Homeಕರ್ನಾಟಕಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

- Advertisement -
- Advertisement -

‘‘ಗಣೇಶ ಹಬ್ಬದಲ್ಲಿ ಎಷ್ಟು ಗಾತ್ರದ ಮೂರ್ತಿಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಈ ಮೂರ್ತಿ ಹಿಂದೆ ಅನೇಕ ವರ್ಗದ ಜನರ ಜೀವನ ಅವಲಂಬಿತವಾಗಿದೆ. ಯಾರು, ಯಾವ ರೀತಿಯಲ್ಲಿ ಪೂಜೆ ಮಾಡಬೇಕು ಎಂಬುದು ಅವರವರ ವೈಯಕ್ತಿಕ ಭಾವಕ್ಕೆ ಬಿಟ್ಟ ವಿಚಾರ. ಇದಕ್ಕೆ ಬಿಜೆಪಿ ಸರ್ಕಾರ ನಿರ್ಬಂಧ ಹೇರಬಾರದು. ಸರ್ಕಾರ ತನ್ನ ನಿರ್ಬಂಧ ಆದೇಶ ಹಿಂಪಡೆಯಬೇಕು” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮೂರ್ತಿಯ ಗಾತ್ರ ಹಾಗೂ ಹಬ್ಬ ಆಚರಣೆ ಅವಧಿಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ನಗರದ ಮಾವಳ್ಳಿಯ ಗಣೇಶ ಮೂರ್ತಿ ತಯಾರಕರು ಮತ್ತು ಮಾರಾಟಗಾರರನ್ನು ಗುರುವಾರ ಭೇಟಿ ಮಾಡಿ, ಅವರ ಸಮಸ್ಯೆ ಆಲಿಸಿದ್ದಾರೆ. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘‘ಈ ದೇಶದ ಸಂಸ್ಕೃತಿ ನಮ್ಮ ಆಸ್ತಿ. ಈ ಸಂಸ್ಕೃತಿಯಲ್ಲಿ ನಾವು ಬೆಳೆಯುತ್ತಿದ್ದೇವೆ. ಯಾವ ಧರ್ಮದವರು ಹೇಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಭಾರತದಲ್ಲಿ ಹಿಂದೂಗಳ ಜತೆಗೆ ಇತರೆ ಧರ್ಮದವರು ಕೂಡ ವಿಘ್ನಗಳನ್ನು ನಿವಾರಣೆ ಮಾಡುವ ವಿನಾಯಕನ ಪೂಜೆ ಮಾಡುತ್ತಾರೆ. ಸಣ್ಣ ಸಗಣಿ ಉಂಡೆಗೆ ಒಂದು ಗರಿಕೆಯಿಟ್ಟು ಅದನ್ನು ಗಣೇಶ ಎಂದು ನಾವು ಪೂಜೆ ಮಾಡುತ್ತೇವೆ. ಇದೇ ನಮ್ಮ ಹಿರಿಯರು, ನಮ್ಮ ಸಂಸ್ಕೃತಿ ನಮಗೆ ತೋರಿರುವ ಮಾರ್ಗದರ್ಶನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

