Homeಚಳವಳಿಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: 'ಮಹಾನ್ ತಾತ' ಸಾಕ್ಷ್ಯಚಿತ್ರ ಬಿಡುಗಡೆ

ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ. ಗಾಂಧಿ ಜಯಂತಿಯ ಅಕ್ಟೋಬರ್ 2 ರ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಬಿಡುಗಡೆಯಾಗಲಿದ್ದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಅಂದೇ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

2001 ರಲ್ಲಿ ಸಮಾನ ಮನಸ್ಕ ಗೆಳೆಯರೊಂದಿಗೆ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಆರಂಭಿಸಿದ ಅವರು, ಕರ್ನಾಟಕದ ಬಾಬಾಬುಡನ್ ಗಿರಿ, ಬಿಎಂಐಸಿ ಹೋರಾಟ ಸೇರಿದಂತೆ ಹಲವು ಚಳವಳಿಗಳ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ದೇಶಿಸಿದ ‘Shit’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ. ಗೌರಿ ಲಂಕೇಶ್‌ರವರ ಕುರಿತ ‘Our Gauri’, ಹೋರಾಟಗಾರ ನಜೀಬ್ ನಾಪತ್ತೆಯ ನಂತರ ‘ಅಮ್ಮಿ’ ಎಂಬ ಸಾಕ್ಷ್ಯಚಿತ್ರಗಳನ್ನು ಇತ್ತೀಚೆಗೆ ನಿರ್ದೇಶಿಸಿದ್ದಾರೆ.

#ಮಹಾನ್_ತಾತಅನನ್ಯ ಸ್ವಾತಂತ್ರ್ಯ ಸೇನಾನಿಯ ಸಂಘರ್ಷಗಾಥೆದೊರೆಸ್ವಾಮಿಯವರ ಹೋರಾಟದ ಕುರಿತು ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆಸ್ಥಳ: ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಅರಮನೆ ಮೈದಾನ ಬೆಂಗಳೂರು

Posted by Naanu Gauri on Wednesday, September 23, 2020

ದಣಿವರಿಯದ ಹೋರಾಟಗಾರ ದೊರೆಸ್ವಾಮಿಯವರ ಕುರಿತ ಸಾಕ್ಷ್ಯಚಿತ್ರವನ್ನು ನೋಡಲು ಬಯಸುವವರು 500 ರೂ ಪಾವತಿಸಿದರೆ ಅವರ ಮನೆಗೆ ತಲುಪಿಸಲಾಗುವುದು ಎಂದು ಯುವ ಹೋರಾಟಗಾರ ತ್ರಿಮೂರ್ತಿ ತಿಳಿಸಿದ್ದಾರೆ. ಆಸಕ್ತರು ಅವರನ್ನು 9964676400 ಸಂಪರ್ಕಿಸಬಹುದು.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...