Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...