ್ಡವಾಗಿದೆ ಎಂದು ಅವರ ವರದಿ ವಿವರಿಸಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇಂದು ಸಹ  ಕರ್ನಾಟಕದಲ್ಲಿ ಜಾತಿ ಸಾಮಾನ ಶಿಕ್ಷಣಕ್ಕೆ ಅಡ್ಡಿಯಾಗಿದೆ.  ಒಂದು ಕಡೆ ಸರ್ಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ, ಇನ್ನೊಂದೆಡೆ ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ  NEP, CUET, NEET  ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಮತ್ತೊಬ್ಬ ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್ ತಿಳಿಸಿದರು.

ರೋಹಿತ್ ವೇಮುಲ ಅವರ ತಾಯಿ ಹಾಗು ಪಾಯಲ್ ತದ್ವಿ ಅವರ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು  2019ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ (ಉದಾಹರಣೆಗೆ – Equal Opportunity Cell), ಆದರೆ ಅವುಗಳು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು, ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ಆರು ವರ್ಷಗಳಾಗಿದ್ದು ಹಾಗು ಯು.ಜಿ.ಸಿ ನಿಯಮಾವಳಿ ಜಾರಿಯಾಗಿ 13 ವರ್ಷಗಳಾಗಿದ್ದರೂ, ದೇಶದ ವಿಶ್ವವಿದ್ಯಾನಿಲಯಗಳ ಮೇಲ್ವಿಚಾರಣೆ ಮಾಡುವ ಯು.ಜಿ.ಸಿ ತಾರತಮ್ಯವಾನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಸ್ತುತದಲ್ಲಿರುವ ನಿಯಮಾವಳಿಯನ್ನು ಜಾರಿ ಮಾಡದೆ, ಸ್ವೆಚ್ಚಾನುಸಾರವಾಗಿ ನಿಶ್ಯಕ್ತವಾದ ನೂತನ ನಿಯಮಾವಳಿಯನ್ನು 2025ರ ಫೆಬ್ರವರಿಯಲ್ಲಿ ಜಾರಿಮಾಡಿದೆ ಎಂದು ಡಾ.ಕೆ.ಪಿ.ಅಶ್ವಿನಿ ಹೇಳಿದರು.

ಇನ್ನೊಂದು ಕಡೆ ಜಾತಿ ತಾರತಮ್ಯವನ್ನು ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ  ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯ ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗು ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು  ಸಾಧ್ಯವಿಲ್ಲ. ಥೋರಟ್ ಸಮಿತಿ ವರದಿ ಹೇಳಿದಂತೆ ಉತ್ತಮ ವಾತಾವರಣ ಸೃಷ್ಟಿಸಲು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಆಂಗ್ಲದಲ್ಲಿ ವಿಶೇಷ ತರಬೇತಿ ನೀಡುವುದು, ದಮನಿಸುವ ಜಾತಿಗಳಿಗೆ ಸೇರಿದ ಶಿಕ್ಷಕರಿಗೂ ಹಾಗು ವಿದ್ಯಾರ್ಥಿಗಳಿಗೂ ಜಾತಿ ಬಗ್ಗೆ caste sensitization workshops  ಮಾಡುವುದು ಇತ್ಯಾದಿ ಸಹ ಆಗಬೇಕು. ಅದು ಇಂದಿನ ನಿಯಮ-ಕಾನೂನುಗಳಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

ಈಗಿರುವ ನಿಯಮಗಳು ಹಾಗು ಕಾನೂನು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ, ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ  ಹಾಗು ಖಾಸಗಿ ವಿಶ್ವವಿದ್ಯಾನಿಲಯಗಳ  ನಿಯಂತ್ರಣ ಆಗುವಂತೆ ಒತ್ತಾಯಿಸಲು ನಾವು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತಿದ್ದೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆ.ವಿ.ಎಸ್.) ಸರೋವರ್ ಬೆಂಕಿಕೆರೆ ಮಾಹಿತಿ ನೀಡಿದರು.

ಏಪ್ರಿಲ್ 14, ಅಂದರೆ ಅಂಬೇಡ್ಕರ್ ಜಯಂತಿಯ ಒಳಗೆ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿಗಳು  ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕಾರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗು ಸಮಾನ ಅವಕಾಶ ಸಿಗುವಂತೆ ಸೂಕ್ತ, ಶೀಘ್ರ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಶ್ನಾ, ಡಾ.ನಂದಕುಮಾರ್, ಲೇಖಾ ಅಡವಿ, ವೆಂಕಟೇಶ್ ಮುಂತಾದವರು ಹಾಜರಿದ್ದರು.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...