Homeಚಳವಳಿಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: 'ಮಹಾನ್ ತಾತ' ಸಾಕ್ಷ್ಯಚಿತ್ರ ಬಿಡುಗಡೆ

ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ. ಗಾಂಧಿ ಜಯಂತಿಯ ಅಕ್ಟೋಬರ್ 2 ರ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಬಿಡುಗಡೆಯಾಗಲಿದ್ದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಅಂದೇ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

2001 ರಲ್ಲಿ ಸಮಾನ ಮನಸ್ಕ ಗೆಳೆಯರೊಂದಿಗೆ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಆರಂಭಿಸಿದ ಅವರು, ಕರ್ನಾಟಕದ ಬಾಬಾಬುಡನ್ ಗಿರಿ, ಬಿಎಂಐಸಿ ಹೋರಾಟ ಸೇರಿದಂತೆ ಹಲವು ಚಳವಳಿಗಳ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ದೇಶಿಸಿದ ‘Shit’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ. ಗೌರಿ ಲಂಕೇಶ್‌ರವರ ಕುರಿತ ‘Our Gauri’, ಹೋರಾಟಗಾರ ನಜೀಬ್ ನಾಪತ್ತೆಯ ನಂತರ ‘ಅಮ್ಮಿ’ ಎಂಬ ಸಾಕ್ಷ್ಯಚಿತ್ರಗಳನ್ನು ಇತ್ತೀಚೆಗೆ ನಿರ್ದೇಶಿಸಿದ್ದಾರೆ.

#ಮಹಾನ್_ತಾತಅನನ್ಯ ಸ್ವಾತಂತ್ರ್ಯ ಸೇನಾನಿಯ ಸಂಘರ್ಷಗಾಥೆದೊರೆಸ್ವಾಮಿಯವರ ಹೋರಾಟದ ಕುರಿತು ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆಸ್ಥಳ: ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಅರಮನೆ ಮೈದಾನ ಬೆಂಗಳೂರು

Posted by Naanu Gauri on Wednesday, September 23, 2020

ದಣಿವರಿಯದ ಹೋರಾಟಗಾರ ದೊರೆಸ್ವಾಮಿಯವರ ಕುರಿತ ಸಾಕ್ಷ್ಯಚಿತ್ರವನ್ನು ನೋಡಲು ಬಯಸುವವರು 500 ರೂ ಪಾವತಿಸಿದರೆ ಅವರ ಮನೆಗೆ ತಲುಪಿಸಲಾಗುವುದು ಎಂದು ಯುವ ಹೋರಾಟಗಾರ ತ್ರಿಮೂರ್ತಿ ತಿಳಿಸಿದ್ದಾರೆ. ಆಸಕ್ತರು ಅವರನ್ನು 9964676400 ಸಂಪರ್ಕಿಸಬಹುದು.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...