Homeಕರೋನಾ ತಲ್ಲಣದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ಭಾರತದ ಪ್ರಧಾನ ಮಂತ್ರಿಯ ಅತಿಯಾದ ಆತ್ಮವಿಶ್ವಾಸವು ದೇಶದ ವಿನಾಶಕಾರಿ ಕೋವಿಡ್ ಉಲ್ಬಣಕ್ಕೆ ಕಾರಣವಾಗಿದೆ.

- Advertisement -
- Advertisement -

ಭಾರತದಲ್ಲಿ ಎರಡನೇ ಕೋವಿಡ್ ಸಾಂಕ್ರಾಮಿಕ ಅಲೆ ಅಪ್ಪಳಿಸಿದ್ದು ದೇಶಾದ್ಯಂತ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಕೋವಿಡ್ ಬಂದು 15 ತಿಂಗಳಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸಿದೆ. ಈ ಕುರಿತು ಪ್ರಸಿದ್ಧ ಪತ್ರಿಕೆ ದಿ ಗಾರ್ಡಿಯನ್‌ನ ಏಪ್ರಿಲ್ 24ರ ಸಂಪಾದಕೀಯವನ್ನು ನಾನುಗೌರಿ ಓದುಗರಿಗಾಗಿ ಅನುವಾದಿಸಿ ಪ್ರಕಟಿಸುತ್ತಿದ್ದೇವೆ.

ಅತಿಯಾದ ರಾಜಕೀಯ ಆತ್ಮವಿಶ್ವಾಸವು ಈ ವಾರ ಭಾರತದಲ್ಲಿ ಸಾಂಕ್ರಾಮಿಕದ ವಾಸ್ತವತೆಗೆ ಮುಖಾಮುಖಿಯಾಗಿದೆ. ಮಾರ್ಚ್ ಆರಂಭದಲ್ಲಿ, ನರೇಂದ್ರ ಮೋದಿಯವರ ಹಿಂದೂ ರಾಷ್ಟ್ರೀಯವಾದಿ ಸರ್ಕಾರವು ದೇಶವು ಕೋವಿಡ್‌ನ ಅಂತಿಮ ಆಟದಲ್ಲಿದೆ (‘ಎಂಡ್‌ಗೇಮ್”ನಲ್ಲಿದೆ ) ಎಂದು ಹೇಳಿಕೊಂಡಿತ್ತು. ಆದರೆ ಭಾರತ ಈಗ ಜೀವಂತ ನರಕದಲ್ಲಿದೆ.

ಬಿ 1.617 ಹೆಸರಿನ ಹೊಸ “ದ್ವಿ ರೂಪಾಂತರಿ” (double mutant) ತಳಿಯ ವಿನಾಶಕಾರಿ ಕೊರೋನಾ ವೈರಸ್ ಎರಡನೇ ಅಲೆಯಲ್ಲಿ ಈಗ ಹೊರಹೊಮ್ಮಿದೆ. ಇದರ ಪರಿಣಾಮವಾಗಿ ಆಸ್ಪತ್ರೆಗಳು ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ಬಳಲುತ್ತಿವೆ. ಶವಾಗಾರಗಳು, ಚಿತಾಗಾರಗಳು ಮತ್ತು ಸ್ಮಶಾನಗಳು ತುಂಬಿ ತುಳುಕುತ್ತಿರುವ ಪರಿಣಾಮ ಶವಗಳು ಮನೆಯಲ್ಲಿಯೇ ಕೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸತ್ತವರನ್ನು ಬೀದಿಗಳಲ್ಲಿ ಬಿಡಲಾಗುವ ಅಪಾಯವನ್ನು ಕಂಡುಬಂದಿದೆ.

ಶುಕ್ರವಾರ ಭಾರತವು 3,32,730 ಹೊಸ ಕೋವಿಡ್‌ಸೋಂಕುಗಳನ್ನು ದಾಖಲಿಸಿದೆ, ಇದು ಸತತ ಎರಡನೇ ದಿನವೂ ವಿಶ್ವದಾದ್ಯಂತದ ಪ್ರಕರಣಗಳಲ್ಲಿ ಅತಿ ಹೆಚ್ಚಾಗಿದೆ. ಹಿಂದಿನ 24 ಗಂಟೆಗಳಲ್ಲಿ 2,200 ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ. ಬಹುಪಾಲು ದೇಶಗಳು ಭಾರತದಿಂದ ವಿಮಾನಗಳನ್ನು ನಿಷೇಧಿಸಿವೆ, ಅಲ್ಲಿಗೆ ಪ್ರಯಾಣಿಸುವುದನ್ನು ತಪ್ಪಿಸಲು ಸೂಚಿಸಿವೆ ಅಥವಾ ಸಂದರ್ಶಕರು ವಾಪಸಾಗುವುದನ್ನು ತಡೆಗಟ್ಟುವಂತೆ ಒತ್ತಾಯಿಸಿವೆ.

