Homeಕರ್ನಾಟಕಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

- Advertisement -
- Advertisement -

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಎರಡನೆ ದಿನವು ಮುಂದುವರೆದಿದ್ದು, ಆರನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದಿದ್ದಾರೆ. ಆದರೆ ರಾಜ್ಯ ಸರ್ಕಾರ ನೌಕರರ ಹೋರಾಟವನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ‘ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುತ್ತೇವೆ” ಎಂದು ಗುರುವಾರ ಹುಮ್ನಾಬಾದ್‌ನಲ್ಲಿ ಹೇಳಿದ್ದಾರೆ.

ಹುಮ್ನಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ, “ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು.‌ ಅದು ನಮ್ಮ‌ಕೆಲಸ. ಅದನ್ನು ನಾವು ಮಾಡುತ್ತೇವೆ. ಈ ಸಂಬಂಧ ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಪಟ್ಟು ಬಿಡದ ಸರ್ಕಾರ, ರೋಡಿಗಿಳಿದ ಖಾಸಗಿ ಬಸ್‌ಗಳು

ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಕಣ್ಣಿಗೆ ಕಾಣುತ್ತಿದೆ. ಜನ ಎಷ್ಟು ಪರಿತಪಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಷ್ಕರದಿಂದ ಸಾರಿಗೆ ಸಂಸ್ಥೆಗೆ ನಷ್ಟವಾಗುತ್ತಿದೆ. ಸಾರಿಗೆ ಸಂಸ್ಥೆಗಳನ್ನು ಗಟ್ಟಿಗೊಳಿಸಿದೆ ಶಾಶ್ವತವಾಗಿ ನೌಕರರ ಹಿತ ಕಾಯುವುದು ಎಷ್ಟು ಕಷ್ಟ ಎಂಬುದು ಎಲ್ಲರಿಗೂ ಅರಿವಿದೆ” ಎಂದು ಅವರು ತಿಳಿಸಿದ್ದಾರೆ.

“ಸಾರಿಗೆ ಸಂಸ್ಥೆಯು ಉಳಿಯಬೇಕು. ನೌಕರರಿಗೂ ಒಳ್ಳೆಯ ಸಂಬಳ ಸಿಗಬೇಕು. ಅದು ದುಡಿಮೆಯಿಂದ ಮಾತ್ರ ಸಾಧ್ಯ. ದುಡಿಮೆ ಇಲ್ಲದೆ ಅದು ಅಸಾಧ್ಯ. ಮುಷ್ಕರನಿರತ ಸಾರಿಗೆ ನೌಕರರಿಗೆ ಕಳಕಳಿಯ ಮನವಿ ಮಾಡುತ್ತೇನೆ. ಕೆಲಸಕ್ಕೆ ಹಾಜರಾಗಿ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ” ಎಂದು ಬಸವರಾಜ ಬೊಮ್ಮಾಯಿ ವಿನಂತಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಎಪ್ರಿಲ್ 7 ರಿಂದ ಮುಷ್ಕರ ನಡೆಸುತ್ತಿದ್ದು, ಎರಡನೇ ದಿನವಾದ ಇಂದು ಕೂಡಾ ಮುಷ್ಕರ ಮುಂದುವರೆದಿದೆ. ಮುಖ್ಯವಾಗಿ ಆರನೇ ವೇತನ ಆಯೋಗದ ಪ್ರಕಾರ ವೇತನ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಎಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ – ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...