Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...