Homeಮುಖಪುಟವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)" ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆಯುವ ಅಗತ್ಯವಿಲ್ಲ" ಎಂದು ಹೇಳಿದೆ.

- Advertisement -
- Advertisement -

ಕವಿ ಮತ್ತು ರಾಜಕೀಯ ಚಿಂತಕ ವರವಾರ ರಾವ್ ಅವರಿಗೆ 79 ವರ್ಷ ವಯಸ್ಸಾಗಿದ್ದು, ನ್ಯೂರೋಲಾಜಿಕಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ನ್ರೂರೋಲಾಜಿಕಲ್ ಸಮಸ್ಯೆಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ವೈದ್ಯರು ಸೂಚಿಸಿದ್ದಾರೆ. ಮೇ ತಿಂಗಳಲ್ಲಿ ಆರೋಗ್ಯ ಹದಗೆಟ್ಟ ನಂತರ ಅವರನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ಸಾಗಿಸಬೇಕಾಯಿತು.

ಅಂದಿನಿಂದ, ಅವರು ಜೈಲು ಆಸ್ಪತ್ರೆಯಿಂದ ಜೆಜೆ ಸೇಂಟ್ ಜಾರ್ಜ್ ಮತ್ತು ಈಗ ಖಾಸಗಿ ನಾನಾವತಿ ಆಸ್ಪತ್ರೆಗೆ ತೆರಳಿದ್ದಾರೆ.

ಈ ಎಲ್ಲದರ ಹೊರತಾಗಿಯೂ, ಕಳೆದ ವಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)” ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದೆ.

ರಾವ್ ಅವರನ್ನು ವಕೀಲರಾದ ಸುದೀಪ್ ಪಾಸ್ಬೋಲಾ ಮತ್ತು ಆರ್. ಸತ್ಯನಾರಾಯಣನ್ ಪ್ರತಿನಿಧಿಸುತ್ತಿದ್ದಾರೆ. ಇತ್ತೀಚಿನ ಜಾಮೀನು ಅರ್ಜಿಯನ್ನು ಅವರ ಅನಾರೋಗ್ಯದ ಆಧಾರದ ಮೇಲೆ ಹಾಕಲಾಗಿದೆ.

ಬಾಂಬೆ ಹೈಕೋರ್ಟ್‌ಗೆ ತನಿಖಾ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಖಲೇಟ್ ಸಲ್ಲಿಸಿದ 172 ಪುಟಗಳ ಅಫಿಡವಿಟ್‌ನಲ್ಲಿ, ಹಿರಿಯ ಸಾಮಾಜಿಕ ಕಾರ್ಯಕರ್ತ ನ್ಯಾಯಾಲಯದಿಂದ ಜಾಮೀನು ಕೋರಿ ಪರಿಸ್ಥಿತಿಯ ಅನಗತ್ಯ ಲಾಭ ಪಡೆಯುತ್ತಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಮಹಾರಾಷ್ಟ್ರದ ಎಲ್ಗರ್ ಪರಿಷತ್-ಕೊರೆಗಾಂವ್ ಭೀಮಾ ಹಿಂಸಾಚಾರ ಪ್ರಕರಣದಲ್ಲಿ ಪಾತ್ರವಹಿಸಿದ್ದಾರೆಂದು ಆರೋಪಿಸಿ ರಾವ್ ಅವರನ್ನು ಜೂನ್ 2018 ರಲ್ಲಿ ಬಂಧಿಸಿದಾಗಿನಿಂದ ಜೈಲಿನಲ್ಲಿದ್ದಾರೆ.

ವೈದ್ಯಕೀಯ ಆರೈಕೆಯ ಕೊರತೆಯಿಂದಾಗಿ ಜೈಲಿನಲ್ಲಿ ಅವರ ಆರೋಗ್ಯವು ತೀವ್ರವಾಗಿ ಹದಗೆಟ್ಟಿದೆ ಎಂದು ರಾವ್ ಅವರ ಕುಟುಂಬ ಮತ್ತು ಅವರ ವಕೀಲರು ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಎರಡು ಬಾರಿ ಅವರೊಂದಿಗೆ ಮಾತನಾಡಿದ್ದ ಅವರ ಪತ್ನಿ ಹೇಮಲತಾ, ಅವರ ಮಾತು ಸ್ಥಿಮಿತತೆಯನ್ನು ಕಳೆದುಕೊಂಡಿದೆ. ಕುಟುಂಬ ಸದಸ್ಯರನ್ನು ಗುರುತಿಸುತ್ತಿಲ್ಲ ಎಂದು ಹೇಳಿದ್ದಾರೆ.

ರಾವ್ ಜೈಲಿನಲ್ಲಿದ್ದರೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತದೆ ಎಂದು ಅವರ ಕುಟುಂಬ ಆತಂಕ ವ್ಯಕ್ತಪಡಿಸಿದೆ.

ರಾವ್ ಅವರ ಕುಟುಂಬವು ಕಳೆದ ವಾರ ಅವರನ್ನು ಜೆಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದಾಗ ಅವರು ಯಾವುದೇ ಸರಿಯಾದ ವೈದ್ಯಕೀಯ ಆರೈಕೆಯಿಲ್ಲದೆ, ಮಣ್ಣಾದ ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡು ಅದರ ಕುರಿತು ದುಃಖ ತೋಡಿಕೊಂಡಿದ್ದರು.

ಆದರೆ ಎನ್‌ಐಎ, ಇವೆಲ್ಲವೂ ಸ್ವತಃ ಜಾಮೀನು ಪಡೆಯಲು ಆರೋಗ್ಯ ಸ್ಥಿತಿಯ ದುರುಪಯೋಗವಾಗಿದೆ ಎಂದು ಹೇಳಿದೆ.

ಜೈಲಿನಲ್ಲಿ ಅತಿ ಹೆಚ್ಚು ಜನಸಂದಣಿಯನ್ನು ಹೊಂದಿರುವ ಮಹಾರಾಷ್ಟ್ರವು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗಿದೆ ಇಲ್ಲಿಯವರೆಗೆ, ಅಲ್ಲಿ 500 ಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಯುಎಪಿಎ, ಎಂಸಿಒಸಿಎ, ಪಿಎಂಎಲ್‌ಎ, ಎಂಪಿಐಡಿ, ಎನ್‌ಡಿಪಿಎಸ್ ಮುಂತಾದ ವಿಶೇಷ ಕಾನೂನುಗಳ ಅಡಿಯಲ್ಲಿ ಕೆಲವರಿಗೆ ಸಮಿತಿ ವಿನಾಯಿತಿ ನೀಡಿದೆ (ಇದು ಕ್ರಿಮಿನಲ್ ಪ್ರೊಸೀಜರ್ ಸಂಹಿತೆಯ ಅಡಿಯಲ್ಲಿರುವವರಿಗೆ ಹೆಚ್ಚುವರಿಯಾಗಿ ಜಾಮೀನಿನ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ಒದಗಿಸುತ್ತದೆ).

ವರವರ ರಾವ್ ಮತ್ತು ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿರುವ ಹಲವರು ವಿಶೇಷ ಕಾನೂನಿನ ಸಮಿತಿಯ ನಿಗದಿತ ವಿನಾಯಿತಿಯಡಿಯಲ್ಲಿ ಜಾಮೀನು ಪಡೆಯಲು ಸಾಧ್ಯವಾಗಲಿಲ್ಲ.


ಇದನ್ನೂ ಓದಿ: ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...