Homeಚಳವಳಿಸರ್ಕಾರದ ಅಜೆಂಡಾ ಸ್ಪಷ್ಟವಾಗಿದೆ, ರೈತ ಚಳವಳಿಗೆ ಸ್ಪಷ್ಟ ಅಜೆಂಡಾ ಬೇಕಿದೆ: ಚುಕ್ಕಿ ನಂಜುಂಡಸ್ವಾಮಿ

ಸರ್ಕಾರದ ಅಜೆಂಡಾ ಸ್ಪಷ್ಟವಾಗಿದೆ, ರೈತ ಚಳವಳಿಗೆ ಸ್ಪಷ್ಟ ಅಜೆಂಡಾ ಬೇಕಿದೆ: ಚುಕ್ಕಿ ನಂಜುಂಡಸ್ವಾಮಿ

ಭಾರತದ ರೈತ ಚಳವಳಿಗಳು ಈಗಲಾದರೂ ಆಲೋಚಿಸಬೇಕಾದ್ದು ತಮ್ಮದೇ ಆದ ಉತ್ಪಾದನಾ ವ್ಯವಸ್ಥೆ, ಮೌಲ್ಯವರ್ಧನೆ ವ್ಯವಸ್ಥೆ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಸ್ಥಾಪಿಸುವುದರ ಬಗ್ಗೆ.

- Advertisement -
- Advertisement -

ರೈತ ಕುಲವನ್ನು ಒಕ್ಕಲೆಬ್ಬಿಸಿ ಕೃಷಿ ಕ್ಷೇತ್ರವನ್ನು ಇಡಿಯಾಗಿ ಕಾರ್ಪೋರೆಟ್ ಕಂಪೆನಿಗಳಿಗೆ ಮಾರಲು ಸರ್ಕಾರಗಳು ತುದಿಗಾಲಲ್ಲಿ ನಿಂತಿವೆ. ಇದೇನೂ ಹೊಸ ಬೆಳವಣಿಗೆಯಲ್ಲ. 1995ರಲ್ಲಿ ಭಾರತ ಸರ್ಕಾರ ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಿದ ದಿನದಿಂದಲೇ ಈ ದೇಶದ ರೈತರ ಲೂಟಿ ಶುರುವಾಯ್ತು. ಅದಾದ ನಂತರ ಭಾರತ ಕಂಡ ರೈತರ ಆತ್ಮಹತ್ಯೆಯ ಸಂಖ್ಯೆ ಬಹುಶಃ ಪ್ರಪಂಚದ ಬೇರೆ ಯಾವ ದೇಶಗಳೂ ಕಾಣಲಿಲಿಲ್ಲ. ಭಾರತದ ರೈತರ ಆತ್ಮಹತ್ಯೆಗೂ ಭಾರತ ಅಪ್ಪಿಕೊಂಡ ಉದಾರೀಕರಣದ ನೀತಿಗೂ ನೇರ ಸಂಬಂಧವಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ.

