Homeಕರ್ನಾಟಕಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

ಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಕೊರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಹೊರಡಿಸಿದ ಲಾಕ್‌ಡೌನ್‌ ಹೊರತುಪಡಿಸಿ, ವೈರಸ್‌ ತಡೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಸಾವಿರ ವೆಂಟಿಲೇಟರ್, 10 ಲಕ್ಷ #N95masks, 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್‌ ಮಾಸ್ಕ್‌ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ ಎಂದಿದ್ದಾರೆ.

ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ. ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಿಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು. ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು. ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು, ಕಾರ್ಯರೂಪಕ್ಕೆ ಬರಬೇಕು. ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...