HomeUncategorizedಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

ಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಇದೇ ಎ.14ರೊಳಗೆ ರಾಜ್ಯ ಸರಕಾರವು ರೋಹಿತ್ ಕಾಯ್ದೆ ಜಾರಿ ಕುರಿತು ಘೋಷಣೆ ಮಾಡಬೇಕೆಂದು ದಲಿತ ಚಳವಳಿಯ ನಾಯಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದಾರೆ.

ಇಂದು (ಮಂಗಳವಾರ) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಯ್ದೆಯ ಜಾರಿಗಾಗಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ  ಬೃಹತ್ ಪ್ರಮಾಣದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಪೀಠಿಕೆ ಪ್ರತಿ ಪ್ರಜೆಗೆ ಅವಕಾಶ ಹಾಗು ಸ್ಥಾನಮಾನದ, ಸಮಾನತೆಯ ಭರವಸೆ ನೀಡುತ್ತದೆ. ಆದರೆ ಸಂವಿಧಾನ ಜಾರಿಯಾದ 75  ವರ್ಷಗಳ ನಂತರವೂ ದಲಿತ ಬಹುಜನ ಯುವಜನರಿಗೆ ಈ ಎರಡು ಭರವಸೆಗಳು ಈಡೇರಿಲ್ಲ. ರೋಹಿತ್ ವೇಮುಲ, ಪಾಯಲ್ ತದ್ವಿ ಅವರ ಸಾಂಸ್ಥಿಕ ಕೊಲೆಗಳು ಈ ಭರವಸೆಯ ನಿರಾಕರಣೆಯ ತೀವ್ರ ಉದಾಹರಣೆಯಾಗಿದೆ. 2021ರಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021 ರ ಅವಧಿಯಲ್ಲಿ, ಐಐಟಿ, ಐಐಎಂ, ಎನ್‌ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ಆತ್ಮಹತ್ಯೆಗೈದ 122ರಲ್ಲಿ 68 ವಿದ್ಯಾರ್ಥಿಗಳು SC/ST/OBC ವರ್ಗಗಳಿಗೆ ಸೇರಿದವರು. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ. ಡಿಸೆಂಬರ್ 2023ರಲ್ಲಿ ಸರ್ಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ , ಕೇವಲ ಕೇಂದ್ರೀಯ ವಿಶ್ವಾ ವಿದ್ಯಾನಿಲಯಗಳಿಂದಲೇ ,  2018-2023  ಮಧ್ಯೆ  13,000ಕ್ಕೂ  ಹೆಚ್ಚು  SC/ST/OBC ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ , ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಈ ದಿನನಿತ್ಯದ ಹಿಂಸೆಯನ್ನು ನಿವೃತ್ತ ಯು.ಜಿ.ಸಿ ಅಧ್ಯಕ್ಷರಾದ ಸುಖದೇವ್ ಥೋರಟ್ ನೇತೃತ್ವದ ಸಮಿತಿಯ ವರದಿಯಲ್ಲಿ ವಿವರಿಸಲಾಯಿತು. ಹಾಸ್ಟೆಲ್ ನಲ್ಲಿ , ಮೆಸ್ ನಲ್ಲಿ, ಆಟದ ಮೈದಾನ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಹೇಗೆ ಜಾತಿಯು ಅಡ್ಡವಾಗಿದೆ ಎಂದು ಅವರ ವರದಿ ವಿವರಿಸಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇಂದು ಸಹ  ಕರ್ನಾಟಕದಲ್ಲಿ ಜಾತಿ ಸಾಮಾನ ಶಿಕ್ಷಣಕ್ಕೆ ಅಡ್ಡಿಯಾಗಿದೆ.  ಒಂದು ಕಡೆ ಸರ್ಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ, ಇನ್ನೊಂದೆಡೆ ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ  NEP, CUET, NEET  ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಮತ್ತೊಬ್ಬ ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್ ತಿಳಿಸಿದರು.

