Homeಮುಖಪುಟಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವ ವಿದ್ಯಾಲಯ ಪದವಿ ನೀಡಲು ನಿರಾಕರಿಸಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿವಿಯ 2024ನೇ ಸಾಲಿನ ಘಟಿಕೋತ್ಸವ ಮುಗಿದು ಎರಡು ವಾರಗಳು ಕಳೆದಿದ್ದು, ಆದರೂ ಅಸ್ಮರ್ ಅಸ್ರಾರ್ ಸಫಿ (23) ಎಂಬ ವಿದ್ಯಾರ್ಥಿ ತಾನು ನಾಲ್ಕು ವರ್ಷಗಳ ಕಾಲ ಕಷ್ಟಪಟ್ಟು ಓದಿದ್ದಕ್ಕೆ ಪದವಿ ಸ್ವೀಕರಿಸಲು ಹೆಣಗಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲತಃ ಪಾಕಿಸ್ತಾನದ ಲಾಹೋರಿನವರಾದ ಸಫಿ ಜೊತೆ ಇನ್ನೂ 12 ವಿದ್ಯಾರ್ಥಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವರೆಲ್ಲರೂ ವಿಶ್ವದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಹಾರ್ವರ್ಡ್‌ನಲ್ಲಿ ತಮ್ಮ ವ್ಯಾಸಂಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆದರೆ, ಕನಿಷ್ಠ ಒಂದು ವರ್ಷದವರಿಗೆ ಪದವಿಗಳನ್ನು ನೀಡಲಾಗುವುದಿಲ್ಲ ಎಂದು ಅಲ್ ಜಝೀರಾ ವರದಿ ಹೇಳಿದೆ.

ವಿಶ್ವ ವಿದ್ಯಾನಿಲಯದ ಉನ್ನತ ಆಡಳಿತ ಮಂಡಳಿಯಾದ ಹಾರ್ವರ್ಡ್ ಕಾರ್ಪೊರೇಷನ್, ಕಳೆದ ತಿಂಗಳು ವಿಶ್ವ ವಿದ್ಯಾನಿಲಯದಲ್ಲಿ ಮೂರು ವಾರಗಳ ಕಾಲ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಮೇ 23 ರಂದು ನಡೆದ ಈ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆಯುವುದನ್ನು ನಿಷೇಧಿಸಿತ್ತು.

“ಸಲ್ಲಿಸಿರುವ ಮೇಲ್ಮನವಿಯ ಕುರಿತು ನಿರ್ಧಾರ ಹೊರ ಬೀಳಲು ಕಾಯುತ್ತಿದ್ದೇನೆ” ಎಂದು ಹಾರ್ವರ್ಡ್ ಕಾಲೇಜಿನಲ್ಲಿ ಸಾಮಾಜಿಕ ಅಧ್ಯಯನಗಳು ಮತ್ತು ಜನಾಂಗೀಯತೆ, ವಲಸೆ, ಹಕ್ಕುಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿ 23 ವರ್ಷದ ಸಫಿ ಹೇಳಿದ್ದಾರೆ.

“ನಾನು ರೋಡ್ಸ್ ಸ್ಕಾಲರ್ ಆಗಿದ್ದೇನೆ ಮತ್ತು ನನ್ನ ಹಾರ್ವರ್ಡ್ ಪದವಿಯನ್ನು ಒಂದು ವರ್ಷ ಕಾಲ ತಡೆಹಿಡಿದಿರುವುದರಿಂದ ಆಕ್ಸ್‌ಫರ್ಡ್ ವಿವಿಯಲ್ಲಿ ಮ್ಯಾಟ್ರಿಕ್ಯುಲೇಷನ್ ಮಾಡಬಹುದೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಶ್ರದ್ಧಾ ಜೋಶಿ ಹಾರ್ವರ್ಡ್ ಕಾಲೇಜಿನ ತನ್ನ ಬೋಧಕ ವೃಂದದ ಬೆಂಬಲದ ಹೊರತಾಗಿಯೂ ಇದೇ ಸ್ಥಿತಿಯನ್ನು ಎದುರಿಸುತ್ತಿರುವ ಇನ್ನೋರ್ವ ವಿದ್ಯಾರ್ಥಿನಿಯಾಗಿದ್ದಾರೆ.

“ನಾನು ಮೇಲ್ಮನವಿ ಸಲ್ಲಿಸಿದ್ದು, ವಿವಿಯಿಂದ ಪ್ರತಿಕ್ರಿಯೆ ಬರಲು ಕಾಯುತ್ತಿದ್ದೇನೆ. ನಾವು ತ್ರಿಶಂಕು ಸ್ಥಿತಿಯಲ್ಲಿದ್ದೇವೆ. ಪ್ರಕ್ರಿಯೆಯ ಅಸ್ಪಷ್ಟತೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗೊಂದಲದಲ್ಲಿದ್ದಾರೆ ಮತ್ತು ಮೇಲ್ಮನವಿಗಳಿಗೆ ಟೈಮ್‌ಲೈನ್ ಕೂಡ ಸ್ಪಷ್ಟವಿಲ್ಲ” ಎಂದು ಶ್ರದ್ಧಾ ತಿಳಿಸಿದ್ದಾರೆ.

ಟೆಕ್ಸಾಸ್‌ನಲ್ಲಿ ಹುಟ್ಟಿ ಬೆಳೆದ ಜೋಶಿ ಅವರು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಯೋಜಿಸುತ್ತಿದ್ದರು. ಆದರೆ, ಅವರ ಭವಿಷ್ಯವು ಈಗ ಅನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.

“ಹಾರ್ವರ್ಡ್-ಯುಕೆ ಫೆಲೋಶಿಪ್‌ನೊಂದಿಗೆ ನಾನು ಕ್ಯಾಂಬ್ರಿಡ್ಜ್ ವಿವಿಯನ್ನು ಸೇರಬೇಕಿತ್ತು. ಆದರೆ, ಪದವಿ ಕೈಗೆ ಸಿಗದೆ ನನ್ನ ಸ್ಥಿತಿ ಡೋಲಾಯಮಾನವಾಗಿದೆ. ಪಾರದರ್ಶಕತೆಯ ಕೊರತೆ ಮತ್ತು ಆಡಳಿತದ ಕಳಪೆ ಸಂವಹನದಿಂದಾಗಿ ನಮ್ಮ ಮುಂದಿನ ಹೆಜ್ಜೆಗಳು ಹೇಗಿರಲಿವೆ ಎನ್ನುವುದನ್ನು ಊಹಿಸಲೂ ಕಷ್ಟವಾಗಿದೆ” ಎಂದು ಶ್ರದ್ಧಾ ಅಳಲು ತೋಡಿಕೊಂಡಿದ್ದಾರೆ ಎಂದು ಅಲ್‌ ಜಝೀರಾ ತಿಳಿಸಿದೆ.

ಯುಎಸ್‌ ಇತರ ಶೈಕ್ಷಣಿಕ ಕೇಂದ್ರಗಳಂತೆ ಹಾರ್ವರ್ಡ್ ವಿವಿಯು ಕೂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಿಂದ ಗಮನ ಸೆಳೆದಿದೆ. ಇಲ್ಲಿನ ವಿದ್ಯಾರ್ಥಿಗಳು ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಧ್ವನಿಯೆತ್ತಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಮುಖ್ಯಮಂತ್ರಿ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...