Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...