HomeUncategorizedಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

ಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಇದೇ ಎ.14ರೊಳಗೆ ರಾಜ್ಯ ಸರಕಾರವು ರೋಹಿತ್ ಕಾಯ್ದೆ ಜಾರಿ ಕುರಿತು ಘೋಷಣೆ ಮಾಡಬೇಕೆಂದು ದಲಿತ ಚಳವಳಿಯ ನಾಯಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದಾರೆ.

ಇಂದು (ಮಂಗಳವಾರ) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಯ್ದೆಯ ಜಾರಿಗಾಗಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ  ಬೃಹತ್ ಪ್ರಮಾಣದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಪೀಠಿಕೆ ಪ್ರತಿ ಪ್ರಜೆಗೆ ಅವಕಾಶ ಹಾಗು ಸ್ಥಾನಮಾನದ, ಸಮಾನತೆಯ ಭರವಸೆ ನೀಡುತ್ತದೆ. ಆದರೆ ಸಂವಿಧಾನ ಜಾರಿಯಾದ 75  ವರ್ಷಗಳ ನಂತರವೂ ದಲಿತ ಬಹುಜನ ಯುವಜನರಿಗೆ ಈ ಎರಡು ಭರವಸೆಗಳು ಈಡೇರಿಲ್ಲ. ರೋಹಿತ್ ವೇಮುಲ, ಪಾಯಲ್ ತದ್ವಿ ಅವರ ಸಾಂಸ್ಥಿಕ ಕೊಲೆಗಳು ಈ ಭರವಸೆಯ ನಿರಾಕರಣೆಯ ತೀವ್ರ ಉದಾಹರಣೆಯಾಗಿದೆ. 2021ರಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021 ರ ಅವಧಿಯಲ್ಲಿ, ಐಐಟಿ, ಐಐಎಂ, ಎನ್‌ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ಆತ್ಮಹತ್ಯೆಗೈದ 122ರಲ್ಲಿ 68 ವಿದ್ಯಾರ್ಥಿಗಳು SC/ST/OBC ವರ್ಗಗಳಿಗೆ ಸೇರಿದವರು. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ. ಡಿಸೆಂಬರ್ 2023ರಲ್ಲಿ ಸರ್ಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ , ಕೇವಲ ಕೇಂದ್ರೀಯ ವಿಶ್ವಾ ವಿದ್ಯಾನಿಲಯಗಳಿಂದಲೇ ,  2018-2023  ಮಧ್ಯೆ  13,000ಕ್ಕೂ  ಹೆಚ್ಚು  SC/ST/OBC ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ , ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಈ ದಿನನಿತ್ಯದ ಹಿಂಸೆಯನ್ನು ನಿವೃತ್ತ ಯು.ಜಿ.ಸಿ ಅಧ್ಯಕ್ಷರಾದ ಸುಖದೇವ್ ಥೋರಟ್ ನೇತೃತ್ವದ ಸಮಿತಿಯ ವರದಿಯಲ್ಲಿ ವಿವರಿಸಲಾಯಿತು. ಹಾಸ್ಟೆಲ್ ನಲ್ಲಿ , ಮೆಸ್ ನಲ್ಲಿ, ಆಟದ ಮೈದಾನ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಹೇಗೆ ಜಾತಿಯು ಅಡ್ಡವಾಗಿದೆ ಎಂದು ಅವರ ವರದಿ ವಿವರಿಸಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇಂದು ಸಹ  ಕರ್ನಾಟಕದಲ್ಲಿ ಜಾತಿ ಸಾಮಾನ ಶಿಕ್ಷಣಕ್ಕೆ ಅಡ್ಡಿಯಾಗಿದೆ.  ಒಂದು ಕಡೆ ಸರ್ಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ, ಇನ್ನೊಂದೆಡೆ ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ  NEP, CUET, NEET  ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಮತ್ತೊಬ್ಬ ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್ ತಿಳಿಸಿದರು.

