Homeಎಚ್.ಎಸ್.ದೊರೆಸ್ವಾಮಿಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

- Advertisement -
- Advertisement -

ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು ಸರಿ ಅದನ್ನು ಹಾಕ್ತಾರೆ.. ಎಲ್ಲಾದರೂ ಕೊಲೆ ಆದರೂ ಅದನ್ನೆ ಪುನಃ ರಿಪೀಟ್ ಮಾಡಿ ಹಾಕ್ತಾರೆ. ಬರೀ ಈ ತರಹದ ಚರ್ಚೆ ಆಗ್ತಿದೆ ಹೊರತು ಪ್ರಜಾಪ್ರಭುತ್ವವನ್ನು ಮಜಭೂತುಪಡಿಸುವುದಕ್ಕೆ ಮತ್ತು ಸಮಾಜವನ್ನು ತಿದ್ದುವುದಕ್ಕೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ದುಷ್ಟ ವಿಚಾರಗಳನ್ನು ಅಳಿಸಲು ಕೆಲಸ ಮಾಡುತ್ತಿಲ್ಲ.

ಒಳ್ಳೇಯದಕ್ಕೆ ಸಮಯ ಕೊಟ್ಟು ಜನರ ಪ್ರಜ್ಞೆಯನ್ನು ಬಳಸಿ, ಅವರಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವಂತಹ ಕೆಲಸ ಮಾಡಬೇಕಾದಂತಹ ಮಾಧ್ಯಮಗಳು ಕಾಲಹರಣ ಮಾಡುತ್ತಿವೆ. ಇದನ್ನು ನಾವು ನಾಲ್ಕಾರು ವರ್ಷಗಳಿಂದ ನೋಡ್ತ ಬಂದಿದ್ದೇವೆ.. ಇದರ ಬಗ್ಗೆ ಮಾತಾನಾಡುವ ಜನ ಕೂಡ ಇಲ್ಲ. ನಾವು ಸ್ವತಂತ್ರ ಪೂರ್ವದಲ್ಲಿ ಈ ಮಾದ್ಯಮಗಳನ್ನು ಹೇಗೆ ಉಪಯೋಗ ಮಾಡ್ತಿದ್ದೆವು, ಬ್ರಿಟೀಷರ ವಿರೋಧವಾಗಿ ನಾವು ಗುಲಾಮಗಿರಿಯಿಂದ ಹೊರಗೆ ಬರುವುದ್ದಕ್ಕಾಗಿ, ಶತ್ರುಗಳನ್ನು ಹೊಡೆದು ಓಡಿಸುವುದಕ್ಕಾಗಿ, ಪ್ರಜೆಗಳಲ್ಲಿ ಪ್ರಜ್ಞೆಯನ್ನು ತುಂಬಿಸುವಂತಹ ಕೆಲಸವನ್ನು ಮಾಡ್ತಾ ಇದ್ವಿ. ಈವತ್ತಿನ ಪತ್ರಿಕೆಗಳು ಅಂತಹ ಕೆಲಸ ಮಾಡಬೇಕು.

ಪ್ರಜಾಪ್ರಭುತ್ವವನ್ನು ಉಳಿಸುವಂತಹ ಕೆಲಸ, ನಮ್ಮ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕೇ ಹೊರೆತು ಕಾಲಹರಣ ಮಾಡುವುದು ಸರಿಯಲ್ಲ. ಈವತ್ತಿನ ದಿವಸ ಕರೋನ ಸಂದರ್ಭದಲ್ಲಿ ಹೆಂಡದ ಅಂಗಡಿಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಯಾವಾಗ ಅಂಗಡಿ ತೆಗೀತಾರೆ ಯಾವಾಗ, ಕುಡಿಯೋಣ ಅಂತ. ಅವರಿಗೆ ಈ ಮಾಧ್ಯಮದವರು ಹೇಳುವುದು ದೂರ ದೂರ ನಿಂತುಕೊಳ್ಳಿ ಅಂತ. ಇವರ ಮಾತು ಕೇಳ್ತಾರೇನ್ರಿ ಕುಡಿಯುವ ಆತುರದಲ್ಲಿ ಇರುವಂತಹ ಜನ?

