Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...