Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...