Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...