ಇನ್ನೂ ಆರು ವಾರಗಳ ಹಿಂದೆ, ಜನಸಂಖ್ಯೆಯ ಶೇ.1 ಜನರಿಗೂ ಸಹ ಲಸಿಕೆ ನೀಡದ ಮೋದಿ, (ಈಗ ಅದು ಶೇ. 8ಕ್ಕೆ ಏರಿದೆ) ದೇಶವು “ವಿಶ್ವದ ಔಷಧಾಲಯ” ಎಂದು ಘೋಷಿಸಿದ್ದರು. ಸಾಂಕ್ರಾಮಿಕ ಪೂರ್ವದ ಜೀವನವು ಪುನರಾರಂಭಗೊಳ್ಳಬಹುದೆಂದು ಸಂಕೇತ ನೀಡಿದ್ದರು. ಸಾವಿರಾರು ಜನರು ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಹಾಜರಾದ ನಂತರ ಮತ್ತು ಕುಂಭಮೇಳ ಉತ್ಸವದ ಸಂದರ್ಭದಲ್ಲಿ ಲಕ್ಷಾಂತರ ಹಿಂದೂಗಳು ಗಂಗೆಯಲ್ಲಿ ಸ್ನಾನ ಮಾಡಿದಾಗ ಸೂಪರ್‌ ಸ್ಪ್ರೆಡಿಂಗ್ ಸಂಭವಿಸಿತು.

ಸಾಂಕ್ರಾಮಿಕ ಉಲ್ಬಣಗೊಂಡಾಗ ಡೊನಾಲ್ಡ್ ಟ್ರಂಪ್ ಅವರಂತೆ ಶ್ರೀ ಮೋದಿ ಅವರು ಪ್ರಚಾರವನ್ನು ಬಿಡುವುದಿಲ್ಲ. ಭಾರತವು ಏಪ್ರಿಲ್‌ನಲ್ಲಿ ಐದು ರಾಜ್ಯ ಚುನಾವಣೆಗಳೊಂದಿಗೆ ಮುಂದುವರಿಯಿತು, ಮತ್ತು ಮಾಸ್ಕ್ ಇಲ್ಲದೆ ಶ್ರೀ ಡೋನಾಲ್ಡ್ ಟ್ರಂಪ್ ಅವರಂತೆಯೇ ಮೋದಿ ಕೂಡ ಚುನಾವಣಾ ರ‍್ಯಾಲಿಗಳನ್ನು ನಡೆಸಿದರು. ಏಪ್ರಿಲ್‌ನಲ್ಲಿ 4 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಚುನಾವಣೆಗಳಲ್ಲಿ ಮಾಸ್ಕ್ ಧರಿಸದ ಮೋದಿ ಬೃಹತ್ ಚುನಾವಣಾ ರ‍್ಯಾಲಿಗಳನ್ನು ನಡೆಸಿದರು. ಮೋದಿಯವರ ಭಾರತೀಯ ಅಸಾಧಾರಣವಾದದ ಬ್ರ‍್ಯಾಂಡ್ ತೃಪ್ತಿಯನ್ನು ಬೆಳೆಸಿದೆ. ರಾಷ್ಟ್ರೀಯ ಶ್ರೇಷ್ಠತೆಯ ಕಲ್ಪನೆ, ಊಹೆಯು ಸನ್ನದ್ಧತೆಯ ಕೊರತೆಗೆ ಕಾರಣವಾಗಿದೆ- ಮುಖ್ಯವಾಗಿ ಲಸಿಕೆ ಉತ್ಪಾದನೆಯಲ್ಲಿ ಇದನ್ನು ಕಾಣಬಹುದಾಗಿದೆ.

ಜಾಗತಿಕ ಔಷಧ ತಯಾರಿಕೆಯಲ್ಲಿ ಭಾರತವು ಮುನ್ನೆಲೆಯಲ್ಲಿ ಇರಲು ಪಶ್ಚಿಮವು ಪ್ರೋತ್ಸಾಹಿಸಿತ್ತು, ಆದರೆ ಈ ವಾರ ಜರ್ಮನಿಯ ಚಾನ್ಸೆಲ್ಲರ್ ಏಂಜೆಲಾ ಮರ್ಕೆಲ್ ಇದು ಒಂದು ತಪ್ಪು ನಿರ್ಧಾರವಾಗಿತ್ತೇನೋ ಎಂದಿದ್ದಾರೆ. ಚೀನಾ ಮತ್ತು ಅಮೆರಿಕ ಈಗ ಭಾರತಕ್ಕಿಂತ ಹೆಚ್ಚು ಕೋವಿಡ್ -19 ಲಸಿಕೆಗಳನ್ನು ತಯಾರಿಸುತ್ತಿವೆ, ರಫ್ತು ನಿಯಂತ್ರಣವನ್ನು ಸರಾಗಗೊಳಿಸುವಂತೆ ವಾಷಿಂಗ್ಟನ್‌ಗೆ ಇನ್ನೂ ಮನವರಿಕೆ ಮಾಡಲಾಗದ ಮೋದಿ ಸರ್ಕಾರವು, ಅನಿವಾರ್ಯದಲ್ಲಿ ರಷ್ಯಾದಿಂದ ಲಸಿಕೆಗಳನ್ನು ಆಮದು ಮಾಡಿಕೊಳ್ಳುವ ಒತ್ತಡಕ್ಕೆ ಸಿಲುಕಬೇಕಾಗಿತು.

