Homeಮುಖಪುಟಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವ ವಿದ್ಯಾಲಯ ಪದವಿ ನೀಡಲು ನಿರಾಕರಿಸಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿವಿಯ 2024ನೇ ಸಾಲಿನ ಘಟಿಕೋತ್ಸವ ಮುಗಿದು ಎರಡು ವಾರಗಳು ಕಳೆದಿದ್ದು, ಆದರೂ ಅಸ್ಮರ್ ಅಸ್ರಾರ್ ಸಫಿ (23) ಎಂಬ ವಿದ್ಯಾರ್ಥಿ ತಾನು ನಾಲ್ಕು ವರ್ಷಗಳ ಕಾಲ ಕಷ್ಟಪಟ್ಟು ಓದಿದ್ದಕ್ಕೆ ಪದವಿ ಸ್ವೀಕರಿಸಲು ಹೆಣಗಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲತಃ ಪಾಕಿಸ್ತಾನದ ಲಾಹೋರಿನವರಾದ ಸಫಿ ಜೊತೆ ಇನ್ನೂ 12 ವಿದ್ಯಾರ್ಥಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವರೆಲ್ಲರೂ ವಿಶ್ವದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಹಾರ್ವರ್ಡ್‌ನಲ್ಲಿ ತಮ್ಮ ವ್ಯಾಸಂಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆದರೆ, ಕನಿಷ್ಠ ಒಂದು ವರ್ಷದವರಿಗೆ ಪದವಿಗಳನ್ನು ನೀಡಲಾಗುವುದಿಲ್ಲ ಎಂದು ಅಲ್ ಜಝೀರಾ ವರದಿ ಹೇಳಿದೆ.

ವಿಶ್ವ ವಿದ್ಯಾನಿಲಯದ ಉನ್ನತ ಆಡಳಿತ ಮಂಡಳಿಯಾದ ಹಾರ್ವರ್ಡ್ ಕಾರ್ಪೊರೇಷನ್, ಕಳೆದ ತಿಂಗಳು ವಿಶ್ವ ವಿದ್ಯಾನಿಲಯದಲ್ಲಿ ಮೂರು ವಾರಗಳ ಕಾಲ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಮೇ 23 ರಂದು ನಡೆದ ಈ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆಯುವುದನ್ನು ನಿಷೇಧಿಸಿತ್ತು.

“ಸಲ್ಲಿಸಿರುವ ಮೇಲ್ಮನವಿಯ ಕುರಿತು ನಿರ್ಧಾರ ಹೊರ ಬೀಳಲು ಕಾಯುತ್ತಿದ್ದೇನೆ” ಎಂದು ಹಾರ್ವರ್ಡ್ ಕಾಲೇಜಿನಲ್ಲಿ ಸಾಮಾಜಿಕ ಅಧ್ಯಯನಗಳು ಮತ್ತು ಜನಾಂಗೀಯತೆ, ವಲಸೆ, ಹಕ್ಕುಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿ 23 ವರ್ಷದ ಸಫಿ ಹೇಳಿದ್ದಾರೆ.

“ನಾನು ರೋಡ್ಸ್ ಸ್ಕಾಲರ್ ಆಗಿದ್ದೇನೆ ಮತ್ತು ನನ್ನ ಹಾರ್ವರ್ಡ್ ಪದವಿಯನ್ನು ಒಂದು ವರ್ಷ ಕಾಲ ತಡೆಹಿಡಿದಿರುವುದರಿಂದ ಆಕ್ಸ್‌ಫರ್ಡ್ ವಿವಿಯಲ್ಲಿ ಮ್ಯಾಟ್ರಿಕ್ಯುಲೇಷನ್ ಮಾಡಬಹುದೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಶ್ರದ್ಧಾ ಜೋಶಿ ಹಾರ್ವರ್ಡ್ ಕಾಲೇಜಿನ ತನ್ನ ಬೋಧಕ ವೃಂದದ ಬೆಂಬಲದ ಹೊರತಾಗಿಯೂ ಇದೇ ಸ್ಥಿತಿಯನ್ನು ಎದುರಿಸುತ್ತಿರುವ ಇನ್ನೋರ್ವ ವಿದ್ಯಾರ್ಥಿನಿಯಾಗಿದ್ದಾರೆ.

“ನಾನು ಮೇಲ್ಮನವಿ ಸಲ್ಲಿಸಿದ್ದು, ವಿವಿಯಿಂದ ಪ್ರತಿಕ್ರಿಯೆ ಬರಲು ಕಾಯುತ್ತಿದ್ದೇನೆ. ನಾವು ತ್ರಿಶಂಕು ಸ್ಥಿತಿಯಲ್ಲಿದ್ದೇವೆ. ಪ್ರಕ್ರಿಯೆಯ ಅಸ್ಪಷ್ಟತೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗೊಂದಲದಲ್ಲಿದ್ದಾರೆ ಮತ್ತು ಮೇಲ್ಮನವಿಗಳಿಗೆ ಟೈಮ್‌ಲೈನ್ ಕೂಡ ಸ್ಪಷ್ಟವಿಲ್ಲ” ಎಂದು ಶ್ರದ್ಧಾ ತಿಳಿಸಿದ್ದಾರೆ.

ಟೆಕ್ಸಾಸ್‌ನಲ್ಲಿ ಹುಟ್ಟಿ ಬೆಳೆದ ಜೋಶಿ ಅವರು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಯೋಜಿಸುತ್ತಿದ್ದರು. ಆದರೆ, ಅವರ ಭವಿಷ್ಯವು ಈಗ ಅನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.

“ಹಾರ್ವರ್ಡ್-ಯುಕೆ ಫೆಲೋಶಿಪ್‌ನೊಂದಿಗೆ ನಾನು ಕ್ಯಾಂಬ್ರಿಡ್ಜ್ ವಿವಿಯನ್ನು ಸೇರಬೇಕಿತ್ತು. ಆದರೆ, ಪದವಿ ಕೈಗೆ ಸಿಗದೆ ನನ್ನ ಸ್ಥಿತಿ ಡೋಲಾಯಮಾನವಾಗಿದೆ. ಪಾರದರ್ಶಕತೆಯ ಕೊರತೆ ಮತ್ತು ಆಡಳಿತದ ಕಳಪೆ ಸಂವಹನದಿಂದಾಗಿ ನಮ್ಮ ಮುಂದಿನ ಹೆಜ್ಜೆಗಳು ಹೇಗಿರಲಿವೆ ಎನ್ನುವುದನ್ನು ಊಹಿಸಲೂ ಕಷ್ಟವಾಗಿದೆ” ಎಂದು ಶ್ರದ್ಧಾ ಅಳಲು ತೋಡಿಕೊಂಡಿದ್ದಾರೆ ಎಂದು ಅಲ್‌ ಜಝೀರಾ ತಿಳಿಸಿದೆ.

ಯುಎಸ್‌ ಇತರ ಶೈಕ್ಷಣಿಕ ಕೇಂದ್ರಗಳಂತೆ ಹಾರ್ವರ್ಡ್ ವಿವಿಯು ಕೂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಿಂದ ಗಮನ ಸೆಳೆದಿದೆ. ಇಲ್ಲಿನ ವಿದ್ಯಾರ್ಥಿಗಳು ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಧ್ವನಿಯೆತ್ತಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಮುಖ್ಯಮಂತ್ರಿ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...