Homeಚಳವಳಿಸರ್ಕಾರದ ಅಜೆಂಡಾ ಸ್ಪಷ್ಟವಾಗಿದೆ, ರೈತ ಚಳವಳಿಗೆ ಸ್ಪಷ್ಟ ಅಜೆಂಡಾ ಬೇಕಿದೆ: ಚುಕ್ಕಿ ನಂಜುಂಡಸ್ವಾಮಿ

ಸರ್ಕಾರದ ಅಜೆಂಡಾ ಸ್ಪಷ್ಟವಾಗಿದೆ, ರೈತ ಚಳವಳಿಗೆ ಸ್ಪಷ್ಟ ಅಜೆಂಡಾ ಬೇಕಿದೆ: ಚುಕ್ಕಿ ನಂಜುಂಡಸ್ವಾಮಿ

ಭಾರತದ ರೈತ ಚಳವಳಿಗಳು ಈಗಲಾದರೂ ಆಲೋಚಿಸಬೇಕಾದ್ದು ತಮ್ಮದೇ ಆದ ಉತ್ಪಾದನಾ ವ್ಯವಸ್ಥೆ, ಮೌಲ್ಯವರ್ಧನೆ ವ್ಯವಸ್ಥೆ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಸ್ಥಾಪಿಸುವುದರ ಬಗ್ಗೆ.

- Advertisement -
- Advertisement -

ರೈತ ಕುಲವನ್ನು ಒಕ್ಕಲೆಬ್ಬಿಸಿ ಕೃಷಿ ಕ್ಷೇತ್ರವನ್ನು ಇಡಿಯಾಗಿ ಕಾರ್ಪೋರೆಟ್ ಕಂಪೆನಿಗಳಿಗೆ ಮಾರಲು ಸರ್ಕಾರಗಳು ತುದಿಗಾಲಲ್ಲಿ ನಿಂತಿವೆ. ಇದೇನೂ ಹೊಸ ಬೆಳವಣಿಗೆಯಲ್ಲ. 1995ರಲ್ಲಿ ಭಾರತ ಸರ್ಕಾರ ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಿದ ದಿನದಿಂದಲೇ ಈ ದೇಶದ ರೈತರ ಲೂಟಿ ಶುರುವಾಯ್ತು. ಅದಾದ ನಂತರ ಭಾರತ ಕಂಡ ರೈತರ ಆತ್ಮಹತ್ಯೆಯ ಸಂಖ್ಯೆ ಬಹುಶಃ ಪ್ರಪಂಚದ ಬೇರೆ ಯಾವ ದೇಶಗಳೂ ಕಾಣಲಿಲಿಲ್ಲ. ಭಾರತದ ರೈತರ ಆತ್ಮಹತ್ಯೆಗೂ ಭಾರತ ಅಪ್ಪಿಕೊಂಡ ಉದಾರೀಕರಣದ ನೀತಿಗೂ ನೇರ ಸಂಬಂಧವಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ.