ಅಂಗಡಿ ತೆಗಯಬೇಡಿ ಅಂತ ಹೇಳುವುದು ಮಾದ್ಯಮದವರ ಕರ್ತವ್ಯವಾಗಿತ್ತು. ಯಾಕೆಂದರೆ ಅದರಿಂದ ಅನಾಹುತ ಆಗುತ್ತೆ, ಕರೋನ ಮತ್ತೆ ಜಾಸ್ತಿ ಆಗುತ್ತೆ ಅಂತ ಹೇಳಬೇಕಾಗಿತ್ತೆ ಹೊರೆತು, ಇವರು ತಿಳುವಳಿಕೆ ಕೊಡುವಂತಹ ರೀತಿಯಲ್ಲಿ ಅಲ್ಲ. ಈ ಮಾಧ್ಯಮದವರು ಏನೇನೋ ಮಾತಾಡ್ತಾರೆ, ಆದರೆ ಇದು ಸರಿ ಅಲ್ಲ. ನೀವು ದೂರ ದೂರ ನಿಂತಿಕೊಳ್ಳಿ ಅಂತ ಮಾತು ಬೇರೆ ಸಂದರ್ಭದಲ್ಲಿ ಹೇಳಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೆಂಡದಂಗಡಿ ಹತ್ತಿರ ನೀವು ಉಪದೇಶ ಮಾಡ್ತಿದೀರಿ. ಇದು ಆಗುತ್ತೇನ್ರಿ? ಇದು ಆಗದೇ ಇರುವಂತಹದು. ಈವತ್ತು ಕುಡಿಯಲು ನೂಕು ನುಗ್ಗಲು ಮಾಡಿದ್ದರಿಂದ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದ್ದರಿಂದ ನೀವು ವ್ಯವಹಾರಿಕವಾಗಿ ನಡೀಬೇಕು. ಈವತ್ತು ಸಮಸ್ಯೆ ಏನಿದೆ ಅದರ ಬಗ್ಗೆ ಪರಿಗಣಿಸಬೇಕು.

ಕರೊನ ಕಾರಣದಿಂದ ಈಗ ಜನ ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೋ ಕುಡುಕರು ತುಂಬಾ ದಿನಾ ಕುಡೀದೇ ಇದ್ದರೆ ಆಗುವುದೇ ಇಲ್ಲ ಅನ್ನುವ ಜನರಿಗೆ ಬೇಕಾದರೆ ಪರ್ಮಿಟ್ಟು ಕೊಡಿ. ಆದರೆ ಸಾಮನ್ಯ ಜನರು ಕುಡಿಯುವುದನ್ನು ಬಿಡುವುದಕ್ಕೆ ತಯಾರು ಇರಬೇಕಾದ್ರೆ, ಅವರುಗಳಿಗೆ ಅಂಗಡಿಗಳು ಇಲ್ಲದೇ ಇರುವ ಹಾಗೆ ಮಾಡಿದರೆ ಬಿಟ್ಟೇ ಬಿಡ್ತಾರೆ… ಗುಜರಾತ್ ನಲ್ಲಿ ಈ ಕೆಲಸ ಮಾಡಿದ್ದಾರೆ. ತುಂಬಾ ಕುಡಿಯುವ ಚಟ ಇರುವ ಬೆರಳೆಣಿಕೆಯಷ್ಟು ಕುಡಕರಿಗೆ ಪರ್ಮಿಟ್ ಕೊಟ್ಟಿದ್ದಾರೆ, ಉಳಿದವರಿಗೆ ಅಂಗಡಿಗಳಿಲ್ಲ.

ಆ ರೀತಿಯ ವ್ಯವಸ್ಥೆ ಇಲ್ಲಿ ಆಗಬೇಕೇ ಹೊರೆತು ಸಾಲಾಗಿ ನಿಲ್ಲಿಸಿ ಲಾಠಿ ಚಾರ್ಜ್ ಆಗುವಂತೆ ಮಾಡುವುದು ವಿವೇಕವಲ್ಲ. ರೆಡ್ ಜೋನ್‌ನಲ್ಲಿ ಇರುವ ಕುಡುಕರು ಅಲ್ಲಿ ಕುಡಿತದ ಅಂಗಡಿಗಳು ಇಲ್ಲವಾದ್ದರಿಂದ ಕುಡಿತದ ಅಂಗಡಿಗಳು ತೆಗೆದಿರುವ ಬಡಾವಣೆಗಳಿಗೆ ನುಗ್ಗಿ ಬರುತ್ತಿದ್ದಾರೆ. ಮೊದಲು ಅದನ್ನು ತಡೆಗಟ್ಟಿ ಎಂದು ಪೋಲಿಸರಿಗೆ ಮತ್ತು ಮಾಧ್ಯಮಗಳಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸರ್ಕಾರ ಆತುರದಲ್ಲಿ ಕುಡಿತದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಮಾಡಬಾರದು.


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ

https://gaurilankeshnews.com/


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...