ಈ ಅಭಿಪ್ರಾಯವನ್ನು ಖಾತ್ರಿಪಡಿಸುವ ವರದಿಯೊಂದಿದೆ. Indian Council for Research on International Economic Relations (ICRIER) ಮತ್ತು OECD 2018ರಲ್ಲಿ ಹಮ್ಮಿಕೊಂಡಿದ್ದ ಎರಡು ವರ್ಷಗಳ ದೀರ್ಘ ಅಧ್ಯಯನದಲ್ಲಿ ಹೊರಬಂದ ಪ್ರಮುಖ ಅಂಶವೆಂದರೆ 2000-01 ರಿಂದ 2016-17 ನಡುವಿನ ವರ್ಷಗಳ ಲೆಕ್ಕ ತೆಗೆದುಕೊಂಡಾಗ ಭಾರತದ Producer Support Estimate(PSE) “ಉತ್ಪಾದಕ ಬೆಂಬಲ ಅಂದಾಜಿ”ನ ಮೊತ್ತ (ತೆರಿಗೆದಾರರು ಮತ್ತು ಗ್ರಾಹಕರು ರೈತರಿಗೆ ಹಣದ ರೂಪದಲ್ಲಿ ಕೊಡುವ ಬೆಂಬಲ. ಸಬ್ಸಿಡಿಗಳು ಇದರ ಅಡಿಯಲ್ಲಿ ಬರುತ್ತವೆ) ಮೊತ್ತ ಒಟ್ಟು ಕೃಷಿಕರಿಗೆ ಪಾವತಿಯಾದ ಸರಾಸರಿ ಮೊತ್ತಕ್ಕಿಂತ 14% ಕಡಿಮೆ ಇದೆ. ಇದರ ವಾರ್ಷಿಕ ಮೊತ್ತ 2.65 ಟ್ರಿಲಿಯನ್ ಅಂದರೆ ಹದಿನೇಳು ವರ್ಷಗಳಿಗೆ 45 ಟ್ರಿಲಿಯನ್ ರೂಪಾಯಿಗಳು. ಇದು ಭಾರತದ ರೈತರ ಮೇಲೆ ವಿಧಿಸಿದ ಪರೋಕ್ಷವಾದ ತೆರಿಗೆ ಎಂದು ಕೆಲವು ಅರ್ಥಶಾಸ್ತ್ರಜ್ಞರು ಕರೆಯುತ್ತಾರೆ. ಇದನ್ನು ನೇರವಾಗಿ ಹೇಳುವುದಾದರೆ ಇದು ಭಾರತದ ರೈತರ ಲೂಟಿ. ಈ ಲೂಟಿ ನಡೆದಿರುವುದು ಅನೇಕ ಹೆಸರುಗಳಲ್ಲಿ. ನಿರ್ಬಂಧಿತ ಮಾರುಕಟ್ಟೆ, ವಾಣಿಜ್ಯ ನೀತಿಗಳು ಅಥವಾ ಗ್ರಾಹಕರ ಪರ ವಾಲಿರುವ ಮಾರುಕಟ್ಟೆ. ಅದೇನೇ ಇರಲಿ. ಜಗತ್ತಿನ ಯಾವ ದೇಶವೂ ಅನ್ನದಾತರನ್ನು ಇಷ್ಟು ಅಮಾನವೀಯವಾಗಿ ಲೂಟಿ ಮಾಡಿಲ್ಲ. ವಾಸ್ತವ ಹೀಗಿರುವಾಗ ರೈತ ಆತ್ಮಹತ್ಯೆ ಮಾಡಿಕೊಳ್ಳದೇ ಬೇರೆ ದಾರಿ ಏನಿದೆ?

ಸ್ವಾತಂತ್ರ್ಯೋತ್ತರ ಭಾರತ ಆಹಾರದ ಕೊರತೆಯನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಈ ದೇಶದ ಗಡಿ ಕಾದು ದೇಶವನ್ನು ರಕ್ಷಿಸಿದ ಯೋಧರ ಹಾಗೇ ದೇಶದ ಆಹಾರದ ಬುಟ್ಟಿಯನ್ನು ತುಂಬಿಸಿದ್ದು ಈ ದೇಶದ ಮಣ್ಣಿನ ಮಕ್ಕಳು. ಗಡಿ ಕಾಯುತ್ತಿದ್ದ ಸೈನಿಕರು ತಮ್ಮ ಜೀವವನ್ನೇ ಒತ್ತೆ ಇಟ್ಟರೆ ಇಲ್ಲಿ ರೈತರು ತಮ್ಮ ಪೂರ್ವಜರು ಕಾಪಾಡಿಕೊಂಡು ಬಂದಿದ್ದ ಮಣ್ಣು, ಬೀಜ ಮತ್ತು ಕೃಷಿ ಜ್ಞಾನವನ್ನೇ ಒತ್ತೆ ಇಟ್ಟರು. ಹಸಿರು ಕ್ರಾಂತಿಯ ಹೆಸರಿನಲ್ಲಿ ನಡೆದದ್ದೂ ಕೂಡ ಮಣ್ಣಿನ ಲೂಟಿ, ಬೀಜದ ಲೂಟಿ ಮತ್ತು ಸಾಂಪ್ರದಾಯಿಕ ಜ್ಞಾನದ ಲೂಟಿ. ಹಸಿರು ಕ್ರಾಂತಿ ನಡೆದ ಅರವತ್ತು ವರ್ಷಗಳ ನಂತರ ಮಣ್ಣಿನಲ್ಲಿದ್ದ ಸಾವಯವ ಇಂಗಾಲ ಇಲ್ಲದಂತಾಗಿದೆ. ಸೂಕ್ಷ್ಮಾಣುಜೀವಿಗಳು ಸತ್ತುಹೋಗಿವೆ. ಮಣ್ಣು ಬರಡಾಗಿದೆ. ಸಹಜವಾಗಿಯೆ ಇಳುವರಿ ಕಡಿಮೆಯಾಗಿದೆ.


ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ


ಭಾರತದ ಬೆನ್ನೆಲುಬು ಎಂದು ಕರೆಯಲ್ಪಡುವ ಕೃಷಿ ಕ್ಷೇತ್ರದ ಪರಿಸ್ಥಿತಿ ಹೀಗಿರುವಾಗ ನಮ್ಮನ್ನಾಳುತ್ತಿರುವ ಸರ್ಕಾರಗಳಿಗೆ ಸ್ವಲ್ಪವಾದರೂ ಕಾಳಜಿ ಇದ್ದಿದ್ದರೆ ಬರೀ ಘೋಷಣೆಗೆ ಸೀಮಿತವಾಗಿರುವ ಎಂಎಸ್‍ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುವ ಎಲ್ಲಾ ಇಪ್ಪತ್ಮೂರು ಬೆಳೆಗಳಿಗೂ ಅದು ಶಾಸನಬದ್ಧವಾಗಿ ಅನ್ವಯವಾಗುವಂತೆ ಸುಗ್ರೀವಾಜ್ಞೆ ಹೊರಡಿಸಬೇಕಿತ್ತು. ಘೋಷಿಸುವುದೇ ಅಲ್ಲ ಅದನ್ನು ಸರ್ಕಾರ ಖರೀದಿ ಮಾಡಲು ಎಪಿಎಂಸಿಯಲ್ಲಿ ಇದ್ದಂತಹ ಲೋಪದೋಷಗಳನ್ನು ಸರಿಪಡಿಸಿ ವ್ಯವಸ್ಥೆಯನ್ನು ರೂಪಿಸುವ ಸುಗ್ರೀವಾಜ್ಞೆ ತರಬೇಕಾಗಿತ್ತು. ಆದರೆ ಸೋರುತ್ತಿರುವ ಮಾಳಿಗೆಯ ರಂಧ್ರಗಳನ್ನು ಮುಚ್ಚದೆ ಮಾಳಿಗೆಯನ್ನೇ ತೆಗೆದು ಹಾಕಿ ರೈತರಿಗೆ ಯಾರಿಗೆ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಕೊಟ್ಟಿದ್ದೇವೆ ಎನ್ನುವುದು ರೈತರಿಗೆ ಕೊಟ್ಟಿರುವ ಸ್ವಾತಂತ್ರ್ಯವೋ ಅಥವಾ ರೈತರನ್ನು ಲೂಟಿ ಮಾಡಲು ಕಾರ್ಪೋರೆಟ್ ಕಂಪೆನಿಗಳಿಗೆ ಕೊಟ್ಟಿರುವ ಸ್ವಾತಂತ್ರ್ಯವೋ ಎನ್ನುವುದು ರೈತ ವಿರೋಧಿ ಸುಗ್ರೀವಾಜ್ಞೆಗಳನ್ನು ವಿರೋಧಿಸುತ್ತಿರುವ ರೈತರಿಗೆ ಈಗಾಗಲೇ ಸ್ಪಷ್ಟವಾಗಿ ಅರ್ಥವಾಗಿದೆ.

ಇಷ್ಟೆಲ್ಲಾ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಚಳವಳಿಗಳತ್ತ ತಿರುಗಿಯೂ ನೋಡುತ್ತಿಲ್ಲ. ಸರ್ಕಾರದ ಅಜೆಂಡಾ ಬಹಳ ಸ್ಪಷ್ಟವಾಗಿದೆ. ರೈತರ ಸರ್ವನಾಶಕ್ಕೆ ಪಣ ತೊಟ್ಟು ನಿಂತಿರುವ ಸರ್ಕಾರದ ವಿರುದ್ಧ ಕೇವಲ ಪ್ರತಿಭಟನೆಗಳನ್ನು ಹಮ್ಮಿಕೊಂಡರಷ್ಟೇ ಸಾಲದು ಎನಿಸುತ್ತದೆ.