ಈ ಅಭಿಪ್ರಾಯವನ್ನು ಖಾತ್ರಿಪಡಿಸುವ ವರದಿಯೊಂದಿದೆ. Indian Council for Research on International Economic Relations (ICRIER) ಮತ್ತು OECD 2018ರಲ್ಲಿ ಹಮ್ಮಿಕೊಂಡಿದ್ದ ಎರಡು ವರ್ಷಗಳ ದೀರ್ಘ ಅಧ್ಯಯನದಲ್ಲಿ ಹೊರಬಂದ ಪ್ರಮುಖ ಅಂಶವೆಂದರೆ 2000-01 ರಿಂದ 2016-17 ನಡುವಿನ ವರ್ಷಗಳ ಲೆಕ್ಕ ತೆಗೆದುಕೊಂಡಾಗ ಭಾರತದ Producer Support Estimate(PSE) “ಉತ್ಪಾದಕ ಬೆಂಬಲ ಅಂದಾಜಿ”ನ ಮೊತ್ತ (ತೆರಿಗೆದಾರರು ಮತ್ತು ಗ್ರಾಹಕರು ರೈತರಿಗೆ ಹಣದ ರೂಪದಲ್ಲಿ ಕೊಡುವ ಬೆಂಬಲ. ಸಬ್ಸಿಡಿಗಳು ಇದರ ಅಡಿಯಲ್ಲಿ ಬರುತ್ತವೆ) ಮೊತ್ತ ಒಟ್ಟು ಕೃಷಿಕರಿಗೆ ಪಾವತಿಯಾದ ಸರಾಸರಿ ಮೊತ್ತಕ್ಕಿಂತ 14% ಕಡಿಮೆ ಇದೆ. ಇದರ ವಾರ್ಷಿಕ ಮೊತ್ತ 2.65 ಟ್ರಿಲಿಯನ್ ಅಂದರೆ ಹದಿನೇಳು ವರ್ಷಗಳಿಗೆ 45 ಟ್ರಿಲಿಯನ್ ರೂಪಾಯಿಗಳು. ಇದು ಭಾರತದ ರೈತರ ಮೇಲೆ ವಿಧಿಸಿದ ಪರೋಕ್ಷವಾದ ತೆರಿಗೆ ಎಂದು ಕೆಲವು ಅರ್ಥಶಾಸ್ತ್ರಜ್ಞರು ಕರೆಯುತ್ತಾರೆ. ಇದನ್ನು ನೇರವಾಗಿ ಹೇಳುವುದಾದರೆ ಇದು ಭಾರತದ ರೈತರ ಲೂಟಿ. ಈ ಲೂಟಿ ನಡೆದಿರುವುದು ಅನೇಕ ಹೆಸರುಗಳಲ್ಲಿ. ನಿರ್ಬಂಧಿತ ಮಾರುಕಟ್ಟೆ, ವಾಣಿಜ್ಯ ನೀತಿಗಳು ಅಥವಾ ಗ್ರಾಹಕರ ಪರ ವಾಲಿರುವ ಮಾರುಕಟ್ಟೆ. ಅದೇನೇ ಇರಲಿ. ಜಗತ್ತಿನ ಯಾವ ದೇಶವೂ ಅನ್ನದಾತರನ್ನು ಇಷ್ಟು ಅಮಾನವೀಯವಾಗಿ ಲೂಟಿ ಮಾಡಿಲ್ಲ. ವಾಸ್ತವ ಹೀಗಿರುವಾಗ ರೈತ ಆತ್ಮಹತ್ಯೆ ಮಾಡಿಕೊಳ್ಳದೇ ಬೇರೆ ದಾರಿ ಏನಿದೆ?

ಸ್ವಾತಂತ್ರ್ಯೋತ್ತರ ಭಾರತ ಆಹಾರದ ಕೊರತೆಯನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಈ ದೇಶದ ಗಡಿ ಕಾದು ದೇಶವನ್ನು ರಕ್ಷಿಸಿದ ಯೋಧರ ಹಾಗೇ ದೇಶದ ಆಹಾರದ ಬುಟ್ಟಿಯನ್ನು ತುಂಬಿಸಿದ್ದು ಈ ದೇಶದ ಮಣ್ಣಿನ ಮಕ್ಕಳು. ಗಡಿ ಕಾಯುತ್ತಿದ್ದ ಸೈನಿಕರು ತಮ್ಮ ಜೀವವನ್ನೇ ಒತ್ತೆ ಇಟ್ಟರೆ ಇಲ್ಲಿ ರೈತರು ತಮ್ಮ ಪೂರ್ವಜರು ಕಾಪಾಡಿಕೊಂಡು ಬಂದಿದ್ದ ಮಣ್ಣು, ಬೀಜ ಮತ್ತು ಕೃಷಿ ಜ್ಞಾನವನ್ನೇ ಒತ್ತೆ ಇಟ್ಟರು. ಹಸಿರು ಕ್ರಾಂತಿಯ ಹೆಸರಿನಲ್ಲಿ ನಡೆದದ್ದೂ ಕೂಡ ಮಣ್ಣಿನ ಲೂಟಿ, ಬೀಜದ ಲೂಟಿ ಮತ್ತು ಸಾಂಪ್ರದಾಯಿಕ ಜ್ಞಾನದ ಲೂಟಿ. ಹಸಿರು ಕ್ರಾಂತಿ ನಡೆದ ಅರವತ್ತು ವರ್ಷಗಳ ನಂತರ ಮಣ್ಣಿನಲ್ಲಿದ್ದ ಸಾವಯವ ಇಂಗಾಲ ಇಲ್ಲದಂತಾಗಿದೆ. ಸೂಕ್ಷ್ಮಾಣುಜೀವಿಗಳು ಸತ್ತುಹೋಗಿವೆ. ಮಣ್ಣು ಬರಡಾಗಿದೆ. ಸಹಜವಾಗಿಯೆ ಇಳುವರಿ ಕಡಿಮೆಯಾಗಿದೆ.


ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ


ಭಾರತದ ಬೆನ್ನೆಲುಬು ಎಂದು ಕರೆಯಲ್ಪಡುವ ಕೃಷಿ ಕ್ಷೇತ್ರದ ಪರಿಸ್ಥಿತಿ ಹೀಗಿರುವಾಗ ನಮ್ಮನ್ನಾಳುತ್ತಿರುವ ಸರ್ಕಾರಗಳಿಗೆ ಸ್ವಲ್ಪವಾದರೂ ಕಾಳಜಿ ಇದ್ದಿದ್ದರೆ ಬರೀ ಘೋಷಣೆಗೆ ಸೀಮಿತವಾಗಿರುವ ಎಂಎಸ್‍ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುವ ಎಲ್ಲಾ ಇಪ್ಪತ್ಮೂರು ಬೆಳೆಗಳಿಗೂ ಅದು ಶಾಸನಬದ್ಧವಾಗಿ ಅನ್ವಯವಾಗುವಂತೆ ಸುಗ್ರೀವಾಜ್ಞೆ ಹೊರಡಿಸಬೇಕಿತ್ತು. ಘೋಷಿಸುವುದೇ ಅಲ್ಲ ಅದನ್ನು ಸರ್ಕಾರ ಖರೀದಿ ಮಾಡಲು ಎಪಿಎಂಸಿಯಲ್ಲಿ ಇದ್ದಂತಹ ಲೋಪದೋಷಗಳನ್ನು ಸರಿಪಡಿಸಿ ವ್ಯವಸ್ಥೆಯನ್ನು ರೂಪಿಸುವ ಸುಗ್ರೀವಾಜ್ಞೆ ತರಬೇಕಾಗಿತ್ತು. ಆದರೆ ಸೋರುತ್ತಿರುವ ಮಾಳಿಗೆಯ ರಂಧ್ರಗಳನ್ನು ಮುಚ್ಚದೆ ಮಾಳಿಗೆಯನ್ನೇ ತೆಗೆದು ಹಾಕಿ ರೈತರಿಗೆ ಯಾರಿಗೆ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಕೊಟ್ಟಿದ್ದೇವೆ ಎನ್ನುವುದು ರೈತರಿಗೆ ಕೊಟ್ಟಿರುವ ಸ್ವಾತಂತ್ರ್ಯವೋ ಅಥವಾ ರೈತರನ್ನು ಲೂಟಿ ಮಾಡಲು ಕಾರ್ಪೋರೆಟ್ ಕಂಪೆನಿಗಳಿಗೆ ಕೊಟ್ಟಿರುವ ಸ್ವಾತಂತ್ರ್ಯವೋ ಎನ್ನುವುದು ರೈತ ವಿರೋಧಿ ಸುಗ್ರೀವಾಜ್ಞೆಗಳನ್ನು ವಿರೋಧಿಸುತ್ತಿರುವ ರೈತರಿಗೆ ಈಗಾಗಲೇ ಸ್ಪಷ್ಟವಾಗಿ ಅರ್ಥವಾಗಿದೆ.

ಇಷ್ಟೆಲ್ಲಾ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಚಳವಳಿಗಳತ್ತ ತಿರುಗಿಯೂ ನೋಡುತ್ತಿಲ್ಲ. ಸರ್ಕಾರದ ಅಜೆಂಡಾ ಬಹಳ ಸ್ಪಷ್ಟವಾಗಿದೆ. ರೈತರ ಸರ್ವನಾಶಕ್ಕೆ ಪಣ ತೊಟ್ಟು ನಿಂತಿರುವ ಸರ್ಕಾರದ ವಿರುದ್ಧ ಕೇವಲ ಪ್ರತಿಭಟನೆಗಳನ್ನು ಹಮ್ಮಿಕೊಂಡರಷ್ಟೇ ಸಾಲದು ಎನಿಸುತ್ತದೆ.

