Homeಮುಖಪುಟವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)" ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆಯುವ ಅಗತ್ಯವಿಲ್ಲ" ಎಂದು ಹೇಳಿದೆ.

- Advertisement -
- Advertisement -

ಕವಿ ಮತ್ತು ರಾಜಕೀಯ ಚಿಂತಕ ವರವಾರ ರಾವ್ ಅವರಿಗೆ 79 ವರ್ಷ ವಯಸ್ಸಾಗಿದ್ದು, ನ್ಯೂರೋಲಾಜಿಕಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ನ್ರೂರೋಲಾಜಿಕಲ್ ಸಮಸ್ಯೆಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ವೈದ್ಯರು ಸೂಚಿಸಿದ್ದಾರೆ. ಮೇ ತಿಂಗಳಲ್ಲಿ ಆರೋಗ್ಯ ಹದಗೆಟ್ಟ ನಂತರ ಅವರನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ಸಾಗಿಸಬೇಕಾಯಿತು.

ಅಂದಿನಿಂದ, ಅವರು ಜೈಲು ಆಸ್ಪತ್ರೆಯಿಂದ ಜೆಜೆ ಸೇಂಟ್ ಜಾರ್ಜ್ ಮತ್ತು ಈಗ ಖಾಸಗಿ ನಾನಾವತಿ ಆಸ್ಪತ್ರೆಗೆ ತೆರಳಿದ್ದಾರೆ.

ಈ ಎಲ್ಲದರ ಹೊರತಾಗಿಯೂ, ಕಳೆದ ವಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)” ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದೆ.

ರಾವ್ ಅವರನ್ನು ವಕೀಲರಾದ ಸುದೀಪ್ ಪಾಸ್ಬೋಲಾ ಮತ್ತು ಆರ್. ಸತ್ಯನಾರಾಯಣನ್ ಪ್ರತಿನಿಧಿಸುತ್ತಿದ್ದಾರೆ. ಇತ್ತೀಚಿನ ಜಾಮೀನು ಅರ್ಜಿಯನ್ನು ಅವರ ಅನಾರೋಗ್ಯದ ಆಧಾರದ ಮೇಲೆ ಹಾಕಲಾಗಿದೆ.

ಬಾಂಬೆ ಹೈಕೋರ್ಟ್‌ಗೆ ತನಿಖಾ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಖಲೇಟ್ ಸಲ್ಲಿಸಿದ 172 ಪುಟಗಳ ಅಫಿಡವಿಟ್‌ನಲ್ಲಿ, ಹಿರಿಯ ಸಾಮಾಜಿಕ ಕಾರ್ಯಕರ್ತ ನ್ಯಾಯಾಲಯದಿಂದ ಜಾಮೀನು ಕೋರಿ ಪರಿಸ್ಥಿತಿಯ ಅನಗತ್ಯ ಲಾಭ ಪಡೆಯುತ್ತಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಮಹಾರಾಷ್ಟ್ರದ ಎಲ್ಗರ್ ಪರಿಷತ್-ಕೊರೆಗಾಂವ್ ಭೀಮಾ ಹಿಂಸಾಚಾರ ಪ್ರಕರಣದಲ್ಲಿ ಪಾತ್ರವಹಿಸಿದ್ದಾರೆಂದು ಆರೋಪಿಸಿ ರಾವ್ ಅವರನ್ನು ಜೂನ್ 2018 ರಲ್ಲಿ ಬಂಧಿಸಿದಾಗಿನಿಂದ ಜೈಲಿನಲ್ಲಿದ್ದಾರೆ.

ವೈದ್ಯಕೀಯ ಆರೈಕೆಯ ಕೊರತೆಯಿಂದಾಗಿ ಜೈಲಿನಲ್ಲಿ ಅವರ ಆರೋಗ್ಯವು ತೀವ್ರವಾಗಿ ಹದಗೆಟ್ಟಿದೆ ಎಂದು ರಾವ್ ಅವರ ಕುಟುಂಬ ಮತ್ತು ಅವರ ವಕೀಲರು ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಎರಡು ಬಾರಿ ಅವರೊಂದಿಗೆ ಮಾತನಾಡಿದ್ದ ಅವರ ಪತ್ನಿ ಹೇಮಲತಾ, ಅವರ ಮಾತು ಸ್ಥಿಮಿತತೆಯನ್ನು ಕಳೆದುಕೊಂಡಿದೆ. ಕುಟುಂಬ ಸದಸ್ಯರನ್ನು ಗುರುತಿಸುತ್ತಿಲ್ಲ ಎಂದು ಹೇಳಿದ್ದಾರೆ.

ರಾವ್ ಜೈಲಿನಲ್ಲಿದ್ದರೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತದೆ ಎಂದು ಅವರ ಕುಟುಂಬ ಆತಂಕ ವ್ಯಕ್ತಪಡಿಸಿದೆ.

ರಾವ್ ಅವರ ಕುಟುಂಬವು ಕಳೆದ ವಾರ ಅವರನ್ನು ಜೆಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದಾಗ ಅವರು ಯಾವುದೇ ಸರಿಯಾದ ವೈದ್ಯಕೀಯ ಆರೈಕೆಯಿಲ್ಲದೆ, ಮಣ್ಣಾದ ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡು ಅದರ ಕುರಿತು ದುಃಖ ತೋಡಿಕೊಂಡಿದ್ದರು.

ಆದರೆ ಎನ್‌ಐಎ, ಇವೆಲ್ಲವೂ ಸ್ವತಃ ಜಾಮೀನು ಪಡೆಯಲು ಆರೋಗ್ಯ ಸ್ಥಿತಿಯ ದುರುಪಯೋಗವಾಗಿದೆ ಎಂದು ಹೇಳಿದೆ.

ಜೈಲಿನಲ್ಲಿ ಅತಿ ಹೆಚ್ಚು ಜನಸಂದಣಿಯನ್ನು ಹೊಂದಿರುವ ಮಹಾರಾಷ್ಟ್ರವು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗಿದೆ ಇಲ್ಲಿಯವರೆಗೆ, ಅಲ್ಲಿ 500 ಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಯುಎಪಿಎ, ಎಂಸಿಒಸಿಎ, ಪಿಎಂಎಲ್‌ಎ, ಎಂಪಿಐಡಿ, ಎನ್‌ಡಿಪಿಎಸ್ ಮುಂತಾದ ವಿಶೇಷ ಕಾನೂನುಗಳ ಅಡಿಯಲ್ಲಿ ಕೆಲವರಿಗೆ ಸಮಿತಿ ವಿನಾಯಿತಿ ನೀಡಿದೆ (ಇದು ಕ್ರಿಮಿನಲ್ ಪ್ರೊಸೀಜರ್ ಸಂಹಿತೆಯ ಅಡಿಯಲ್ಲಿರುವವರಿಗೆ ಹೆಚ್ಚುವರಿಯಾಗಿ ಜಾಮೀನಿನ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ಒದಗಿಸುತ್ತದೆ).

ವರವರ ರಾವ್ ಮತ್ತು ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿರುವ ಹಲವರು ವಿಶೇಷ ಕಾನೂನಿನ ಸಮಿತಿಯ ನಿಗದಿತ ವಿನಾಯಿತಿಯಡಿಯಲ್ಲಿ ಜಾಮೀನು ಪಡೆಯಲು ಸಾಧ್ಯವಾಗಲಿಲ್ಲ.


ಇದನ್ನೂ ಓದಿ: ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...