Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...