“ಕೋವಿಡ್ ಸಮಯದಲ್ಲಿ ದೇವಸ್ಥಾನ ತೆರೆಯಲು ಅವಕಾಶ ಕೊಟ್ಟಿದ್ದೀರಿ. ನಿಮ್ಮವರು ಒಕ್ಕೂಟ ಸರ್ಕಾರದ ಸಚಿವರಾದರು ಎಂಬುದಕ್ಕೇ ಜನಾಶೀರ್ವಾದ ಯಾತ್ರೆ ಮಾಡಿಸುತ್ತಿದ್ದೀರಿ. ಚುನಾವಣೆ ನಡೆಸುತ್ತಿದ್ದೀರಿ. ಈಗ ಬಿಜೆಪಿ ನಾಯಕರು ಶಿಫಾರಸ್ಸು ಮಾಡುವ ಕಡೆ ವಾರ್ಡ್‌ನಲ್ಲಿ ಒಂದು ಗಣೇಶ ಇಟ್ಟು ಪೂಜೆ ಮಾಡಬೇಕು. ಅದೂ ಮನೆಯಲ್ಲಿ 2 ಅಡಿ, ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಮೂರ್ತಿ ಮಾತ್ರ ಇಡಬೇಕು ಎಂದು ನಿರ್ಬಂಧ ಹಾಕಿದ್ದೀರಿ? ಇದು ಸರಿಯೇ? ಈಗ ಇಷ್ಟು ದೊಡ್ಡ ಗಣೇಶ ಮೂರ್ತಿ ಮಾಡಿರುವವರ ಕತೆ ಏನಾಗಬೇಕು. ಸರ್ಕಾರ ಇದೇ ಆದೇಶವನ್ನು 3 ತಿಂಗಳ ಹಿಂದೆಯೇ ಯಾಕೆ ಪ್ರಕಟಿಸಲಿಲ್ಲ?” ಎಂದು ಶಿವಕುಮಾರ್‌ ಪ್ರಶ್ನಿಸಿದ್ದಾರೆ.

“ಎಷ್ಟು ಗಾತ್ರದ ವಿಗ್ರಹ ಪೂಜೆ ಮಾಡಬೇಕು ಅಂತಾ ನಿರ್ದೇಶನ ನೀಡಲು ನೀವ್ಯಾರು? ಇದು ನಮ್ಮ ವೈಯಕ್ತಿಕ ವಿಚಾರ. ಇದರಲ್ಲಿ ನಿಮ್ಮ ಸಮಸ್ಯೆ ಏನು? ಕೋವಿಡ್ ಮಾರ್ಗಸೂಚಿ ಏನು ಬೇಕಾದರೂ ಮಾಡಿಕೊಳ್ಳಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಒಕ್ಕೂಟ ಸರ್ಕಾರ ಇಡೀ ದೇಶಕ್ಕೆ ಒಂದು ಕೋವಿಡ್ ಮಾರ್ಗಸೂಚಿ ಪ್ರಕಟಿಸಿರುವಾಗ ಬಿಜೆಪಿ ಆಡಳಿತದಲ್ಲಿರುವ ಕರ್ನಾಟಕಕ್ಕೂ ಗುಜರಾತ್, ಮಧ್ಯ ಪ್ರದೇಶ ಹಾಗೂ ಇತರೆ ರಾಜ್ಯಗಳಲ್ಲಿ ಕೋವಿಡ್ ನಿಯಮದಲ್ಲಿ ವ್ಯತ್ಯಾಸ ಏಕಿದೆ?” ಎಂದು ಅವರು ಕೇಳಿದ್ದಾರೆ.

“ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಮಾವಳಿ ಹಾಕಿದರೆ ಅದನ್ನು ನಿಮ್ಮ ಪಕ್ಷದ ಕಾರ್ಯಕರ್ತರೇ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಇದು ಉಲ್ಟಾ ಆಗಿದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಹೀಗೆ ಇದು ನಮ್ಮ ವೈಯಕ್ತಿಕ ವಿಚಾರ. ಅದಕ್ಕೆ ನಿರ್ಬಂಧ ಹಾಕುವುದು ಸರಿಯಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