ಭಾರತದ ಪ್ರಧಾನ ಮಂತ್ರಿ ತಮ್ಮ ಪ್ರವೃತ್ತಿಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಬಳಲುತ್ತಿದ್ದಾರೆ ಮತ್ತು ಪೂಹ್-ಪೂಹ್ (ಹೊಗಳುಭಟ್ಟ) ತಜ್ಞರ ಸಲಹೆಗಳನ್ನು ಆಶ್ರಯಿಸಿದ್ದಾರೆ. ಈ ವಾರ ಕೋವಿಡ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗುವ ಮುನ್ನ ಸರ್ಕಾರಕ್ಕೆ ಸಲಹೆ ನೀಡುವ ‘ಧೈರ್ಯ’ ಮಾಡಿದ ಕಾರಣಕ್ಕೆ ಮೋದಿಯವರ ಸಚಿವರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಮೇಲೆ ಮುಗಿಬಿದ್ದಿದ್ದರು.

ಕಳೆದ ವರ್ಷ, ಮೋದಿ ಭಾರತದ ಶತಕೋಟಿ ಜನರ ಮೇಲೆ ಹಠಾತ್ ಲಾಕ್‌ಡೌನ್ ಹೇರಿದರು. ಪೂರ್ವ ಸೂಚನೆಗಳನ್ನೂ ನೀಡದೇ ಹೀಗೆ ದೇಶವನ್ನು ಸ್ಥಗಿತಗೊಳಿಸಿದ್ದು ದೇಶದ ಉನ್ನತ ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ಸಲಹೆಗೆ ವಿರುದ್ಧವಾಗಿತ್ತು. ಆದರೆ ಮೋದಿಯವರ ನಾಟಕೀಯ ಸನ್ನೆಗಳ ಅಭಿರುಚಿಗೆ ಅದು ಸರಿಹೊಂದಿತ್ತು. ಹೆಚ್ಚಿನ ಪ್ರಮಾಣದ ಯುವ ಜನಸಂಖ್ಯೆಯ ಕಾರಣಕ್ಕೆ ಕೋವಿಡ್ -19 ಕಾರಣಕ್ಕೆ ಮರಣ ಹೊಂದಿದ ಭಾರತೀಯರ ಪ್ರಮಾಣವು ಇತರ ದೇಶಗಳಿಗಿಂತ ಕಡಿಮೆ ಇದೆ.. ಕೋವಿಡ್ ಸಾವುಗಳ ಸಂಖ್ಯೆಯನ್ನು ಕಡಿಮೆ ತೋರಿಸಿದ ಅನುಮಾನಗಳು ಇದ್ದರೂ, ಭಾರತೀಯರು ವೈರಸ್‌ನಿಂದ ಹೆಚ್ಚು ರೋಗನಿರೋಧಕರಾಗಿದ್ದಾರೆ ಎಂಬ ಆಧಾರರಹಿತ ಪ್ರಜ್ಞೆ ಹರಡಿತು. ಮೋದಿಯವರು ಅದನ್ನು ಪ್ರಶ್ನಿಸಲಿಲ್ಲ.

