Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...