Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...