“ಗಣೇಶ ವಿಗ್ರಹವನ್ನು ಸಾಮಾನ್ಯರು ಮಾಡಲು ಸಾಧ್ಯವಿಲ್ಲ. ಈ ಕಸುಬು, ಕಲೆಯನ್ನು ಕಲಿತು, ಅದನ್ನೇ ನಂಬಿ ಜೀವನ ಮಾಡುತ್ತಿರುವವರು ಮಾತ್ರ ಮಾಡಲು ಸಾಧ್ಯ. ಬೇರೆ ರಾಜ್ಯಗಳಲ್ಲಿ ಇವರಿಗೆ ಪರಿಹಾರ ನೀಡಿದ್ದಾರೆ. ಆದರೆ ನೀವು ಯಾವ ಪರಿಹಾರ ಕೊಟ್ಟಿದ್ದೀರಿ? ಲೆಕ್ಕ ಇದೆಯಾ? ರಾಜ್ಯದಲ್ಲಿ ಹೂವು, ಹಣ್ಣು ವ್ಯಾಪಾರದವರು, ಆರ್ಕೆಸ್ಟ್ರಾ, ಪೆಂಡಾಲ್ ವ್ಯಾಪಾರಿಗಳಲ್ಲಿ ಯಾರಿಗೆ ನೀವು ಪರಿಹಾರ ಕೊಟ್ಟಿದ್ದೀರಿ? ಮೂರ್ತಿಗೆ ನಿರ್ಬಂಧ ಹೇರಿರುವುದರಿಂದ ಇವರೆಲ್ಲರಿಗೂ ಹೊಡೆತ ಬೀಳಲಿದೆ. ಇದು ಕೇವಲ ಪಾಲಿಕೆ ವ್ಯಾಪ್ತಿಗೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಒಂದೇ ನೀತಿ ಇರಬೇಕು. ಒಂದೇ ದೃಷ್ಟಿಯಲ್ಲಿ ನೋಡಬೇಕು” ಎಂದು ಅವರು ಹೇಳಿದ್ದಾರೆ.

‘‘ಇಲ್ಲಿ ಹಿಂದೂ ಭಾವನೆ ಒಂದೇ ಅಲ್ಲ. ಇದು ಎಲ್ಲರ ಭಕ್ತಿ, ಉತ್ಸಾಹದ ವಿಚಾರ. ಸರ್ಕಾರ ಗಣೇಶ ಹಬ್ಬ ಆಚರಣೆಗೆ 10-15 ದಿನಗಳ ಅವಕಾಶ ನೀಡಬೇಕು. ಆರ್ಕೆಸ್ಟ್ರಾ ಮತ್ತಿತರ ಮನರಂಜನೆ ಕಾರ್ಯಕ್ರಮಕ್ಕೂ ಅವಕಾಶ ಇರಬೇಕು. ಕೋವಿಡ್ ನಿಯಮಾವಳಿ ವ್ಯಾಪ್ತಿಯಲ್ಲೇ ಆಚರಣೆಗೆ ಅವಕಾಶ ನೀಡಬೇಕು. ಕೋವಿಡ್ ನಿಯಮ ಮಾಡಿದರೆ ಅದು ಎಲ್ಲರಿಗೂ ಅನ್ವಯವಾಗಬೇಕು” ಎಂದು ಡಿಕೆಶಿ ತಿಳಿಸಿದ್ದಾರೆ.

“ಹೊಸದಾಗಿ ಒಕ್ಕೂಟ ಸರ್ಕಾರದ ಮಂತ್ರಿಯಾದವರಿಗೆ ಜನಾಶೀರ್ವಾದ ಮಾಡಲು ಅವಕಾಶ ಕೊಟ್ಟಿದ್ದೇಕೆ? ಬೇರೆ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಯಾಕೆ? ಪ್ರತಿಭಟನೆ ಮಾಡುತ್ತಿದ್ದ ಹೆಣ್ಣು ಮಕ್ಕಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದೇಕೆ? ಕಾನೂನು ಒಬ್ಬೊಬ್ಬರಿಗೆ ಒಂದು ಎಂಬಂತೆ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ತಮ್ಮ ಪಕ್ಷದ ಆಂತರಿಕ ವಿಚಾರಕ್ಕೆ ಕೈಗೊಂಬೆಯಾಗಬಾರದು. ಗಣೇಶನ ಪೂಜೆ ಎಲ್ಲರ ಹಕ್ಕು, ಎಲ್ಲರ ಆಸ್ತಿ. ಎಲ್ಲ ಧರ್ಮದವರು ತಮ್ಮ ಸಂಪ್ರದಾಯ ಆಚರಣೆಗೆ ಅವಕಾಶ ಮಾಡಿಕೊಡಿ. ಈ ಹಬ್ಬ ಅನೇಕರ ಜೀವನಕ್ಕೆ ಆಸರೆಯಾಗಿದೆ. ಸರ್ಕಾರ ನಮ್ಮ ಭಾವನೆ ಕೆರಳಿಸಲು ಪ್ರಯತ್ನಿಸಬಾರದು.” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...