Homeಮುಖಪುಟಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವ ವಿದ್ಯಾಲಯ ಪದವಿ ನೀಡಲು ನಿರಾಕರಿಸಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿವಿಯ 2024ನೇ ಸಾಲಿನ ಘಟಿಕೋತ್ಸವ ಮುಗಿದು ಎರಡು ವಾರಗಳು ಕಳೆದಿದ್ದು, ಆದರೂ ಅಸ್ಮರ್ ಅಸ್ರಾರ್ ಸಫಿ (23) ಎಂಬ ವಿದ್ಯಾರ್ಥಿ ತಾನು ನಾಲ್ಕು ವರ್ಷಗಳ ಕಾಲ ಕಷ್ಟಪಟ್ಟು ಓದಿದ್ದಕ್ಕೆ ಪದವಿ ಸ್ವೀಕರಿಸಲು ಹೆಣಗಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲತಃ ಪಾಕಿಸ್ತಾನದ ಲಾಹೋರಿನವರಾದ ಸಫಿ ಜೊತೆ ಇನ್ನೂ 12 ವಿದ್ಯಾರ್ಥಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವರೆಲ್ಲರೂ ವಿಶ್ವದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಹಾರ್ವರ್ಡ್‌ನಲ್ಲಿ ತಮ್ಮ ವ್ಯಾಸಂಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆದರೆ, ಕನಿಷ್ಠ ಒಂದು ವರ್ಷದವರಿಗೆ ಪದವಿಗಳನ್ನು ನೀಡಲಾಗುವುದಿಲ್ಲ ಎಂದು ಅಲ್ ಜಝೀರಾ ವರದಿ ಹೇಳಿದೆ.

ವಿಶ್ವ ವಿದ್ಯಾನಿಲಯದ ಉನ್ನತ ಆಡಳಿತ ಮಂಡಳಿಯಾದ ಹಾರ್ವರ್ಡ್ ಕಾರ್ಪೊರೇಷನ್, ಕಳೆದ ತಿಂಗಳು ವಿಶ್ವ ವಿದ್ಯಾನಿಲಯದಲ್ಲಿ ಮೂರು ವಾರಗಳ ಕಾಲ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಮೇ 23 ರಂದು ನಡೆದ ಈ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆಯುವುದನ್ನು ನಿಷೇಧಿಸಿತ್ತು.

“ಸಲ್ಲಿಸಿರುವ ಮೇಲ್ಮನವಿಯ ಕುರಿತು ನಿರ್ಧಾರ ಹೊರ ಬೀಳಲು ಕಾಯುತ್ತಿದ್ದೇನೆ” ಎಂದು ಹಾರ್ವರ್ಡ್ ಕಾಲೇಜಿನಲ್ಲಿ ಸಾಮಾಜಿಕ ಅಧ್ಯಯನಗಳು ಮತ್ತು ಜನಾಂಗೀಯತೆ, ವಲಸೆ, ಹಕ್ಕುಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿ 23 ವರ್ಷದ ಸಫಿ ಹೇಳಿದ್ದಾರೆ.

“ನಾನು ರೋಡ್ಸ್ ಸ್ಕಾಲರ್ ಆಗಿದ್ದೇನೆ ಮತ್ತು ನನ್ನ ಹಾರ್ವರ್ಡ್ ಪದವಿಯನ್ನು ಒಂದು ವರ್ಷ ಕಾಲ ತಡೆಹಿಡಿದಿರುವುದರಿಂದ ಆಕ್ಸ್‌ಫರ್ಡ್ ವಿವಿಯಲ್ಲಿ ಮ್ಯಾಟ್ರಿಕ್ಯುಲೇಷನ್ ಮಾಡಬಹುದೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಶ್ರದ್ಧಾ ಜೋಶಿ ಹಾರ್ವರ್ಡ್ ಕಾಲೇಜಿನ ತನ್ನ ಬೋಧಕ ವೃಂದದ ಬೆಂಬಲದ ಹೊರತಾಗಿಯೂ ಇದೇ ಸ್ಥಿತಿಯನ್ನು ಎದುರಿಸುತ್ತಿರುವ ಇನ್ನೋರ್ವ ವಿದ್ಯಾರ್ಥಿನಿಯಾಗಿದ್ದಾರೆ.

“ನಾನು ಮೇಲ್ಮನವಿ ಸಲ್ಲಿಸಿದ್ದು, ವಿವಿಯಿಂದ ಪ್ರತಿಕ್ರಿಯೆ ಬರಲು ಕಾಯುತ್ತಿದ್ದೇನೆ. ನಾವು ತ್ರಿಶಂಕು ಸ್ಥಿತಿಯಲ್ಲಿದ್ದೇವೆ. ಪ್ರಕ್ರಿಯೆಯ ಅಸ್ಪಷ್ಟತೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗೊಂದಲದಲ್ಲಿದ್ದಾರೆ ಮತ್ತು ಮೇಲ್ಮನವಿಗಳಿಗೆ ಟೈಮ್‌ಲೈನ್ ಕೂಡ ಸ್ಪಷ್ಟವಿಲ್ಲ” ಎಂದು ಶ್ರದ್ಧಾ ತಿಳಿಸಿದ್ದಾರೆ.

ಟೆಕ್ಸಾಸ್‌ನಲ್ಲಿ ಹುಟ್ಟಿ ಬೆಳೆದ ಜೋಶಿ ಅವರು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಯೋಜಿಸುತ್ತಿದ್ದರು. ಆದರೆ, ಅವರ ಭವಿಷ್ಯವು ಈಗ ಅನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.

“ಹಾರ್ವರ್ಡ್-ಯುಕೆ ಫೆಲೋಶಿಪ್‌ನೊಂದಿಗೆ ನಾನು ಕ್ಯಾಂಬ್ರಿಡ್ಜ್ ವಿವಿಯನ್ನು ಸೇರಬೇಕಿತ್ತು. ಆದರೆ, ಪದವಿ ಕೈಗೆ ಸಿಗದೆ ನನ್ನ ಸ್ಥಿತಿ ಡೋಲಾಯಮಾನವಾಗಿದೆ. ಪಾರದರ್ಶಕತೆಯ ಕೊರತೆ ಮತ್ತು ಆಡಳಿತದ ಕಳಪೆ ಸಂವಹನದಿಂದಾಗಿ ನಮ್ಮ ಮುಂದಿನ ಹೆಜ್ಜೆಗಳು ಹೇಗಿರಲಿವೆ ಎನ್ನುವುದನ್ನು ಊಹಿಸಲೂ ಕಷ್ಟವಾಗಿದೆ” ಎಂದು ಶ್ರದ್ಧಾ ಅಳಲು ತೋಡಿಕೊಂಡಿದ್ದಾರೆ ಎಂದು ಅಲ್‌ ಜಝೀರಾ ತಿಳಿಸಿದೆ.

ಯುಎಸ್‌ ಇತರ ಶೈಕ್ಷಣಿಕ ಕೇಂದ್ರಗಳಂತೆ ಹಾರ್ವರ್ಡ್ ವಿವಿಯು ಕೂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಿಂದ ಗಮನ ಸೆಳೆದಿದೆ. ಇಲ್ಲಿನ ವಿದ್ಯಾರ್ಥಿಗಳು ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಧ್ವನಿಯೆತ್ತಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಮುಖ್ಯಮಂತ್ರಿ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...