ದೇಶದ ರೈತರ ಪಾಲಿಗೆ, ಕೃಷಿ ಕಾರ್ಮಿಕರ ಪಾಲಿಗೆ, ಮಹಿಳಾ ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆ ಎಂದು ಘೋಷಣೆ ಕೂಗಿದರಷ್ಟೇ ಸಾಲದು. ಅದು ವಾಸ್ತವ ಎಂಬ ಸತ್ಯವನ್ನು ಆಳವಾಗಿ ಅರ್ಥ ಮಾಡಿಕೊಳ್ಳಲೇಬೇಕಾದ ಸಂದರ್ಭದಲ್ಲಿ ನಾವಿದ್ದೇವೆ. ಭಾರತದ ರೈತ ಚಳವಳಿಗಳು ತಮ್ಮ ಅಜೆಂಡಾದ ಬಗ್ಗೆ ಪರಾಮರ್ಶೆ ಮಾಡಿಕೊಳ್ಳುವ ಅವಶ್ಯಕತೆ ಈಗ ಇದೆ. ಈ ಗ್ರಹಿಕೆ ನಮ್ಮಲ್ಲಿ ಆಳವಾಗಿ ಬೇರೂರಿದಾಗ ಮಾತ್ರ ನಮ್ಮ ಎದುರಿರುವ ಸವಾಲುಗಳಿಗೆ ಶಾಶ್ವತವಾದ ಉತ್ತರ ಹುಡುಕಲು ಸಾಧ್ಯ. ಆಗ ಸಂಘರ್ಷವಷ್ಟೇ ಸಾಲದು, ಅದರ ಜೊತೆಗೆ ನೇರ ಕಾರ್ಯಕ್ರಮಗಳ ಮೂಲಕ ಕ್ರಿಯಾತ್ಮಕ ನಿರ್ಮಾಣ ಕೆಲಸಕ್ಕೂ ಕೈಹಾಕಬೇಕು ಅನ್ನುವ ಅಭಿಪ್ರಾಯಕ್ಕೆ ಬರಬಹುದು.


ಇದನ್ನೂ ಓದಿ: ಸಂದರ್ಶನ – ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ


ಭಾರತದ ರೈತ ಚಳವಳಿಗಳು ಈಗಲಾದರೂ ಆಲೋಚಿಸಬೇಕಾದ್ದು ತಮ್ಮದೇ ಆದ ಉತ್ಪಾದನಾ ವ್ಯವಸ್ಥೆ, ಮೌಲ್ಯವರ್ಧನೆ ವ್ಯವಸ್ಥೆ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಸ್ಥಾಪನೆ ಮಾಡುವುದರ ಬಗ್ಗೆ. ಈ ಬಗ್ಗೆ ಅಗತ್ಯವಾದ ತರಬೇತಿಗಳನ್ನು ರೈತಮಕ್ಕಳಿಗೆ ಕೊಡಿಸುವುದರ ಬಗ್ಗೆ ಸಮಗ್ರವಾಗಿ ಚಿಂತಿಸಿ ಮತ್ತು ಅನುಷ್ಠಾನಗೊಳಿಸಿ ಇದರ ಮೂಲಕ ದೇಶವನ್ನು ಕಾಡುತ್ತಿರುವ ಮತ್ತೊಂದು ಸಮಸ್ಯೆ ನಿರುದ್ಯೋಗಕ್ಕೂ ಉತ್ತರ ಕಂಡುಕೊಳ್ಳಬೇಕಾಗಿದೆ.

ನಮ್ಮದೇ ಆದ ಪರ್ಯಾಯ ವ್ಯವಸ್ಥೆಗಳನ್ನು ಕಟ್ಟಿಕೊಳ್ಳುವುದರ ಮೂಲಕ ಸರ್ಕಾರಿ ವ್ಯವಸ್ಥಗಳಿಗೆ ಬದಲಿಯಾದ ಮತ್ತು ರೈತಸ್ನೇಹಿಯಾದ ವ್ಯವಸ್ಥೆಯ ಧ್ವಜಾರೋಹಣ ಮಾಡಬೇಕಾಗಿದೆ. ಇಡೀ ಭಾರತದ ರೈತ ಚಳವಳಿಯ ಒಂದು ಭಾಗ ಈ ಕೆಲಸವನ್ನು ಗಂಭೀರವಾಗಿ ಮಾಡಲೇಬೇಕಿದೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕಾರ್ಪೋರೇಟ್ ಕಂಪೆನಿಗಳ ಕೂಲಿಗಳಾಗುವುದರಲ್ಲಿ ಸಂಶಯವೇ ಇಲ್ಲ.

