Homeಕರ್ನಾಟಕಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

ಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಕೊರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಹೊರಡಿಸಿದ ಲಾಕ್‌ಡೌನ್‌ ಹೊರತುಪಡಿಸಿ, ವೈರಸ್‌ ತಡೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಸಾವಿರ ವೆಂಟಿಲೇಟರ್, 10 ಲಕ್ಷ #N95masks, 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್‌ ಮಾಸ್ಕ್‌ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ ಎಂದಿದ್ದಾರೆ.

ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ. ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಿಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು. ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು. ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು, ಕಾರ್ಯರೂಪಕ್ಕೆ ಬರಬೇಕು. ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....