Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...