ರೋಹಿತ್ ವೇಮುಲ ಅವರ ತಾಯಿ ಹಾಗು ಪಾಯಲ್ ತದ್ವಿ ಅವರ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು  2019ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ (ಉದಾಹರಣೆಗೆ – Equal Opportunity Cell), ಆದರೆ ಅವುಗಳು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು, ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ಆರು ವರ್ಷಗಳಾಗಿದ್ದು ಹಾಗು ಯು.ಜಿ.ಸಿ ನಿಯಮಾವಳಿ ಜಾರಿಯಾಗಿ 13 ವರ್ಷಗಳಾಗಿದ್ದರೂ, ದೇಶದ ವಿಶ್ವವಿದ್ಯಾನಿಲಯಗಳ ಮೇಲ್ವಿಚಾರಣೆ ಮಾಡುವ ಯು.ಜಿ.ಸಿ ತಾರತಮ್ಯವಾನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಸ್ತುತದಲ್ಲಿರುವ ನಿಯಮಾವಳಿಯನ್ನು ಜಾರಿ ಮಾಡದೆ, ಸ್ವೆಚ್ಚಾನುಸಾರವಾಗಿ ನಿಶ್ಯಕ್ತವಾದ ನೂತನ ನಿಯಮಾವಳಿಯನ್ನು 2025ರ ಫೆಬ್ರವರಿಯಲ್ಲಿ ಜಾರಿಮಾಡಿದೆ ಎಂದು ಡಾ.ಕೆ.ಪಿ.ಅಶ್ವಿನಿ ಹೇಳಿದರು.

ಇನ್ನೊಂದು ಕಡೆ ಜಾತಿ ತಾರತಮ್ಯವನ್ನು ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ  ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯ ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗು ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು  ಸಾಧ್ಯವಿಲ್ಲ. ಥೋರಟ್ ಸಮಿತಿ ವರದಿ ಹೇಳಿದಂತೆ ಉತ್ತಮ ವಾತಾವರಣ ಸೃಷ್ಟಿಸಲು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಆಂಗ್ಲದಲ್ಲಿ ವಿಶೇಷ ತರಬೇತಿ ನೀಡುವುದು, ದಮನಿಸುವ ಜಾತಿಗಳಿಗೆ ಸೇರಿದ ಶಿಕ್ಷಕರಿಗೂ ಹಾಗು ವಿದ್ಯಾರ್ಥಿಗಳಿಗೂ ಜಾತಿ ಬಗ್ಗೆ caste sensitization workshops  ಮಾಡುವುದು ಇತ್ಯಾದಿ ಸಹ ಆಗಬೇಕು. ಅದು ಇಂದಿನ ನಿಯಮ-ಕಾನೂನುಗಳಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

ಈಗಿರುವ ನಿಯಮಗಳು ಹಾಗು ಕಾನೂನು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ, ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ  ಹಾಗು ಖಾಸಗಿ ವಿಶ್ವವಿದ್ಯಾನಿಲಯಗಳ  ನಿಯಂತ್ರಣ ಆಗುವಂತೆ ಒತ್ತಾಯಿಸಲು ನಾವು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತಿದ್ದೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆ.ವಿ.ಎಸ್.) ಸರೋವರ್ ಬೆಂಕಿಕೆರೆ ಮಾಹಿತಿ ನೀಡಿದರು.

ಏಪ್ರಿಲ್ 14, ಅಂದರೆ ಅಂಬೇಡ್ಕರ್ ಜಯಂತಿಯ ಒಳಗೆ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿಗಳು  ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕಾರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗು ಸಮಾನ ಅವಕಾಶ ಸಿಗುವಂತೆ ಸೂಕ್ತ, ಶೀಘ್ರ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಶ್ನಾ, ಡಾ.ನಂದಕುಮಾರ್, ಲೇಖಾ ಅಡವಿ, ವೆಂಕಟೇಶ್ ಮುಂತಾದವರು ಹಾಜರಿದ್ದರು.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...