Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...