HomeUncategorizedಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

ಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಇದೇ ಎ.14ರೊಳಗೆ ರಾಜ್ಯ ಸರಕಾರವು ರೋಹಿತ್ ಕಾಯ್ದೆ ಜಾರಿ ಕುರಿತು ಘೋಷಣೆ ಮಾಡಬೇಕೆಂದು ದಲಿತ ಚಳವಳಿಯ ನಾಯಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದಾರೆ.

ಇಂದು (ಮಂಗಳವಾರ) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಯ್ದೆಯ ಜಾರಿಗಾಗಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ  ಬೃಹತ್ ಪ್ರಮಾಣದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಪೀಠಿಕೆ ಪ್ರತಿ ಪ್ರಜೆಗೆ ಅವಕಾಶ ಹಾಗು ಸ್ಥಾನಮಾನದ, ಸಮಾನತೆಯ ಭರವಸೆ ನೀಡುತ್ತದೆ. ಆದರೆ ಸಂವಿಧಾನ ಜಾರಿಯಾದ 75  ವರ್ಷಗಳ ನಂತರವೂ ದಲಿತ ಬಹುಜನ ಯುವಜನರಿಗೆ ಈ ಎರಡು ಭರವಸೆಗಳು ಈಡೇರಿಲ್ಲ. ರೋಹಿತ್ ವೇಮುಲ, ಪಾಯಲ್ ತದ್ವಿ ಅವರ ಸಾಂಸ್ಥಿಕ ಕೊಲೆಗಳು ಈ ಭರವಸೆಯ ನಿರಾಕರಣೆಯ ತೀವ್ರ ಉದಾಹರಣೆಯಾಗಿದೆ. 2021ರಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021 ರ ಅವಧಿಯಲ್ಲಿ, ಐಐಟಿ, ಐಐಎಂ, ಎನ್‌ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ಆತ್ಮಹತ್ಯೆಗೈದ 122ರಲ್ಲಿ 68 ವಿದ್ಯಾರ್ಥಿಗಳು SC/ST/OBC ವರ್ಗಗಳಿಗೆ ಸೇರಿದವರು. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ. ಡಿಸೆಂಬರ್ 2023ರಲ್ಲಿ ಸರ್ಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ , ಕೇವಲ ಕೇಂದ್ರೀಯ ವಿಶ್ವಾ ವಿದ್ಯಾನಿಲಯಗಳಿಂದಲೇ ,  2018-2023  ಮಧ್ಯೆ  13,000ಕ್ಕೂ  ಹೆಚ್ಚು  SC/ST/OBC ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ , ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಈ ದಿನನಿತ್ಯದ ಹಿಂಸೆಯನ್ನು ನಿವೃತ್ತ ಯು.ಜಿ.ಸಿ ಅಧ್ಯಕ್ಷರಾದ ಸುಖದೇವ್ ಥೋರಟ್ ನೇತೃತ್ವದ ಸಮಿತಿಯ ವರದಿಯಲ್ಲಿ ವಿವರಿಸಲಾಯಿತು. ಹಾಸ್ಟೆಲ್ ನಲ್ಲಿ , ಮೆಸ್ ನಲ್ಲಿ, ಆಟದ ಮೈದಾನ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಹೇಗೆ ಜಾತಿಯು ಅಡ್ಡವಾಗಿದೆ ಎಂದು ಅವರ ವರದಿ ವಿವರಿಸಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇಂದು ಸಹ  ಕರ್ನಾಟಕದಲ್ಲಿ ಜಾತಿ ಸಾಮಾನ ಶಿಕ್ಷಣಕ್ಕೆ ಅಡ್ಡಿಯಾಗಿದೆ.  ಒಂದು ಕಡೆ ಸರ್ಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ, ಇನ್ನೊಂದೆಡೆ ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ  NEP, CUET, NEET  ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಮತ್ತೊಬ್ಬ ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್ ತಿಳಿಸಿದರು.

