Homeಕರ್ನಾಟಕಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

- Advertisement -
- Advertisement -

‘‘ಗಣೇಶ ಹಬ್ಬದಲ್ಲಿ ಎಷ್ಟು ಗಾತ್ರದ ಮೂರ್ತಿಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಈ ಮೂರ್ತಿ ಹಿಂದೆ ಅನೇಕ ವರ್ಗದ ಜನರ ಜೀವನ ಅವಲಂಬಿತವಾಗಿದೆ. ಯಾರು, ಯಾವ ರೀತಿಯಲ್ಲಿ ಪೂಜೆ ಮಾಡಬೇಕು ಎಂಬುದು ಅವರವರ ವೈಯಕ್ತಿಕ ಭಾವಕ್ಕೆ ಬಿಟ್ಟ ವಿಚಾರ. ಇದಕ್ಕೆ ಬಿಜೆಪಿ ಸರ್ಕಾರ ನಿರ್ಬಂಧ ಹೇರಬಾರದು. ಸರ್ಕಾರ ತನ್ನ ನಿರ್ಬಂಧ ಆದೇಶ ಹಿಂಪಡೆಯಬೇಕು” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮೂರ್ತಿಯ ಗಾತ್ರ ಹಾಗೂ ಹಬ್ಬ ಆಚರಣೆ ಅವಧಿಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ನಗರದ ಮಾವಳ್ಳಿಯ ಗಣೇಶ ಮೂರ್ತಿ ತಯಾರಕರು ಮತ್ತು ಮಾರಾಟಗಾರರನ್ನು ಗುರುವಾರ ಭೇಟಿ ಮಾಡಿ, ಅವರ ಸಮಸ್ಯೆ ಆಲಿಸಿದ್ದಾರೆ. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘‘ಈ ದೇಶದ ಸಂಸ್ಕೃತಿ ನಮ್ಮ ಆಸ್ತಿ. ಈ ಸಂಸ್ಕೃತಿಯಲ್ಲಿ ನಾವು ಬೆಳೆಯುತ್ತಿದ್ದೇವೆ. ಯಾವ ಧರ್ಮದವರು ಹೇಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಭಾರತದಲ್ಲಿ ಹಿಂದೂಗಳ ಜತೆಗೆ ಇತರೆ ಧರ್ಮದವರು ಕೂಡ ವಿಘ್ನಗಳನ್ನು ನಿವಾರಣೆ ಮಾಡುವ ವಿನಾಯಕನ ಪೂಜೆ ಮಾಡುತ್ತಾರೆ. ಸಣ್ಣ ಸಗಣಿ ಉಂಡೆಗೆ ಒಂದು ಗರಿಕೆಯಿಟ್ಟು ಅದನ್ನು ಗಣೇಶ ಎಂದು ನಾವು ಪೂಜೆ ಮಾಡುತ್ತೇವೆ. ಇದೇ ನಮ್ಮ ಹಿರಿಯರು, ನಮ್ಮ ಸಂಸ್ಕೃತಿ ನಮಗೆ ತೋರಿರುವ ಮಾರ್ಗದರ್ಶನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

