Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...