Homeಮುಖಪುಟದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಮೇಲಿನ ದೌರ್ಜನ್ಯ ಕೇವಲ ನಾಟಕ ಎಂದ ಬಿಜೆಪಿ

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಮೇಲಿನ ದೌರ್ಜನ್ಯ ಕೇವಲ ನಾಟಕ ಎಂದ ಬಿಜೆಪಿ

- Advertisement -
- Advertisement -

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರ ಮೇಲಿನ ದೌರ್ಜನ್ಯವೆಂಬುದು ನಾಟಕವಾಗಿದ್ದು, ದೆಹಲಿ ಪೊಲೀಸರನ್ನು ದೂರಲೆಂದು ಆ ನಾಟಕೀಯ ವಿಡಿಯೋ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸ್ವಾತಿ ಮಲಿವಾಲ್ ಇವೆಲ್ಲವೂ ಬಿಜೆಪಿ ಕೊಳಕು ಸುಳ್ಳುಗಳಾಗಿವೆ, ಇವುಗಳಿಂದ ನಾನು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ “ರಿಯಾಲಿಟಿ ಚೆಕ್‌ಗಾಗಿ” ಬೀದಿಗಿಳಿದಿದ್ದಾಗ ದೆಹಲಿಯ ಏಮ್ಸ್ ಆಸ್ಪತ್ರೆಯ ಬಳಿ ಪಾನಮತ್ತ ಚಾಲಕನೊಬ್ಬ ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಅಶ್ಲೀಲ ಸನ್ನೆ ಮಾಡಿ ಕಿರುಕುಳ ನೀಡಿದ್ದಲ್ಲದೇ, ಅವರನ್ನು ಅಡ್ಡಗಟ್ಟಿ 15 ಮೀಟರ್ ದೂರ ಎಳೆದೊಯ್ದಿದ್ದಾನೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದರು. ಇದೀಗ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಆದರೆ ಈ ಘಟನೆಯೆಲ್ಲವೂ ಸ್ವಾತಿ ಮಲಿವಾಲ್‌ರವರ ನಾಟಕವಾಗಿದೆ. ಆಪ್ ಸರ್ಕಾರ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಬಂಧಿತನು ಆಪ್ ಕಾರ್ಯಕರ್ತನಾಗಿದ್ದಾನೆ. ದೆಹಲಿ ಪೊಲೀಸರಿಗೆ ಮತ್ತು ಆ ಮೂಲಕ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಸ್ವಾತಿ ಮಲಿವಾಲ್ ಯತ್ನಿಸುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ ಆರೋಪಿಸಿದ್ದಾರೆ.

ಎಎಪಿ ಶಾಸಕ ಪ್ರಕಾಶ್ ಜರ್ವಾಲ್ ಅವರೊಂದಿಗೆ ಆರೋಪಿ ಪ್ರಚಾರ ಮಾಡುತ್ತಿರುವ ಫೋಟೋವನ್ನು ಬಿಡುಗಡೆ ಮಾಡಿ, “ಈ ಘಟನೆಯು ದೆಹಲಿಯನ್ನು ಮಹಿಳೆಯರಿಗೆ ಅಸುರಕ್ಷಿತ ನಗರ ಎಂದು ತೋರಿಸುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ದೆಹಲಿಯನ್ನು ದೂಷಿಸಲು ಎಎಪಿಯ ಪಿತೂರಿಯಾಗಿದೆ” ಎಂದಿದ್ದಾರೆ.

ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಸ್ವಾತಿ ಮಲಿವಾಲ್ “ನನ್ನ ಬಗ್ಗೆ ಕೊಳಕು ಸುಳ್ಳುಗಳನ್ನು ಹೇಳಿ ನನ್ನನ್ನು ಹೆದರಿಸುವವರಿಗೆ ಹೇಳುವುದೇನೆಂದರೆ, ಈ ಸಣ್ಣ ಜೀವನದಲ್ಲಿ ತಲೆಯ ಮೇಲೆ ಜವಾಬ್ದಾರಿ ಹಾಕಿಕೊಂಡು ಅನೇಕ ದೊಡ್ಡ ಕೆಲಸಗಳನ್ನು ಮಾಡಿದ್ದೇನೆ. ಅನೇಕ ದಾಳಿಗಳಾದರೂ ನನ್ನ ಕೆಲಸ ನಿಲ್ಲಿಸಲಿಲ್ಲ. ಪ್ರತಿ ಕ್ರೌರ್ಯದಿಂದ ನನ್ನೊಳಗಿನ ಬೆಂಕಿ ಬಲವಾಗುತ್ತಾ ಹೋಯಿತು. ನನ್ನ ಧ್ವನಿಯನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ. ನಾನು ಬದುಕಿರುವವರೆಗೂ ಹೋರಾಡುತ್ತಲೇ ಇರುತ್ತೇನೆ!” ಎಂದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ಸ್ವಾತಿ ಮಲಿವಾಲ್ ಪರ ಮಾತನಾಡಿ, “ಎಎಪಿ ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಮಧ್ಯಪ್ರವೇಶಿಸುವ ಬದಲು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸರಿಪಡಿಸಲು ಕೇಂದ್ರೀಕರಿಸಿ” ಎಂದು ಲೆಫ್ಟಿನೆಂಟ್ ಗರ್ವನರ್‌ಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ ನನಗೇ ರಕ್ಷಣೆ ಇಲ್ಲ: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...