Homeಮುಖಪುಟಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವ ವಿದ್ಯಾಲಯ ಪದವಿ ನೀಡಲು ನಿರಾಕರಿಸಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿವಿಯ 2024ನೇ ಸಾಲಿನ ಘಟಿಕೋತ್ಸವ ಮುಗಿದು ಎರಡು ವಾರಗಳು ಕಳೆದಿದ್ದು, ಆದರೂ ಅಸ್ಮರ್ ಅಸ್ರಾರ್ ಸಫಿ (23) ಎಂಬ ವಿದ್ಯಾರ್ಥಿ ತಾನು ನಾಲ್ಕು ವರ್ಷಗಳ ಕಾಲ ಕಷ್ಟಪಟ್ಟು ಓದಿದ್ದಕ್ಕೆ ಪದವಿ ಸ್ವೀಕರಿಸಲು ಹೆಣಗಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲತಃ ಪಾಕಿಸ್ತಾನದ ಲಾಹೋರಿನವರಾದ ಸಫಿ ಜೊತೆ ಇನ್ನೂ 12 ವಿದ್ಯಾರ್ಥಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವರೆಲ್ಲರೂ ವಿಶ್ವದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಹಾರ್ವರ್ಡ್‌ನಲ್ಲಿ ತಮ್ಮ ವ್ಯಾಸಂಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆದರೆ, ಕನಿಷ್ಠ ಒಂದು ವರ್ಷದವರಿಗೆ ಪದವಿಗಳನ್ನು ನೀಡಲಾಗುವುದಿಲ್ಲ ಎಂದು ಅಲ್ ಜಝೀರಾ ವರದಿ ಹೇಳಿದೆ.

ವಿಶ್ವ ವಿದ್ಯಾನಿಲಯದ ಉನ್ನತ ಆಡಳಿತ ಮಂಡಳಿಯಾದ ಹಾರ್ವರ್ಡ್ ಕಾರ್ಪೊರೇಷನ್, ಕಳೆದ ತಿಂಗಳು ವಿಶ್ವ ವಿದ್ಯಾನಿಲಯದಲ್ಲಿ ಮೂರು ವಾರಗಳ ಕಾಲ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಮೇ 23 ರಂದು ನಡೆದ ಈ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆಯುವುದನ್ನು ನಿಷೇಧಿಸಿತ್ತು.

“ಸಲ್ಲಿಸಿರುವ ಮೇಲ್ಮನವಿಯ ಕುರಿತು ನಿರ್ಧಾರ ಹೊರ ಬೀಳಲು ಕಾಯುತ್ತಿದ್ದೇನೆ” ಎಂದು ಹಾರ್ವರ್ಡ್ ಕಾಲೇಜಿನಲ್ಲಿ ಸಾಮಾಜಿಕ ಅಧ್ಯಯನಗಳು ಮತ್ತು ಜನಾಂಗೀಯತೆ, ವಲಸೆ, ಹಕ್ಕುಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿ 23 ವರ್ಷದ ಸಫಿ ಹೇಳಿದ್ದಾರೆ.

“ನಾನು ರೋಡ್ಸ್ ಸ್ಕಾಲರ್ ಆಗಿದ್ದೇನೆ ಮತ್ತು ನನ್ನ ಹಾರ್ವರ್ಡ್ ಪದವಿಯನ್ನು ಒಂದು ವರ್ಷ ಕಾಲ ತಡೆಹಿಡಿದಿರುವುದರಿಂದ ಆಕ್ಸ್‌ಫರ್ಡ್ ವಿವಿಯಲ್ಲಿ ಮ್ಯಾಟ್ರಿಕ್ಯುಲೇಷನ್ ಮಾಡಬಹುದೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಶ್ರದ್ಧಾ ಜೋಶಿ ಹಾರ್ವರ್ಡ್ ಕಾಲೇಜಿನ ತನ್ನ ಬೋಧಕ ವೃಂದದ ಬೆಂಬಲದ ಹೊರತಾಗಿಯೂ ಇದೇ ಸ್ಥಿತಿಯನ್ನು ಎದುರಿಸುತ್ತಿರುವ ಇನ್ನೋರ್ವ ವಿದ್ಯಾರ್ಥಿನಿಯಾಗಿದ್ದಾರೆ.

“ನಾನು ಮೇಲ್ಮನವಿ ಸಲ್ಲಿಸಿದ್ದು, ವಿವಿಯಿಂದ ಪ್ರತಿಕ್ರಿಯೆ ಬರಲು ಕಾಯುತ್ತಿದ್ದೇನೆ. ನಾವು ತ್ರಿಶಂಕು ಸ್ಥಿತಿಯಲ್ಲಿದ್ದೇವೆ. ಪ್ರಕ್ರಿಯೆಯ ಅಸ್ಪಷ್ಟತೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗೊಂದಲದಲ್ಲಿದ್ದಾರೆ ಮತ್ತು ಮೇಲ್ಮನವಿಗಳಿಗೆ ಟೈಮ್‌ಲೈನ್ ಕೂಡ ಸ್ಪಷ್ಟವಿಲ್ಲ” ಎಂದು ಶ್ರದ್ಧಾ ತಿಳಿಸಿದ್ದಾರೆ.

ಟೆಕ್ಸಾಸ್‌ನಲ್ಲಿ ಹುಟ್ಟಿ ಬೆಳೆದ ಜೋಶಿ ಅವರು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಯೋಜಿಸುತ್ತಿದ್ದರು. ಆದರೆ, ಅವರ ಭವಿಷ್ಯವು ಈಗ ಅನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.

“ಹಾರ್ವರ್ಡ್-ಯುಕೆ ಫೆಲೋಶಿಪ್‌ನೊಂದಿಗೆ ನಾನು ಕ್ಯಾಂಬ್ರಿಡ್ಜ್ ವಿವಿಯನ್ನು ಸೇರಬೇಕಿತ್ತು. ಆದರೆ, ಪದವಿ ಕೈಗೆ ಸಿಗದೆ ನನ್ನ ಸ್ಥಿತಿ ಡೋಲಾಯಮಾನವಾಗಿದೆ. ಪಾರದರ್ಶಕತೆಯ ಕೊರತೆ ಮತ್ತು ಆಡಳಿತದ ಕಳಪೆ ಸಂವಹನದಿಂದಾಗಿ ನಮ್ಮ ಮುಂದಿನ ಹೆಜ್ಜೆಗಳು ಹೇಗಿರಲಿವೆ ಎನ್ನುವುದನ್ನು ಊಹಿಸಲೂ ಕಷ್ಟವಾಗಿದೆ” ಎಂದು ಶ್ರದ್ಧಾ ಅಳಲು ತೋಡಿಕೊಂಡಿದ್ದಾರೆ ಎಂದು ಅಲ್‌ ಜಝೀರಾ ತಿಳಿಸಿದೆ.

ಯುಎಸ್‌ ಇತರ ಶೈಕ್ಷಣಿಕ ಕೇಂದ್ರಗಳಂತೆ ಹಾರ್ವರ್ಡ್ ವಿವಿಯು ಕೂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಿಂದ ಗಮನ ಸೆಳೆದಿದೆ. ಇಲ್ಲಿನ ವಿದ್ಯಾರ್ಥಿಗಳು ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಧ್ವನಿಯೆತ್ತಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಮುಖ್ಯಮಂತ್ರಿ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...