ಇದನ್ನು ರೈತ ಸಂಘಟನೆಗಳು ಕೈಗೆತ್ತಿಕೊಂಡು ಕರೆಕೊಟ್ಟರೆ ಸಾಕು, ಇದರ ಜೊತೆಗೆ ಕೆಲಸ ಮಾಡಲು ಮನಸ್ಸಿರುವ ಅನೇಕ ನಗರವಾಸಿ ತಂತ್ರಜ್ಞರು ಕೈಜೋಡಿಸುವ ಸಾಧ್ಯತೆ ಇದೆ. ಇದೇನೂ ಬಹಳ ಕಷ್ಟದ ಕೆಲಸವಲ್ಲ.


ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ


ಇದರ ಪ್ರಯೋಗವಾಗಿಯೆ ನಮ್ದು ಎಂಬ ಬ್ರ್ಯಾಂಡ್‍ಅನ್ನು ಪ್ರಾರಂಭ ಮಾಡುವುದರ ಮೂಲಕ ಕ್ರಿಯಾತ್ಮಕ ಪ್ರತಿರೋಧವನ್ನು ಒಡ್ಡುವ ಕೆಲಸವನ್ನು ಈಗಾಗಲೇ ನಾವು ಪ್ರಾರಂಭ ಮಾಡಿದ್ದೇವೆ. ಇದು ರೈತರ ಹಿಡಿತದಲ್ಲಿರುವ ಮಾರುಕಟ್ಟೆ ವ್ಯವಸ್ಥೆ. ಇಲ್ಲಿ ನೈಸರ್ಗಿಕವಾಗಿ ಬೆಳೆದ ಉತ್ಪನ್ನಗಳಿಗೆ ರೈತರೇ ಬೆಲೆ ನಿಗದಿ ಮಾಡುತ್ತಾರೆ. ಉಪ ಉತ್ಪನ್ನಗಳನ್ನು ಮತ್ತು ಮೌಲ್ಯವರ್ಧನೆಗೊಳಿಸಿದ ವಸ್ತುಗಳನ್ನು ನೇರವಾಗಿ ರೈತರೇ ಮಾರಾಟ ಮಾಡುತ್ತಾರೆ.

ಇಡೀ ದೇಶದಾದ್ಯಂತ ಭುಗಿಲೆದ್ದಿರುವ ರೈತರ ಪ್ರತಿರೋಧ, ಕೇವಲ ಈ ಕಾನೂನುಗಳನ್ನು ವಿರೋಧಿಸುವುದಕ್ಕೆ ಸೀಮಿತವಾಗದೆ ಮುಂಬರಬಹುದಾದ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಬೇಕಾದ ಎಲ್ಲ ರೀತಿಯ ವೈಚಾರಿಕ, ಸೈದ್ಧಾಂತಿಕ ಮತ್ತು ಕ್ರಿಯಾತ್ಮಕ ಪ್ರತಿರೋಧಗಳಿಗೆ ಅವಕಾಶವಾಗಬೇಕು.
ರೈತ ಚಳವಳಿಗೆ ಜಯವಾಗಲಿ!


(ಚಿಕ್ಕಂದಿನಿಂದಲೂ ರೈತ ಚಳವಳಿಯ ಜೊತೆಗೇ ಬೆಳೆದ ಚುಕ್ಕಿ, ಈಗ ರೈತ ಚಳವಳಿಯ ರಾಜ್ಯ ನಾಯಕಿಯರಲ್ಲೊಬ್ಬರು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹಾಗೂ ತೃತೀಯ ದೇಶಗಳ ರೈತರನ್ನು ಪ್ರತಿನಿಧಿಸುವವರು. ಪ್ರಸ್ತುತ ಚಾಮರಾಜನಗರದ ಅಮೃತಭೂಮಿಯ ವಿಶಿಷ್ಟ ರೈತ ಪ್ರಯೋಗ ಶಾಲೆಯ ಮುಖ್ಯಸ್ಥರು.)


ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...