Homeಕರ್ನಾಟಕಸಾಮಾಜಿಕ ಮಾಧ್ಯಮದಲ್ಲಿ '#AmulGoback, #SaveKMF' ಹ್ಯಾಶ್‌ಟ್ಯಾಗ್‌ ಟ್ರೆಂಡ್

ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

- Advertisement -
- Advertisement -

ನಂದಿನಿ ಹಾಲು ಉತ್ಪನ್ನಗಳ ಜೊತೆ ಕರ್ನಾಟಕದ ಜನರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಇತ್ತಿಚೆಗೆ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಮೊಸರು ಬದಲಿಗೆ ಅಮುಲ್ ಹಾಲು ಮೊಸರು ಮಾರಾಟ ಮಾಡಲಾಗುತ್ತಿದೆ. ಕರ್ನಾಟಕ ಹಾಲು ಒಕ್ಕೂಟವನ್ನು (ಕೆಎಂಎಫ್) ದುರ್ಬಲಗೊಳಿಸಲು ಅಮುಲ್‌ ಉತ್ಪನ್ನಗಳನ್ನು ಮಾರುಕಟ್ಟೆಗೆ ಹೇರಳವಾಗಿ ಬಿಡಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಿವಾಸಿಗಳು ಸ್ಥಳೀಯ ಸಹಕಾರಕ್ಕೆ ಬೆಂಬಲ ವ್ಯಕ್ತಪಡಿಸಲು ”#AmulGoback” ಮತ್ತು ”#SaveKMF” ನಂತಹ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.

”ಕೆಎಂಎಫ್ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅಮುಲ್ ಸಹಕಾರ ಸಂಘಗಳ ಅಲಿಖಿತ ನಿಯಮಗಳನ್ನು ಉಲ್ಲಂಘಿಸಿ “ಹಳಸಿದ ಹಾಲು” ಮಾರಾಟ ಮಾಡುವ ಮೂಲಕ ಪರಭಕ್ಷಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ” ಎಂದು ಜನರು ಆರೋಪಿಸಿದ್ದಾರೆ.

ದೇಶದಲ್ಲೇ ಎರಡನೇ ಅತಿ ದೊಡ್ಡ ಹಾಲು ಸಂಗ್ರಾಹಕ ಸಂಸ್ಥೆಯಾಗಿರುವ ಕೆಎಂಎಫ್ ನಂದಿನಿ ಟೋನ್ಡ್ ಹಾಲನ್ನು ಲೀಟರ್‌ಗೆ 40 ರೂ.ಗೆ ಮಾರಾಟ ಮಾಡುತ್ತಿದ್ದರೆ, ಅಮುಲ್ ತನ್ನ ಟೋನ್ಡ್ ಹಾಲನ್ನು ಲೀಟರ್‌ಗೆ 54 ರೂ. ಮಾರಾಟ ಮಾಡಲಾಗುತ್ತಿದೆ ಇದು ಜನರಿಗೂ ಹೊರೆಯಾಗಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ”ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ ಕನ್ನಡಿಗರೇ ಎಚ್ಚರ…!!” ಎಂದಿದ್ದಾರೆ.

”ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

”ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ” ಎಂದು ಆರೋಪ ಮಾಡಿದ್ದಾರೆ.

”ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ರಾಜ್ಯ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ” ಎಂದು ಟೀಕಿಸಿದ್ದಾರೆ.

”ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

”ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ” ಎಂದು ಹೇಳಿದ್ದಾರೆ.

”ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಹೊರಟಿದೆ” ಎಂದು ಕಿಡಿಕಾರಿದ್ದಾರೆ.

ಜನತಾ ದಳ (ಜಾತ್ಯತೀತ) ಕೂಡ ಕೆಎಂಎಫ್ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು, ”ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ?” ಎಂದು ಪ್ರಶ್ನಿಸಿದೆ.

”ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಮೊದಲ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು ಡಿಸೆಂಬರ್ 30, 2022 ರಂದು ”ಅಮುಲ್ ಮತ್ತು ಕೆಎಂಎಫ್ ಒಟ್ಟಾಗಿ ಕರ್ನಾಟಕದ ಪ್ರತಿ ಹಳ್ಳಿಯಲ್ಲಿ ಕೆಲಸ ಮಾಡುತ್ತವೆ” ಎಂದು ಘೋಷಿಸಿದರು.

ಅಮಿತ್ ಶಾ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳು ಮತ್ತು ರೈತರ ಗುಂಪುಗಳು ಮಾತ್ರವಲ್ಲದೆ ಕರ್ನಾಟಕದ ಸಾಮಾನ್ಯ ಜನರಿಂದಲೂ ವಿರೋಧ ವ್ಯಕ್ತವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...