Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...