ದೇಶದ ರೈತರ ಪಾಲಿಗೆ, ಕೃಷಿ ಕಾರ್ಮಿಕರ ಪಾಲಿಗೆ, ಮಹಿಳಾ ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆ ಎಂದು ಘೋಷಣೆ ಕೂಗಿದರಷ್ಟೇ ಸಾಲದು. ಅದು ವಾಸ್ತವ ಎಂಬ ಸತ್ಯವನ್ನು ಆಳವಾಗಿ ಅರ್ಥ ಮಾಡಿಕೊಳ್ಳಲೇಬೇಕಾದ ಸಂದರ್ಭದಲ್ಲಿ ನಾವಿದ್ದೇವೆ. ಭಾರತದ ರೈತ ಚಳವಳಿಗಳು ತಮ್ಮ ಅಜೆಂಡಾದ ಬಗ್ಗೆ ಪರಾಮರ್ಶೆ ಮಾಡಿಕೊಳ್ಳುವ ಅವಶ್ಯಕತೆ ಈಗ ಇದೆ. ಈ ಗ್ರಹಿಕೆ ನಮ್ಮಲ್ಲಿ ಆಳವಾಗಿ ಬೇರೂರಿದಾಗ ಮಾತ್ರ ನಮ್ಮ ಎದುರಿರುವ ಸವಾಲುಗಳಿಗೆ ಶಾಶ್ವತವಾದ ಉತ್ತರ ಹುಡುಕಲು ಸಾಧ್ಯ. ಆಗ ಸಂಘರ್ಷವಷ್ಟೇ ಸಾಲದು, ಅದರ ಜೊತೆಗೆ ನೇರ ಕಾರ್ಯಕ್ರಮಗಳ ಮೂಲಕ ಕ್ರಿಯಾತ್ಮಕ ನಿರ್ಮಾಣ ಕೆಲಸಕ್ಕೂ ಕೈಹಾಕಬೇಕು ಅನ್ನುವ ಅಭಿಪ್ರಾಯಕ್ಕೆ ಬರಬಹುದು.


ಇದನ್ನೂ ಓದಿ: ಸಂದರ್ಶನ – ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ


ಭಾರತದ ರೈತ ಚಳವಳಿಗಳು ಈಗಲಾದರೂ ಆಲೋಚಿಸಬೇಕಾದ್ದು ತಮ್ಮದೇ ಆದ ಉತ್ಪಾದನಾ ವ್ಯವಸ್ಥೆ, ಮೌಲ್ಯವರ್ಧನೆ ವ್ಯವಸ್ಥೆ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಸ್ಥಾಪನೆ ಮಾಡುವುದರ ಬಗ್ಗೆ. ಈ ಬಗ್ಗೆ ಅಗತ್ಯವಾದ ತರಬೇತಿಗಳನ್ನು ರೈತಮಕ್ಕಳಿಗೆ ಕೊಡಿಸುವುದರ ಬಗ್ಗೆ ಸಮಗ್ರವಾಗಿ ಚಿಂತಿಸಿ ಮತ್ತು ಅನುಷ್ಠಾನಗೊಳಿಸಿ ಇದರ ಮೂಲಕ ದೇಶವನ್ನು ಕಾಡುತ್ತಿರುವ ಮತ್ತೊಂದು ಸಮಸ್ಯೆ ನಿರುದ್ಯೋಗಕ್ಕೂ ಉತ್ತರ ಕಂಡುಕೊಳ್ಳಬೇಕಾಗಿದೆ.

ನಮ್ಮದೇ ಆದ ಪರ್ಯಾಯ ವ್ಯವಸ್ಥೆಗಳನ್ನು ಕಟ್ಟಿಕೊಳ್ಳುವುದರ ಮೂಲಕ ಸರ್ಕಾರಿ ವ್ಯವಸ್ಥಗಳಿಗೆ ಬದಲಿಯಾದ ಮತ್ತು ರೈತಸ್ನೇಹಿಯಾದ ವ್ಯವಸ್ಥೆಯ ಧ್ವಜಾರೋಹಣ ಮಾಡಬೇಕಾಗಿದೆ. ಇಡೀ ಭಾರತದ ರೈತ ಚಳವಳಿಯ ಒಂದು ಭಾಗ ಈ ಕೆಲಸವನ್ನು ಗಂಭೀರವಾಗಿ ಮಾಡಲೇಬೇಕಿದೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕಾರ್ಪೋರೇಟ್ ಕಂಪೆನಿಗಳ ಕೂಲಿಗಳಾಗುವುದರಲ್ಲಿ ಸಂಶಯವೇ ಇಲ್ಲ.

