Homeಮುಖಪುಟವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)" ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆಯುವ ಅಗತ್ಯವಿಲ್ಲ" ಎಂದು ಹೇಳಿದೆ.

- Advertisement -
- Advertisement -

ಕವಿ ಮತ್ತು ರಾಜಕೀಯ ಚಿಂತಕ ವರವಾರ ರಾವ್ ಅವರಿಗೆ 79 ವರ್ಷ ವಯಸ್ಸಾಗಿದ್ದು, ನ್ಯೂರೋಲಾಜಿಕಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ನ್ರೂರೋಲಾಜಿಕಲ್ ಸಮಸ್ಯೆಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ವೈದ್ಯರು ಸೂಚಿಸಿದ್ದಾರೆ. ಮೇ ತಿಂಗಳಲ್ಲಿ ಆರೋಗ್ಯ ಹದಗೆಟ್ಟ ನಂತರ ಅವರನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ಸಾಗಿಸಬೇಕಾಯಿತು.

ಅಂದಿನಿಂದ, ಅವರು ಜೈಲು ಆಸ್ಪತ್ರೆಯಿಂದ ಜೆಜೆ ಸೇಂಟ್ ಜಾರ್ಜ್ ಮತ್ತು ಈಗ ಖಾಸಗಿ ನಾನಾವತಿ ಆಸ್ಪತ್ರೆಗೆ ತೆರಳಿದ್ದಾರೆ.

ಈ ಎಲ್ಲದರ ಹೊರತಾಗಿಯೂ, ಕಳೆದ ವಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)” ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದೆ.

ರಾವ್ ಅವರನ್ನು ವಕೀಲರಾದ ಸುದೀಪ್ ಪಾಸ್ಬೋಲಾ ಮತ್ತು ಆರ್. ಸತ್ಯನಾರಾಯಣನ್ ಪ್ರತಿನಿಧಿಸುತ್ತಿದ್ದಾರೆ. ಇತ್ತೀಚಿನ ಜಾಮೀನು ಅರ್ಜಿಯನ್ನು ಅವರ ಅನಾರೋಗ್ಯದ ಆಧಾರದ ಮೇಲೆ ಹಾಕಲಾಗಿದೆ.

ಬಾಂಬೆ ಹೈಕೋರ್ಟ್‌ಗೆ ತನಿಖಾ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಖಲೇಟ್ ಸಲ್ಲಿಸಿದ 172 ಪುಟಗಳ ಅಫಿಡವಿಟ್‌ನಲ್ಲಿ, ಹಿರಿಯ ಸಾಮಾಜಿಕ ಕಾರ್ಯಕರ್ತ ನ್ಯಾಯಾಲಯದಿಂದ ಜಾಮೀನು ಕೋರಿ ಪರಿಸ್ಥಿತಿಯ ಅನಗತ್ಯ ಲಾಭ ಪಡೆಯುತ್ತಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಮಹಾರಾಷ್ಟ್ರದ ಎಲ್ಗರ್ ಪರಿಷತ್-ಕೊರೆಗಾಂವ್ ಭೀಮಾ ಹಿಂಸಾಚಾರ ಪ್ರಕರಣದಲ್ಲಿ ಪಾತ್ರವಹಿಸಿದ್ದಾರೆಂದು ಆರೋಪಿಸಿ ರಾವ್ ಅವರನ್ನು ಜೂನ್ 2018 ರಲ್ಲಿ ಬಂಧಿಸಿದಾಗಿನಿಂದ ಜೈಲಿನಲ್ಲಿದ್ದಾರೆ.

ವೈದ್ಯಕೀಯ ಆರೈಕೆಯ ಕೊರತೆಯಿಂದಾಗಿ ಜೈಲಿನಲ್ಲಿ ಅವರ ಆರೋಗ್ಯವು ತೀವ್ರವಾಗಿ ಹದಗೆಟ್ಟಿದೆ ಎಂದು ರಾವ್ ಅವರ ಕುಟುಂಬ ಮತ್ತು ಅವರ ವಕೀಲರು ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಎರಡು ಬಾರಿ ಅವರೊಂದಿಗೆ ಮಾತನಾಡಿದ್ದ ಅವರ ಪತ್ನಿ ಹೇಮಲತಾ, ಅವರ ಮಾತು ಸ್ಥಿಮಿತತೆಯನ್ನು ಕಳೆದುಕೊಂಡಿದೆ. ಕುಟುಂಬ ಸದಸ್ಯರನ್ನು ಗುರುತಿಸುತ್ತಿಲ್ಲ ಎಂದು ಹೇಳಿದ್ದಾರೆ.

ರಾವ್ ಜೈಲಿನಲ್ಲಿದ್ದರೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತದೆ ಎಂದು ಅವರ ಕುಟುಂಬ ಆತಂಕ ವ್ಯಕ್ತಪಡಿಸಿದೆ.

ರಾವ್ ಅವರ ಕುಟುಂಬವು ಕಳೆದ ವಾರ ಅವರನ್ನು ಜೆಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದಾಗ ಅವರು ಯಾವುದೇ ಸರಿಯಾದ ವೈದ್ಯಕೀಯ ಆರೈಕೆಯಿಲ್ಲದೆ, ಮಣ್ಣಾದ ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡು ಅದರ ಕುರಿತು ದುಃಖ ತೋಡಿಕೊಂಡಿದ್ದರು.

ಆದರೆ ಎನ್‌ಐಎ, ಇವೆಲ್ಲವೂ ಸ್ವತಃ ಜಾಮೀನು ಪಡೆಯಲು ಆರೋಗ್ಯ ಸ್ಥಿತಿಯ ದುರುಪಯೋಗವಾಗಿದೆ ಎಂದು ಹೇಳಿದೆ.

ಜೈಲಿನಲ್ಲಿ ಅತಿ ಹೆಚ್ಚು ಜನಸಂದಣಿಯನ್ನು ಹೊಂದಿರುವ ಮಹಾರಾಷ್ಟ್ರವು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗಿದೆ ಇಲ್ಲಿಯವರೆಗೆ, ಅಲ್ಲಿ 500 ಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಯುಎಪಿಎ, ಎಂಸಿಒಸಿಎ, ಪಿಎಂಎಲ್‌ಎ, ಎಂಪಿಐಡಿ, ಎನ್‌ಡಿಪಿಎಸ್ ಮುಂತಾದ ವಿಶೇಷ ಕಾನೂನುಗಳ ಅಡಿಯಲ್ಲಿ ಕೆಲವರಿಗೆ ಸಮಿತಿ ವಿನಾಯಿತಿ ನೀಡಿದೆ (ಇದು ಕ್ರಿಮಿನಲ್ ಪ್ರೊಸೀಜರ್ ಸಂಹಿತೆಯ ಅಡಿಯಲ್ಲಿರುವವರಿಗೆ ಹೆಚ್ಚುವರಿಯಾಗಿ ಜಾಮೀನಿನ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ಒದಗಿಸುತ್ತದೆ).

ವರವರ ರಾವ್ ಮತ್ತು ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿರುವ ಹಲವರು ವಿಶೇಷ ಕಾನೂನಿನ ಸಮಿತಿಯ ನಿಗದಿತ ವಿನಾಯಿತಿಯಡಿಯಲ್ಲಿ ಜಾಮೀನು ಪಡೆಯಲು ಸಾಧ್ಯವಾಗಲಿಲ್ಲ.


ಇದನ್ನೂ ಓದಿ: ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...