ಮೊದಲ ಅಲೆಯಲ್ಲಿ ಕೋವಿಡ್ ಭಾರತದ ನಗರಗಳ ಮೇಲೆ ದಾಳಿ ನಡೆಸಿತು. ಆದರೆ ಈಗ ಅದು ದೇಶದ ಬಹುಪಾಲು ಜನರು ವಾಸಿಸುವ ಗ್ರಾಮೀಣ ಪ್ರದೇಶಗಳಿಗೆ ಚಲಿಸುತ್ತಿದೆ. ಅನೇಕ ದೇಶಗಳು ಕಠಿಣವಾಗಿ ಅನುಭವಿಸಿದಂತೆ, ಭಾರತದ ಸಾವಿನ ಸಂಖ್ಯೆ ಹೆಚ್ಚಳವನ್ನು ತಪ್ಪಿಸಬಹುದಿತ್ತು. ಆದರೆ ಈಗಿನ ದುರಂತ ಸೊಕ್ಕಿನ ಮತ್ತು ಅಸಮರ್ಥ ಸರ್ಕಾರದ ಫಲಿತಾಂಶವಾಗಿದೆ. ಭಾರತವು ಒಂದು ದೊಡ್ಡ, ಸಂಕೀರ್ಣ ಮತ್ತು ವೈವಿಧ್ಯಮಯ ದೇಶವಾಗಿದ್ದು, ಸಾಮಾನ್ಯ ದಿನಗಳಲ್ಲೇ ಆಡಳಿತ ನಡೆಸುವುದು ಕಷ್ಟಕರ. ಈಗ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅದು ಇನ್ನೂ ಸವಾಲಿನದ್ದು. ಈಗ ಭಾರತವು ಒಂದೇ ಹೊತ್ತಿಗೆ ಕೊರೋನಾ ವೈರಸ್ ಮತ್ತು ಭಯದ ನೆರಳಲ್ಲಿ ಬದುಕುತ್ತಿದೆ. ಜೈವಿಕ ಮತ್ತು ಸಾಮಾಜಿಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜನರ ಭೀತಿಯನ್ನು ತಗ್ಗಿಸಲು ವಿಶ್ವಾಸಾರ್ಹ ಧೈರ್ಯ ಬೇಕು. ಜನರು ಮಾಸ್ಕ್ ಧರಿಸುವ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವ ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಮೋದಿಯವರು ತಾವು ನಿರ್ಮಿಸಿದ ಅವ್ಯವಸ್ಥೆಯನ್ನು ನಿವಾರಿಸಲು ರಾಜ್ಯ ಸರ್ಕಾರಗಳ ಮೇಲೆ ಹೊಣೆ ಹಾಕಿದ್ದಾರೆ. ಅಗಾಧವಾದ ಆರ್ಥಿಕ ಸಂಕಷ್ಟಗಳಿಗೆ ಕಾರಣವಾದ ತಪ್ಪುಗಳನ್ನು ಮೋದಿ ಒಪ್ಪಿಕೊಳ್ಳಬೇಕು ಮತ್ತು ಈಗ ಆ ತಪ್ಪುಗಳನ್ನು ತಿದ್ದುಪಡಿ ಮಾಡಲು ಯತ್ನಿಸಬೇಕು. ನಿರ್ಬಂಧಗಳನ್ನು ಹೇಗೆ ಎತ್ತಿಹಿಡಿಯುವುದು ಎಂಬುದರ ಕುರಿತು ಅವರು ತಜ್ಞರೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಬೇಕು; ಸರ್ಕಾರಿ ವಿತರಣೆ ಜನರನ್ನು ತಲುಪುವಂತೆ ಮಾಡುವ ವಿಧಾನವನ್ನು ಚರ್ಚಿಸಿ ಕಾರ್ಯರೂಪಕ್ಕೆ ತರಬೇಕು. ಏಕತೆ ಅಗತ್ಯವಿರುವ ಈ ಕ್ಲಿಷ್ಟಕರ ಸಂದರ್ಭದಲ್ಲಿ ವಿಭಜಿಸುವ ಪಂಥೀಯ ಸಿದ್ಧಾಂತವನ್ನು ಕೈ ಬಿಡಬೇಕು. ವಿನಾಶಕಾರಿ ಸಾರ್ವಜನಿಕ ಆರೋಗ್ಯ ಫಲಿತಾಂಶಕ್ಕೆ ಕಾರಣವಾದ ಅಸಾಧಾರಣವಾದಿ ದೃಷ್ಟಿಕೋನಗಳೊಂದಿಗೆ ಮುಂದುವರಿದರೆ ಭವಿಷ್ಯದ ಇತಿಹಾಸಕಾರರು ಮೋದಿಯನ್ನು ಕಠಿಣವಾಗಿ ಖಂಡಿಸುತ್ತಾರೆ.


ಇದನ್ನೂ ಓದಿ: ಒಂದು ಬ್ಯಾಕ್ಟೀರಿಯಾ ಭಾರತೀಯರನ್ನು ರಾಜಕೀಯಗೊಳಿಸಿತು, ಒಂದು ವೈರಸ್ ಮೋದಿಯಿಂದ ರಾಜಕೀಯ ಬೆಲೆ ಬೇಡುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೂಹ್-ಪೂಹ್ ರೋಗಿ ಇಡೀ ಭಾರತವನ್ನು ವಿನಾಶದ ಅಂಚಿಗೆ ತಳ್ಳುವ ವರೆಗೆ ನಿಲ್ಲುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...