Homeಅಂತರಾಷ್ಟ್ರೀಯಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

- Advertisement -
- Advertisement -

ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ಅಪಾರ ಗೌರವವಿದೆ. ಜಪಾನಿನ ಪೂರ್ವ ತುದಿಯಿಂದ ಅಮೇರಿಕದ ಪಶ್ಚಿಮ ತುದಿಯವರೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಗಾಂಧಿಯ ಪ್ರತಿಮೆಗಳಿವೆ. ಅಧ್ಯಯನ ಕೇಂದ್ರಗಳಿವೆ. ದಕ್ಷಿಣ ಆಫ್ರಿಕಾದಲ್ಲಂತೂ ಮಹಾತ್ಮ ಗಾಂಧಿಯವರಿಗೆ ಇನ್ನಿಲ್ಲದ ಪ್ರೀತಿ ಮತ್ತು ಅಪಾರ ಗೌರವವಿದೆ. ಭಾರತ ಬಿಟ್ಟರೆ ಗಾಂಧಿಯವರ ಎರಡನೇ ತವರೆಂದು ದಕ್ಷಿಣ ಆಫ್ರಿಕಾವನ್ನು ಕರೆಯಲಾಗುತ್ತದೆ. ದಕ್ಷಿಣ ಆಫ್ರಿಕಾದಿಂದ ಗಾಂಧೀಜಿ ಭಾರತಕ್ಕೆ ಮರಳಿದ ಮೇಲೂ ಅವರ ಕುಟುಂಬದ ಮುಂದಿನ ಪೀಳಿಗೆಗಳು ಆದೇಶದಲ್ಲಿಯೇ ನೆಲೆಸಿವೆ. ಈಗ  ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಮಹಾತ್ಮ ಗಾಂಧೀಜಿಯವರ ಮರಿ ಮೊಮ್ಮೊಗಳು ಆಶಿಶ್‌ ಲತಾ ರಾಮಗೋಬಿನ್‌ ಅವರು ವಂಚನೆಯ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.‌ ಒಂದು ಕಾಲದಲ್ಲಿ ವರ್ಣಬೇಧ ನೀತಿಯ ವಿರುದ್ದ ಹೋರಾಟ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾದ ಜೈಲುಗಳಲ್ಲಿ ಅನೇಕವರ್ಷ ಸೆರೆವಾಸ ಅನುಭವಿಸಿದ್ದರು.

ದಕ್ಷಿಣ ಆಫ್ರಿಕಾದ ಬಂದರು ನಗರಿ ಡರ್ಬನ್‌ನ ನ್ಯಾಯಾಲಯ ಗಾಂಧಿ ಕುಟುಂಬದ ಕುಡಿ ಆಶಿಶ್ ಲತಾ ರಾಮಗೋಬಿನ್‌ ಅವರಿಗೆ $4,00,000 ಹಣದ ವಂಚನೆಯ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪಿತ್ತಿದೆ. ಜೊತೆಗೆ 7 ವರ್ಷಗಳ ಜೈಲು ಶಿಕೆಯನ್ನು ವಿಧಿಸಿದೆ. ಆಶಿಶ್‌ ಲತಾ ಅವರನ್ನು ಡರ್ಬನ್‌ ಪೊಲೀಸರು ಬಂಧಿಸಿ ಜೈಲಿಗೆ ಕರೆದೊಯ್ದಿದ್ದಾರೆ. ಗಾಂಧೀಜಿಯವರ ನಂತರ ಅವರ ಕುಟುಂಬದವರೊಬ್ಬರು ದಕ್ಷಿಣ ಆಫ್ರಿಕಾದಲ್ಲಿ ಜೈಲಿಗೆ ಹೋಗುತ್ತಿರುವುದು ಇದೇ ಮೊದಲ ನಿದರ್ಶನವೆಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ : ದಕ್ಷಿಣ ಆಫ್ರಿಕಾದಲ್ಲಿ ಕೊರೋನಾ ಮೂರನೇ ಅಲೆ ಆರಂಭ

ಆಶಿಶ್‌ ಲತಾ ಅವರು ಭಾರತದಿಂದ ಬಟ್ಟೆಗಳನ್ನು ಆಮದು ಮಾಡಿಕೊಳ್ಳುವ ಸಲುವಾಗಿ ನಕಲಿ ದಾಖಲೆಗಳನ್ನು ನೀಡಿ ಹೂಡಿಕೆದಾರರಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಅವರ ಮೇಲೆ ಎಸ್‌ಎ ಮಹರಾಜ್‌ ಎಂಬುವವರು 2015 ರಲ್ಲಿ ಪ್ರಕರಣ ದಾಖಲಿಸಿದ್ದರು. ಆರ್ಥಿಕ ವಂಚನೆ ಆರೋಪಕ್ಕೆ ಸಂಬಂಧಿಸಿದ ಈ 2015 ರ ಪ್ರಕರಣದಲ್ಲಿ ಡರ್ಬನ್‌ ನ್ಯಾಯಾಲಯ ಆಶಿಶ್‌ ಲತಾ ಅವರಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಎಸ್ಎ. ಮಹರಾಜ್‌ ಅವರು ಆಶಿಶ್‌ ಲತಾ ಅವರ ಕೌಟುಂಬಿಕ ಹಿನ್ನೆಲೆಯ ನಂಬಿಕೆಯಲ್ಲಿ ವ್ಯವಹಾರಕ್ಕೆ ಸಹಿ ಹಾಕಿದ್ದರು ಎನ್ನಲಾಗಿದೆ.

ಆಶಿಶ್‌ ಲತಾ ಅವರ ತಾಯಿ, ಗಾಂಧೀಜಿಯವರ ಮೊಮ್ಮಗಳು ಇಳಾಗಾಂಧಿ ದಕ್ಷಿಣ ಆಫ್ರಿಕಾದ ಪ್ರಸಿದ್ಧ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಅವರು 1994-2004 ರ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಸಂಸತ್ತಿನಲ್ಲಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

ಇಳಾ ಗಾಂಧಿಯವರ ಮಗಳು ಮತ್ತು ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಶಿಶ್‌ ಲತಾ ರಾಮ್‌ಗೋಬಿನ್ ತಮ್ಮನ್ನು ತಾವು ಮಾನವ ಹಕ್ಕುಗಳ ಹೋರಾಟಗಾರ್ತಿಯೆಂದು ಕರೆದುಕೊಂಡಿದ್ದಾರೆ. ಜೊತೆಗೆ ಇಂಟರ್ನ್ಯಾಷನಲ್‌ ಸೆಂಟರ್‌ ಫಾರ್‌ ನಾನ್‌ ವಯಲೆನ್ಸ್‌ ಎಂಬ ಎನ್‌ಜಿಒ ನಡೆಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...