ರೋಹಿತ್ ವೇಮುಲ ಅವರ ತಾಯಿ ಹಾಗು ಪಾಯಲ್ ತದ್ವಿ ಅವರ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು  2019ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ (ಉದಾಹರಣೆಗೆ – Equal Opportunity Cell), ಆದರೆ ಅವುಗಳು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು, ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ಆರು ವರ್ಷಗಳಾಗಿದ್ದು ಹಾಗು ಯು.ಜಿ.ಸಿ ನಿಯಮಾವಳಿ ಜಾರಿಯಾಗಿ 13 ವರ್ಷಗಳಾಗಿದ್ದರೂ, ದೇಶದ ವಿಶ್ವವಿದ್ಯಾನಿಲಯಗಳ ಮೇಲ್ವಿಚಾರಣೆ ಮಾಡುವ ಯು.ಜಿ.ಸಿ ತಾರತಮ್ಯವಾನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಸ್ತುತದಲ್ಲಿರುವ ನಿಯಮಾವಳಿಯನ್ನು ಜಾರಿ ಮಾಡದೆ, ಸ್ವೆಚ್ಚಾನುಸಾರವಾಗಿ ನಿಶ್ಯಕ್ತವಾದ ನೂತನ ನಿಯಮಾವಳಿಯನ್ನು 2025ರ ಫೆಬ್ರವರಿಯಲ್ಲಿ ಜಾರಿಮಾಡಿದೆ ಎಂದು ಡಾ.ಕೆ.ಪಿ.ಅಶ್ವಿನಿ ಹೇಳಿದರು.

ಇನ್ನೊಂದು ಕಡೆ ಜಾತಿ ತಾರತಮ್ಯವನ್ನು ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ  ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯ ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗು ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು  ಸಾಧ್ಯವಿಲ್ಲ. ಥೋರಟ್ ಸಮಿತಿ ವರದಿ ಹೇಳಿದಂತೆ ಉತ್ತಮ ವಾತಾವರಣ ಸೃಷ್ಟಿಸಲು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಆಂಗ್ಲದಲ್ಲಿ ವಿಶೇಷ ತರಬೇತಿ ನೀಡುವುದು, ದಮನಿಸುವ ಜಾತಿಗಳಿಗೆ ಸೇರಿದ ಶಿಕ್ಷಕರಿಗೂ ಹಾಗು ವಿದ್ಯಾರ್ಥಿಗಳಿಗೂ ಜಾತಿ ಬಗ್ಗೆ caste sensitization workshops  ಮಾಡುವುದು ಇತ್ಯಾದಿ ಸಹ ಆಗಬೇಕು. ಅದು ಇಂದಿನ ನಿಯಮ-ಕಾನೂನುಗಳಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

ಈಗಿರುವ ನಿಯಮಗಳು ಹಾಗು ಕಾನೂನು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ, ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ  ಹಾಗು ಖಾಸಗಿ ವಿಶ್ವವಿದ್ಯಾನಿಲಯಗಳ  ನಿಯಂತ್ರಣ ಆಗುವಂತೆ ಒತ್ತಾಯಿಸಲು ನಾವು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತಿದ್ದೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆ.ವಿ.ಎಸ್.) ಸರೋವರ್ ಬೆಂಕಿಕೆರೆ ಮಾಹಿತಿ ನೀಡಿದರು.

ಏಪ್ರಿಲ್ 14, ಅಂದರೆ ಅಂಬೇಡ್ಕರ್ ಜಯಂತಿಯ ಒಳಗೆ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿಗಳು  ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕಾರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗು ಸಮಾನ ಅವಕಾಶ ಸಿಗುವಂತೆ ಸೂಕ್ತ, ಶೀಘ್ರ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಶ್ನಾ, ಡಾ.ನಂದಕುಮಾರ್, ಲೇಖಾ ಅಡವಿ, ವೆಂಕಟೇಶ್ ಮುಂತಾದವರು ಹಾಜರಿದ್ದರು.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...