Homeಅಂತರಾಷ್ಟ್ರೀಯಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

- Advertisement -
- Advertisement -

ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ಅಪಾರ ಗೌರವವಿದೆ. ಜಪಾನಿನ ಪೂರ್ವ ತುದಿಯಿಂದ ಅಮೇರಿಕದ ಪಶ್ಚಿಮ ತುದಿಯವರೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಗಾಂಧಿಯ ಪ್ರತಿಮೆಗಳಿವೆ. ಅಧ್ಯಯನ ಕೇಂದ್ರಗಳಿವೆ. ದಕ್ಷಿಣ ಆಫ್ರಿಕಾದಲ್ಲಂತೂ ಮಹಾತ್ಮ ಗಾಂಧಿಯವರಿಗೆ ಇನ್ನಿಲ್ಲದ ಪ್ರೀತಿ ಮತ್ತು ಅಪಾರ ಗೌರವವಿದೆ. ಭಾರತ ಬಿಟ್ಟರೆ ಗಾಂಧಿಯವರ ಎರಡನೇ ತವರೆಂದು ದಕ್ಷಿಣ ಆಫ್ರಿಕಾವನ್ನು ಕರೆಯಲಾಗುತ್ತದೆ. ದಕ್ಷಿಣ ಆಫ್ರಿಕಾದಿಂದ ಗಾಂಧೀಜಿ ಭಾರತಕ್ಕೆ ಮರಳಿದ ಮೇಲೂ ಅವರ ಕುಟುಂಬದ ಮುಂದಿನ ಪೀಳಿಗೆಗಳು ಆದೇಶದಲ್ಲಿಯೇ ನೆಲೆಸಿವೆ. ಈಗ  ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಮಹಾತ್ಮ ಗಾಂಧೀಜಿಯವರ ಮರಿ ಮೊಮ್ಮೊಗಳು ಆಶಿಶ್‌ ಲತಾ ರಾಮಗೋಬಿನ್‌ ಅವರು ವಂಚನೆಯ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.‌ ಒಂದು ಕಾಲದಲ್ಲಿ ವರ್ಣಬೇಧ ನೀತಿಯ ವಿರುದ್ದ ಹೋರಾಟ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾದ ಜೈಲುಗಳಲ್ಲಿ ಅನೇಕವರ್ಷ ಸೆರೆವಾಸ ಅನುಭವಿಸಿದ್ದರು.

ದಕ್ಷಿಣ ಆಫ್ರಿಕಾದ ಬಂದರು ನಗರಿ ಡರ್ಬನ್‌ನ ನ್ಯಾಯಾಲಯ ಗಾಂಧಿ ಕುಟುಂಬದ ಕುಡಿ ಆಶಿಶ್ ಲತಾ ರಾಮಗೋಬಿನ್‌ ಅವರಿಗೆ $4,00,000 ಹಣದ ವಂಚನೆಯ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪಿತ್ತಿದೆ. ಜೊತೆಗೆ 7 ವರ್ಷಗಳ ಜೈಲು ಶಿಕೆಯನ್ನು ವಿಧಿಸಿದೆ. ಆಶಿಶ್‌ ಲತಾ ಅವರನ್ನು ಡರ್ಬನ್‌ ಪೊಲೀಸರು ಬಂಧಿಸಿ ಜೈಲಿಗೆ ಕರೆದೊಯ್ದಿದ್ದಾರೆ. ಗಾಂಧೀಜಿಯವರ ನಂತರ ಅವರ ಕುಟುಂಬದವರೊಬ್ಬರು ದಕ್ಷಿಣ ಆಫ್ರಿಕಾದಲ್ಲಿ ಜೈಲಿಗೆ ಹೋಗುತ್ತಿರುವುದು ಇದೇ ಮೊದಲ ನಿದರ್ಶನವೆಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ : ದಕ್ಷಿಣ ಆಫ್ರಿಕಾದಲ್ಲಿ ಕೊರೋನಾ ಮೂರನೇ ಅಲೆ ಆರಂಭ

ಆಶಿಶ್‌ ಲತಾ ಅವರು ಭಾರತದಿಂದ ಬಟ್ಟೆಗಳನ್ನು ಆಮದು ಮಾಡಿಕೊಳ್ಳುವ ಸಲುವಾಗಿ ನಕಲಿ ದಾಖಲೆಗಳನ್ನು ನೀಡಿ ಹೂಡಿಕೆದಾರರಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಅವರ ಮೇಲೆ ಎಸ್‌ಎ ಮಹರಾಜ್‌ ಎಂಬುವವರು 2015 ರಲ್ಲಿ ಪ್ರಕರಣ ದಾಖಲಿಸಿದ್ದರು. ಆರ್ಥಿಕ ವಂಚನೆ ಆರೋಪಕ್ಕೆ ಸಂಬಂಧಿಸಿದ ಈ 2015 ರ ಪ್ರಕರಣದಲ್ಲಿ ಡರ್ಬನ್‌ ನ್ಯಾಯಾಲಯ ಆಶಿಶ್‌ ಲತಾ ಅವರಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಎಸ್ಎ. ಮಹರಾಜ್‌ ಅವರು ಆಶಿಶ್‌ ಲತಾ ಅವರ ಕೌಟುಂಬಿಕ ಹಿನ್ನೆಲೆಯ ನಂಬಿಕೆಯಲ್ಲಿ ವ್ಯವಹಾರಕ್ಕೆ ಸಹಿ ಹಾಕಿದ್ದರು ಎನ್ನಲಾಗಿದೆ.

ಆಶಿಶ್‌ ಲತಾ ಅವರ ತಾಯಿ, ಗಾಂಧೀಜಿಯವರ ಮೊಮ್ಮಗಳು ಇಳಾಗಾಂಧಿ ದಕ್ಷಿಣ ಆಫ್ರಿಕಾದ ಪ್ರಸಿದ್ಧ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಅವರು 1994-2004 ರ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಸಂಸತ್ತಿನಲ್ಲಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

ಇಳಾ ಗಾಂಧಿಯವರ ಮಗಳು ಮತ್ತು ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಶಿಶ್‌ ಲತಾ ರಾಮ್‌ಗೋಬಿನ್ ತಮ್ಮನ್ನು ತಾವು ಮಾನವ ಹಕ್ಕುಗಳ ಹೋರಾಟಗಾರ್ತಿಯೆಂದು ಕರೆದುಕೊಂಡಿದ್ದಾರೆ. ಜೊತೆಗೆ ಇಂಟರ್ನ್ಯಾಷನಲ್‌ ಸೆಂಟರ್‌ ಫಾರ್‌ ನಾನ್‌ ವಯಲೆನ್ಸ್‌ ಎಂಬ ಎನ್‌ಜಿಒ ನಡೆಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...