Homeಕರ್ನಾಟಕಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ: ಎಚ್‌ಡಿಕೆ

ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ: ಎಚ್‌ಡಿಕೆ

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ.

- Advertisement -
- Advertisement -

ನಿನ್ನೆ ಅಸಹಜ ಸಾವೀಗೀಡಾಗಿರುವ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿಎಸ್‌ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ತಕ್ಷಣ ಉನ್ನತಮಟ್ಟದ ತನಿಖೆಗೆ ಆದೇಶಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದಿದ್ದಾರೆ.

ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ “ಜಾಗಟೆ” ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ ಎಂದು ಟೀಕಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದಿದ್ದಾರೆ.

ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಕುಮಾರ್‌ ಅಸಹಜ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...