Homeಕರ್ನಾಟಕಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

ಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಕೊರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಹೊರಡಿಸಿದ ಲಾಕ್‌ಡೌನ್‌ ಹೊರತುಪಡಿಸಿ, ವೈರಸ್‌ ತಡೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಸಾವಿರ ವೆಂಟಿಲೇಟರ್, 10 ಲಕ್ಷ #N95masks, 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್‌ ಮಾಸ್ಕ್‌ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ ಎಂದಿದ್ದಾರೆ.

ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ. ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಿಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು. ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು. ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು, ಕಾರ್ಯರೂಪಕ್ಕೆ ಬರಬೇಕು. ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...