ಇದನ್ನು ರೈತ ಸಂಘಟನೆಗಳು ಕೈಗೆತ್ತಿಕೊಂಡು ಕರೆಕೊಟ್ಟರೆ ಸಾಕು, ಇದರ ಜೊತೆಗೆ ಕೆಲಸ ಮಾಡಲು ಮನಸ್ಸಿರುವ ಅನೇಕ ನಗರವಾಸಿ ತಂತ್ರಜ್ಞರು ಕೈಜೋಡಿಸುವ ಸಾಧ್ಯತೆ ಇದೆ. ಇದೇನೂ ಬಹಳ ಕಷ್ಟದ ಕೆಲಸವಲ್ಲ.


ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ


ಇದರ ಪ್ರಯೋಗವಾಗಿಯೆ ನಮ್ದು ಎಂಬ ಬ್ರ್ಯಾಂಡ್‍ಅನ್ನು ಪ್ರಾರಂಭ ಮಾಡುವುದರ ಮೂಲಕ ಕ್ರಿಯಾತ್ಮಕ ಪ್ರತಿರೋಧವನ್ನು ಒಡ್ಡುವ ಕೆಲಸವನ್ನು ಈಗಾಗಲೇ ನಾವು ಪ್ರಾರಂಭ ಮಾಡಿದ್ದೇವೆ. ಇದು ರೈತರ ಹಿಡಿತದಲ್ಲಿರುವ ಮಾರುಕಟ್ಟೆ ವ್ಯವಸ್ಥೆ. ಇಲ್ಲಿ ನೈಸರ್ಗಿಕವಾಗಿ ಬೆಳೆದ ಉತ್ಪನ್ನಗಳಿಗೆ ರೈತರೇ ಬೆಲೆ ನಿಗದಿ ಮಾಡುತ್ತಾರೆ. ಉಪ ಉತ್ಪನ್ನಗಳನ್ನು ಮತ್ತು ಮೌಲ್ಯವರ್ಧನೆಗೊಳಿಸಿದ ವಸ್ತುಗಳನ್ನು ನೇರವಾಗಿ ರೈತರೇ ಮಾರಾಟ ಮಾಡುತ್ತಾರೆ.

ಇಡೀ ದೇಶದಾದ್ಯಂತ ಭುಗಿಲೆದ್ದಿರುವ ರೈತರ ಪ್ರತಿರೋಧ, ಕೇವಲ ಈ ಕಾನೂನುಗಳನ್ನು ವಿರೋಧಿಸುವುದಕ್ಕೆ ಸೀಮಿತವಾಗದೆ ಮುಂಬರಬಹುದಾದ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಬೇಕಾದ ಎಲ್ಲ ರೀತಿಯ ವೈಚಾರಿಕ, ಸೈದ್ಧಾಂತಿಕ ಮತ್ತು ಕ್ರಿಯಾತ್ಮಕ ಪ್ರತಿರೋಧಗಳಿಗೆ ಅವಕಾಶವಾಗಬೇಕು.
ರೈತ ಚಳವಳಿಗೆ ಜಯವಾಗಲಿ!


(ಚಿಕ್ಕಂದಿನಿಂದಲೂ ರೈತ ಚಳವಳಿಯ ಜೊತೆಗೇ ಬೆಳೆದ ಚುಕ್ಕಿ, ಈಗ ರೈತ ಚಳವಳಿಯ ರಾಜ್ಯ ನಾಯಕಿಯರಲ್ಲೊಬ್ಬರು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹಾಗೂ ತೃತೀಯ ದೇಶಗಳ ರೈತರನ್ನು ಪ್ರತಿನಿಧಿಸುವವರು. ಪ್ರಸ್ತುತ ಚಾಮರಾಜನಗರದ ಅಮೃತಭೂಮಿಯ ವಿಶಿಷ್ಟ ರೈತ ಪ್ರಯೋಗ ಶಾಲೆಯ ಮುಖ್ಯಸ್ಥರು.)


ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...