“ಕೋವಿಡ್ ಸಮಯದಲ್ಲಿ ದೇವಸ್ಥಾನ ತೆರೆಯಲು ಅವಕಾಶ ಕೊಟ್ಟಿದ್ದೀರಿ. ನಿಮ್ಮವರು ಒಕ್ಕೂಟ ಸರ್ಕಾರದ ಸಚಿವರಾದರು ಎಂಬುದಕ್ಕೇ ಜನಾಶೀರ್ವಾದ ಯಾತ್ರೆ ಮಾಡಿಸುತ್ತಿದ್ದೀರಿ. ಚುನಾವಣೆ ನಡೆಸುತ್ತಿದ್ದೀರಿ. ಈಗ ಬಿಜೆಪಿ ನಾಯಕರು ಶಿಫಾರಸ್ಸು ಮಾಡುವ ಕಡೆ ವಾರ್ಡ್‌ನಲ್ಲಿ ಒಂದು ಗಣೇಶ ಇಟ್ಟು ಪೂಜೆ ಮಾಡಬೇಕು. ಅದೂ ಮನೆಯಲ್ಲಿ 2 ಅಡಿ, ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಮೂರ್ತಿ ಮಾತ್ರ ಇಡಬೇಕು ಎಂದು ನಿರ್ಬಂಧ ಹಾಕಿದ್ದೀರಿ? ಇದು ಸರಿಯೇ? ಈಗ ಇಷ್ಟು ದೊಡ್ಡ ಗಣೇಶ ಮೂರ್ತಿ ಮಾಡಿರುವವರ ಕತೆ ಏನಾಗಬೇಕು. ಸರ್ಕಾರ ಇದೇ ಆದೇಶವನ್ನು 3 ತಿಂಗಳ ಹಿಂದೆಯೇ ಯಾಕೆ ಪ್ರಕಟಿಸಲಿಲ್ಲ?” ಎಂದು ಶಿವಕುಮಾರ್‌ ಪ್ರಶ್ನಿಸಿದ್ದಾರೆ.

“ಎಷ್ಟು ಗಾತ್ರದ ವಿಗ್ರಹ ಪೂಜೆ ಮಾಡಬೇಕು ಅಂತಾ ನಿರ್ದೇಶನ ನೀಡಲು ನೀವ್ಯಾರು? ಇದು ನಮ್ಮ ವೈಯಕ್ತಿಕ ವಿಚಾರ. ಇದರಲ್ಲಿ ನಿಮ್ಮ ಸಮಸ್ಯೆ ಏನು? ಕೋವಿಡ್ ಮಾರ್ಗಸೂಚಿ ಏನು ಬೇಕಾದರೂ ಮಾಡಿಕೊಳ್ಳಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಒಕ್ಕೂಟ ಸರ್ಕಾರ ಇಡೀ ದೇಶಕ್ಕೆ ಒಂದು ಕೋವಿಡ್ ಮಾರ್ಗಸೂಚಿ ಪ್ರಕಟಿಸಿರುವಾಗ ಬಿಜೆಪಿ ಆಡಳಿತದಲ್ಲಿರುವ ಕರ್ನಾಟಕಕ್ಕೂ ಗುಜರಾತ್, ಮಧ್ಯ ಪ್ರದೇಶ ಹಾಗೂ ಇತರೆ ರಾಜ್ಯಗಳಲ್ಲಿ ಕೋವಿಡ್ ನಿಯಮದಲ್ಲಿ ವ್ಯತ್ಯಾಸ ಏಕಿದೆ?” ಎಂದು ಅವರು ಕೇಳಿದ್ದಾರೆ.

“ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಮಾವಳಿ ಹಾಕಿದರೆ ಅದನ್ನು ನಿಮ್ಮ ಪಕ್ಷದ ಕಾರ್ಯಕರ್ತರೇ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಇದು ಉಲ್ಟಾ ಆಗಿದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಹೀಗೆ ಇದು ನಮ್ಮ ವೈಯಕ್ತಿಕ ವಿಚಾರ. ಅದಕ್ಕೆ ನಿರ್ಬಂಧ ಹಾಕುವುದು ಸರಿಯಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