ರೋಹಿತ್ ವೇಮುಲ ಅವರ ತಾಯಿ ಹಾಗು ಪಾಯಲ್ ತದ್ವಿ ಅವರ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು  2019ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ (ಉದಾಹರಣೆಗೆ – Equal Opportunity Cell), ಆದರೆ ಅವುಗಳು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು, ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ಆರು ವರ್ಷಗಳಾಗಿದ್ದು ಹಾಗು ಯು.ಜಿ.ಸಿ ನಿಯಮಾವಳಿ ಜಾರಿಯಾಗಿ 13 ವರ್ಷಗಳಾಗಿದ್ದರೂ, ದೇಶದ ವಿಶ್ವವಿದ್ಯಾನಿಲಯಗಳ ಮೇಲ್ವಿಚಾರಣೆ ಮಾಡುವ ಯು.ಜಿ.ಸಿ ತಾರತಮ್ಯವಾನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಸ್ತುತದಲ್ಲಿರುವ ನಿಯಮಾವಳಿಯನ್ನು ಜಾರಿ ಮಾಡದೆ, ಸ್ವೆಚ್ಚಾನುಸಾರವಾಗಿ ನಿಶ್ಯಕ್ತವಾದ ನೂತನ ನಿಯಮಾವಳಿಯನ್ನು 2025ರ ಫೆಬ್ರವರಿಯಲ್ಲಿ ಜಾರಿಮಾಡಿದೆ ಎಂದು ಡಾ.ಕೆ.ಪಿ.ಅಶ್ವಿನಿ ಹೇಳಿದರು.

ಇನ್ನೊಂದು ಕಡೆ ಜಾತಿ ತಾರತಮ್ಯವನ್ನು ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ  ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯ ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗು ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು  ಸಾಧ್ಯವಿಲ್ಲ. ಥೋರಟ್ ಸಮಿತಿ ವರದಿ ಹೇಳಿದಂತೆ ಉತ್ತಮ ವಾತಾವರಣ ಸೃಷ್ಟಿಸಲು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಆಂಗ್ಲದಲ್ಲಿ ವಿಶೇಷ ತರಬೇತಿ ನೀಡುವುದು, ದಮನಿಸುವ ಜಾತಿಗಳಿಗೆ ಸೇರಿದ ಶಿಕ್ಷಕರಿಗೂ ಹಾಗು ವಿದ್ಯಾರ್ಥಿಗಳಿಗೂ ಜಾತಿ ಬಗ್ಗೆ caste sensitization workshops  ಮಾಡುವುದು ಇತ್ಯಾದಿ ಸಹ ಆಗಬೇಕು. ಅದು ಇಂದಿನ ನಿಯಮ-ಕಾನೂನುಗಳಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

ಈಗಿರುವ ನಿಯಮಗಳು ಹಾಗು ಕಾನೂನು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ, ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ  ಹಾಗು ಖಾಸಗಿ ವಿಶ್ವವಿದ್ಯಾನಿಲಯಗಳ  ನಿಯಂತ್ರಣ ಆಗುವಂತೆ ಒತ್ತಾಯಿಸಲು ನಾವು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತಿದ್ದೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆ.ವಿ.ಎಸ್.) ಸರೋವರ್ ಬೆಂಕಿಕೆರೆ ಮಾಹಿತಿ ನೀಡಿದರು.

ಏಪ್ರಿಲ್ 14, ಅಂದರೆ ಅಂಬೇಡ್ಕರ್ ಜಯಂತಿಯ ಒಳಗೆ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿಗಳು  ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕಾರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗು ಸಮಾನ ಅವಕಾಶ ಸಿಗುವಂತೆ ಸೂಕ್ತ, ಶೀಘ್ರ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಶ್ನಾ, ಡಾ.ನಂದಕುಮಾರ್, ಲೇಖಾ ಅಡವಿ, ವೆಂಕಟೇಶ್ ಮುಂತಾದವರು ಹಾಜರಿದ್ದರು.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....