“ಗಣೇಶ ವಿಗ್ರಹವನ್ನು ಸಾಮಾನ್ಯರು ಮಾಡಲು ಸಾಧ್ಯವಿಲ್ಲ. ಈ ಕಸುಬು, ಕಲೆಯನ್ನು ಕಲಿತು, ಅದನ್ನೇ ನಂಬಿ ಜೀವನ ಮಾಡುತ್ತಿರುವವರು ಮಾತ್ರ ಮಾಡಲು ಸಾಧ್ಯ. ಬೇರೆ ರಾಜ್ಯಗಳಲ್ಲಿ ಇವರಿಗೆ ಪರಿಹಾರ ನೀಡಿದ್ದಾರೆ. ಆದರೆ ನೀವು ಯಾವ ಪರಿಹಾರ ಕೊಟ್ಟಿದ್ದೀರಿ? ಲೆಕ್ಕ ಇದೆಯಾ? ರಾಜ್ಯದಲ್ಲಿ ಹೂವು, ಹಣ್ಣು ವ್ಯಾಪಾರದವರು, ಆರ್ಕೆಸ್ಟ್ರಾ, ಪೆಂಡಾಲ್ ವ್ಯಾಪಾರಿಗಳಲ್ಲಿ ಯಾರಿಗೆ ನೀವು ಪರಿಹಾರ ಕೊಟ್ಟಿದ್ದೀರಿ? ಮೂರ್ತಿಗೆ ನಿರ್ಬಂಧ ಹೇರಿರುವುದರಿಂದ ಇವರೆಲ್ಲರಿಗೂ ಹೊಡೆತ ಬೀಳಲಿದೆ. ಇದು ಕೇವಲ ಪಾಲಿಕೆ ವ್ಯಾಪ್ತಿಗೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಒಂದೇ ನೀತಿ ಇರಬೇಕು. ಒಂದೇ ದೃಷ್ಟಿಯಲ್ಲಿ ನೋಡಬೇಕು” ಎಂದು ಅವರು ಹೇಳಿದ್ದಾರೆ.

‘‘ಇಲ್ಲಿ ಹಿಂದೂ ಭಾವನೆ ಒಂದೇ ಅಲ್ಲ. ಇದು ಎಲ್ಲರ ಭಕ್ತಿ, ಉತ್ಸಾಹದ ವಿಚಾರ. ಸರ್ಕಾರ ಗಣೇಶ ಹಬ್ಬ ಆಚರಣೆಗೆ 10-15 ದಿನಗಳ ಅವಕಾಶ ನೀಡಬೇಕು. ಆರ್ಕೆಸ್ಟ್ರಾ ಮತ್ತಿತರ ಮನರಂಜನೆ ಕಾರ್ಯಕ್ರಮಕ್ಕೂ ಅವಕಾಶ ಇರಬೇಕು. ಕೋವಿಡ್ ನಿಯಮಾವಳಿ ವ್ಯಾಪ್ತಿಯಲ್ಲೇ ಆಚರಣೆಗೆ ಅವಕಾಶ ನೀಡಬೇಕು. ಕೋವಿಡ್ ನಿಯಮ ಮಾಡಿದರೆ ಅದು ಎಲ್ಲರಿಗೂ ಅನ್ವಯವಾಗಬೇಕು” ಎಂದು ಡಿಕೆಶಿ ತಿಳಿಸಿದ್ದಾರೆ.

“ಹೊಸದಾಗಿ ಒಕ್ಕೂಟ ಸರ್ಕಾರದ ಮಂತ್ರಿಯಾದವರಿಗೆ ಜನಾಶೀರ್ವಾದ ಮಾಡಲು ಅವಕಾಶ ಕೊಟ್ಟಿದ್ದೇಕೆ? ಬೇರೆ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಯಾಕೆ? ಪ್ರತಿಭಟನೆ ಮಾಡುತ್ತಿದ್ದ ಹೆಣ್ಣು ಮಕ್ಕಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದೇಕೆ? ಕಾನೂನು ಒಬ್ಬೊಬ್ಬರಿಗೆ ಒಂದು ಎಂಬಂತೆ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ತಮ್ಮ ಪಕ್ಷದ ಆಂತರಿಕ ವಿಚಾರಕ್ಕೆ ಕೈಗೊಂಬೆಯಾಗಬಾರದು. ಗಣೇಶನ ಪೂಜೆ ಎಲ್ಲರ ಹಕ್ಕು, ಎಲ್ಲರ ಆಸ್ತಿ. ಎಲ್ಲ ಧರ್ಮದವರು ತಮ್ಮ ಸಂಪ್ರದಾಯ ಆಚರಣೆಗೆ ಅವಕಾಶ ಮಾಡಿಕೊಡಿ. ಈ ಹಬ್ಬ ಅನೇಕರ ಜೀವನಕ್ಕೆ ಆಸರೆಯಾಗಿದೆ. ಸರ್ಕಾರ ನಮ್ಮ ಭಾವನೆ ಕೆರಳಿಸಲು ಪ್ರಯತ್ನಿಸಬಾರದು.” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...